Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ʼಎಲ್ಲರಿಗೂ ಒಂದೇ ಅಳತೆ ಎಂಬ ಧೋರಣೆ...

ʼಎಲ್ಲರಿಗೂ ಒಂದೇ ಅಳತೆ ಎಂಬ ಧೋರಣೆ ಸರಿಯಲ್ಲʼ: ಜೈವಿಕ ವೈವಿಧ್ಯತೆ ಸಮಾವೇಶದಲ್ಲಿ ಭಾರತ ಹೇಳಿಕೆ

17 Dec 2022 11:57 PM IST
share
ʼಎಲ್ಲರಿಗೂ ಒಂದೇ ಅಳತೆ ಎಂಬ ಧೋರಣೆ ಸರಿಯಲ್ಲʼ: ಜೈವಿಕ ವೈವಿಧ್ಯತೆ ಸಮಾವೇಶದಲ್ಲಿ ಭಾರತ ಹೇಳಿಕೆ

ಮಾಂಟ್ರಿಯಲ್: ವಿಶ್ವವು ಜಾಗತಿಕ ಜೀವವೈವಿಧ್ಯ ಚೌಕಟ್ಟಿನೆಡೆ ಸಾಗುತ್ತಿರುವಾಗ ‘ಎಲ್ಲರಿಗೂ ಒಂದೇ ಅಳತೆ ಸರಿಹೊಂದುತ್ತದೆ’ ಎಂಬ ಅಭಿವೃದ್ಧಿ ಹೊಂದಿದ ದೇಶಗಳ ಧೋರಣೆ ಖಂಡಿತಾ ಸ್ವೀಕಾರಾರ್ಹವಲ್ಲ ಎಂದು ಭಾರತ ಒತ್ತಿಹೇಳಿದೆ.

ಕೆನಡಾದ ಮಾಂಟ್ರಿಯಲ್ ನಲ್ಲಿ ವಿಶ್ವಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಜೈವಿಕ ವೈವಿಧ್ಯತೆಯ ಸಮಾವೇಶದಲ್ಲಿ ಮಾತನಾಡಿದ ಭಾರತದ ಪರಿಸರ, ಹವಾಮಾನ ಬದಲಾವಣೆ ಮತ್ತು ಅರಣ್ಯ ಇಲಾಖೆ ಸಚಿವ ಭೂಪೇಂದ್ರ ಯಾದವ್ ‘ದುರ್ಬಲ ವರ್ಗದವರಿಗೆ ಅಗತ್ಯವಾದ ಬೆಂಬಲವನ್ನು ಸಬ್ಸಿಡಿ ಎಂದು ಕರೆಯಲಾಗುವುದಿಲ್ಲ ಮತ್ತು ಇದನ್ನು ರದ್ದುಪಡಿಸಲಾಗದು. ಕೀಟನಾಶಕಗಳ ಕಡಿತಕ್ಕೆ ಸಂಖ್ಯಾತ್ಮಕ ಜಾಗತಿಕ ಗುರಿಯು ಅನಗತ್ಯವಾಗಿದೆ ಮತ್ತು ಅದನ್ನು ನಿರ್ಧರಿಸಲು ದೇಶಗಳಿಗೆ ಬಿಡಬೇಕು’ ಎಂದು ಹೇಳಿದರು. 

ಜಾಗತಿಕ ಜೀವ ವೈವಿಧ್ಯ ಚೌಕಟ್ಟನ್ನು ವೈಜ್ಞಾನಿಕವಾಗಿ ಮತ್ತು ಸಮಾನತೆಯ ಬೆಳಕಿನಲ್ಲಿ ರೂಪಿಸಬೇಕು ಮತ್ತು ಜೀವವೈವಿಧ್ಯತೆಯ ಸಮಾವೇಶದಲ್ಲಿ ಒದಗಿಸಿದಂತೆ ತಮ್ಮ ಸಂಪನ್ಮೂಲಗಳ ಮೇಲೆ ರಾಷ್ಟ್ರಗಳ ಸಾರ್ವಭೌಮ ಹಕ್ಕನ್ನು ರೂಪಿಸಬೇಕು. ಅಭಿವೃದ್ಧಿ ಹೊಂದಿದ ದೇಶಗಳು ತಮ್ಮ ಐತಿಹಾಸಿಕ, ಅಸಮಾನ ಹೊರಸೂಸುವಿಕೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಜವಾಬ್ದಾರಿಗೆ ಅನುಗುಣವಾಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಯಾದವ್ ಪ್ರತಿಪಾದಿಸಿದರು.

ಅಭಿವೃದ್ಧಿ ಹೊಂದಿದ ದೇಶಗಳು ಮತ್ತು ಭಾರತದಂತಹ ಉದಯೋನ್ಮುಖ ಆರ್ಥಿಕತೆಗಳ ನಡುವಿನ ಭಿನ್ನಾಭಿಪ್ರಾಯಗಳು 22 ಗುರಿಗಳನ್ನು ಹೊಂದಿರುವ ಜೈವಿಕ ವೈವಿಧ್ಯತೆಯ ಚೌಕಟ್ಟಿನ ಕರಡು ನಿರ್ಣಯ ಅಂಗೀಕಾರದ ಬಗೆಗಿನ ಚರ್ಚೆಗೆ ಅಡ್ಡಿಯಾಗಿದೆ. ಮಹಾತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಬೇಕಿದ್ದರೆ ಅನುದಾನದ ಹೊಂದಾಣಿಕೆಯ ವಿಧಾನಗಳನ್ನು ರೂಪಿಸಬೇಕು ಎಂದು ಭಾರತ ಆಗ್ರಹಿಸಿದೆ. ಜೈವಿಕ ವೈವಿಧ್ಯತೆ ಸಮಾವೇಶದ ಸೆಕ್ಷನ್ 20 ಮತ್ತು 21ರಡಿ ನೂತನ ಕಾರ್ಯವಿಧಾನವನ್ನು ಭಾರತ ಬೆಂಬಲಿಸಿದೆ.

ʼ2030ರೊಳಗೆ 30% ಭೂಮಿ ಮತ್ತು 30% ಸಾಗರವನ್ನು ರಕ್ಷಿಸಬೇಕೆಂದು ಆತಿಥೇಯ ಕೆನಡಾ ಸೇರಿದಂತೆ ಅಭಿವೃದ್ಧಿ ಹೊಂದಿದ ದೇಶಗಳು ಬಯಸುತ್ತಿವೆ. ಈ ಗುರಿಸಾಧನೆಗೆ ಇತರ ದೇಶಗಳನ್ನು ಒತ್ತಾಯಿಸುವುದನ್ನು ನಾವು ಮುಂದುವರಿಸಲಿದ್ದೇವೆ. ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಸಬ್ಸಿಡಿಗಳನ್ನು ತೆಗೆದು ಹಾಕುವ ಪ್ರಸ್ತಾಪವನ್ನು ಭಾರತ ವಿರೋಧಿಸುತ್ತದೆ’ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೊ ಹೇಳಿದ್ದಾರೆ.

share
Next Story
X