Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂವಿಧಾನದ ಮೇಲೆ ಗೌರವವಿಲ್ಲದಿದ್ದರೆ...

ಸಂವಿಧಾನದ ಮೇಲೆ ಗೌರವವಿಲ್ಲದಿದ್ದರೆ ರಾಜಕಾರಣಿಯಾಗಲು ಅರ್ಹರಲ್ಲ, ವಿರೋಧಿಗಳು ದೇಶಭಕ್ತರೆನಿಸಲಾರರು: ಸಿದ್ದರಾಮಯ್ಯ

‘ವಸಂತ ವಿನ್ಯಾಸ’ ಪುಸ್ತಕ ಬಿಡುಗಡೆ

17 Dec 2022 10:31 PM IST
share
ಸಂವಿಧಾನದ ಮೇಲೆ ಗೌರವವಿಲ್ಲದಿದ್ದರೆ ರಾಜಕಾರಣಿಯಾಗಲು ಅರ್ಹರಲ್ಲ, ವಿರೋಧಿಗಳು ದೇಶಭಕ್ತರೆನಿಸಲಾರರು: ಸಿದ್ದರಾಮಯ್ಯ
‘ವಸಂತ ವಿನ್ಯಾಸ’ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ‘ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಧರ್ಮಶಾಸ್ತ್ರವಿದ್ದಂತೆ. ಸಂವಿಧಾನದ ಮೇಲೆ ಗೌರವವಿಲ್ಲದಿದ್ದರೆ ರಾಜಕಾರಣಿಯಾಗಲು ಅರ್ಹರಲ್ಲ. ಸಂವಿಧಾನ ವಿರೋಧಿಗಳು ದೇಶಭಕ್ತರೆನಿಸಲಾರರು’ ಎಂದು ಮಾಜಿ ಸಿಎಂ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅವರು ಶನಿವಾರ ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜೈ ಪ್ರಕಾಶನ ಸಂಸ್ಥೆ ಹೊರತಂದ ಲೇಖಕ ಅರವಿಂದ ಚೊಕ್ಕಾಡಿ ಬರೆದ ಮಾಜಿ ಶಾಸಕ ಕೆ. ವಸಂತ ಬಂಗೇರರ ವ್ಯಕ್ತಿತ್ವ ಚಿತ್ರಣದ ‘ವಸಂತ ವಿನ್ಯಾಸ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

‘ರಾಜಕೀಯ ವ್ಯಕ್ತಿಗಳು ಜಾತಿ ಧರ್ಮ ಮೀರಿದ ವ್ಯಕ್ತಿತ್ವ ಹೊಂದಿರಬೇಕು. ಸಂವಿಧಾನದ ಆಧಾರದಲ್ಲಿ ಆಯ್ಕೆಯಾಗುವ ಅವರಿಗೆ ಎಲ್ಲರೂ ಸಮಾನರು.  ನಮ್ಮ ಧರ್ಮದ ಬಗ್ಗೆ ನಿಷ್ಠೆ ಇರಬೇಕು. ಆದರೆ ಇನ್ನೊಂದು ಧರ್ಮವನ್ನು ವಿರೋಧಿಸಕೂಡದು’ ಎಂದರು.

‘ಕೆ. ವಸಂತ ಬಂಗೇರರು  5 ಬಾರಿ ಶಾಸಕರಾದರೂ ತನ್ನ ಸ್ವಾರ್ಥಕ್ಕಾಗಿ ಏನೂ ಕೇಳಿದವರಲ್ಲ. ಅವರು ಜನಪರವಾದ ಕೆಲಸಕ್ಕಾಗಿ ಸರ್ಕಾರದ ಮುಂದೆ ಬರುತ್ತಿದ್ದರು. ಜಾತಿ ಧರ್ಮ ಮೀರಿ ಜನರ ಸೇವೆಯನ್ನೇ ತನ್ನ ರಾಜಕಾರಣದ ಭಾಗ ಎಂದು ಭಾವಿಸಿಕೊಂಡು ದುಡಿಯುತ್ತಿದ್ದ ಅಪರೂಪದ ರಾಜಕಾರಣಿ ಅವರು’ ಎಂದು ಸಿದ್ದರಾಮಯ್ಯ ಹೇಳಿದರು.

ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಪುಸ್ತಕದ ಪರಿಚಯ ಮಾಡಿ ಮಾತನಾಡಿ, ‘ ಕೆ. ವಸಂತ ಬಂಗೇರರು ಆಸ್ತಿವಂತರಾಗಿದ್ದವರು ಜನಸೇವೆಯ ತುಡಿತದಿಂದ ಇದ್ದದ್ದೆಲ್ಲ ಕಳೆದುಕೊಂಡಿದ್ದಾರೆ. ಜನ ಸೇವೆಯ ಕಾಯಕವನ್ನು ತನ್ನ ಬದುಕಿನ ಧರ್ಮವೆಂದು ಭಾವಿಸಿಕೊಂಡು ಅದರಂತೆ ನಡೆಯುತ್ತಿರುವ ಸಜ್ಜನ ರಾಜಕಾರಣಿಯಾಗಿದ್ದಾರೆ. ಅವರೊಳಗಿನ ಸಿಟ್ಟು ಕ್ಷಣಿಕವಾದುದು. ಆದರೆ ಅಂತಃಕರಣದೊಳಗಿನ ಮನಸ್ಸು ವಿಶೇಷವಾದುದು’ ಎಂದರು.

ಕೆ. ವಸಂತ ಬಂಗೇರ ಮಾತನಾಡಿ, ‘ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ಬಂದ ಸಂದರ್ಭ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರನ್ನು ತಾಲ್ಲೂಕಿಗೆ ಕರೆಸಿಕೊಂಡು ಅವರಿಗೆ ಕಾಯಿಲೆಯ ಪರಿಚಯ ಮಾಡಿಸಿ ಪರಿಹಾರ ತರಿಸಿಕೊಂಡಿದ್ದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಸುಮಾರು 2000 ಕೋಟಿಗಿಂತ ಅಧಿಕ ಅನುದಾನ ತಾಲ್ಲೂಕಿಗೆ ನೀಡಿದ್ದರು. ಆದರೆ ಇಂದು ಅದೆಲ್ಲವನ್ನು ನಾನು ತಾಲ್ಲೂಕಿಗೆ ತಂದುಕೊಂಡ ಅನುದಾನ ಎಂದು ಈಗಿನ ಶಾಸಕರು ಮಾಧ್ಯಮದ ಮುಂದೆ ಹೇಳಿಕೊಳ್ಳುತ್ತಿದ್ದಾರೆ’ ಎಂದರು.

ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ರಾಜೇಶ್ವರಿ ಚೇತನ್ ಶುಭ ಹಾರೈಸಿದರು.

ವೇದಿಕೆಯಲ್ಲಿ ಕೆ.ವಸಂತ ಬಂಗೇರರ ಪತ್ನಿ ಸುಜಿತಾ ವಿ ಬಂಗೇರ ಇದ್ದರು.

ಲೇಖಕ ಅರವಿಂದ ಚೊಕ್ಕಾಡಿ ದಂಪತಿಯನ್ನು, ಕೆ. ವಸಂತ ಬಂಗೇರ ದಂಪತಿಯನ್ನು ಗೌರವಿಸಲಾಯಿತು. ಶ್ರೀ ಗುರುದೇವ ಕಾಲೇಜಿನಲ್ಲಿ ಕರಾಟೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪದ್ಮನಾಭ ಮಾಣಿಂಜ ಸ್ವಾಗತಿಸಿದರು. ಅರವಿಂದ ಚೊಕ್ಕಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕೆ. ವಸಂತ ಬಂಗೇರ ವಿಶಿಷ್ಟ ವ್ಯಕ್ತಿತ್ವದ ರಾಜಕಾರಣಿ. ಅವರ ವ್ಯಕ್ತಿತ್ವ ಇಡೀ ಸಮಾಜಕ್ಕೆ ಅನಾವರಣವಾಗಬೇಕು. ನಾನು, ಯಡಿಯೂರಪ್ಪ ಮತ್ತು ವಸಂತ ಬಂಗೇರ ಏಕಕಾಲಕ್ಕೆ ವಿಧಾನ ಸಭೆಗೆ ಪ್ರವೇಶ ಮಾಡಿದವರು. ಬಂಗೇರರಲ್ಲಿ ಸಿಟ್ಟು, ಅನುಕಂಪ, ಕರುಣೆ ಎಲ್ಲವೂ ಇದೆ. 5 ಬಾರಿ ಶಾಸಕರಾದ ಅವರು ಮಂತ್ರಿಯಾಗುವ ಎಲ್ಲಾ ಅರ್ಹತೆಯನ್ನು ಹೊಂದಿದ್ದರು ಎಂದ ಸಿದ್ದರಾಮಯ್ಯ ಮನಸ್ಸು ಮತ್ತು ಆರೋಗ್ಯ ಚೆನ್ನಾಗಿದ್ದರೆ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಚಿಂತನೆ ಮಾಡಿ ವಸಂತ ಬಂಗೇರರಿಗೆ ಸೂಚಿಸಿದರು.

share
Next Story
X