ದರ್ಶನ್ ಮೇಲೆ ಚಪ್ಪಲಿ ಎಸೆತ: ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು. ಡಿ.19: ಜನವರಿಯಲ್ಲಿ ತೆರೆ ಕಾಣಲಿರುವ ‘ಕ್ರಾಂತಿ’ ಚಿತ್ರದ ಪ್ರಚಾರ ಹಾಗೂ ಹಾಡು ಬಿಡುಗಡೆಗೆ ಚಿತ್ರತಂಡದೊಂದಿಗೆ ರವಿವಾರ ಸಂಜೆ ನಗರಕ್ಕೆ ಬಂದಿದ್ದ ನಟ ದರ್ಶನ್ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದು, ಈ ಘಟನೆಗೆ ಸಂಬಂಧಿಸಿ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, '' ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ'' ಎಂದು ಹೇಳಿದ್ದಾರೆ.
ರವಿವಾರ ಸಂಜೆ ‘ಕ್ರಾಂತಿ’ ಚಿತ್ರದ ‘ಬೊಂಬೆ.. ಬೊಂಬೆ’ ಹಾಡು ಬಿಡುಗಡೆಗೆ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದಲ್ಲಿ ತೆರೆದ ಲಾರಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ವೇದಿಕೆ ಮೇಲೆ ನಟಿ ರಚಿತಾ ರಾಮ್ ಚಿತ್ರದ ಕುರಿತು ಮಾತನಾಡುತ್ತಿದ್ದಾಗ ಯಾರೋ ಕಿಡಿಗೇಡಿ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
— DrShivaRajkumar (@NimmaShivanna) December 19, 2022
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ
ನಿಮ್ಮ
ಶಿವಣ್ಣ pic.twitter.com/34eJfpdmKk
ಕಲಾವಿದನಿಗೆ ಏಳು ಬೀಳು ಸಹಜ. ಸನ್ಮಾನ ಅವಮಾನಗಳು ಬರುತ್ತವೆ, ಆದರೆ ಅಭಿಮಾನಿ ಅಭಿಮಾನ ಹಂಚುವವ ಆಗಿರಬೇಕೇ ಹೊರತು ಅಪಮಾನ ಮಾಡೋದು ಸಲ್ಲ. ಅಭಿಮಾನಿಗಳನ್ನು ದೇವರಿಗೆ ಹೋಲಿಸಿದ ನೆಲ ನಮ್ಮದು@dasadarshan ನಿಮ್ಮೊಂದಿಗೆ ನಾವು
— A Sharadhaa (@sharadasrinidhi) December 19, 2022
#DBoss #Hosapete #WestandWithDarshan @Dcompany171 pic.twitter.com/0461TDTy3C