Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರಟಗೆರೆ: ಶವ ಸಂಸ್ಕಾರಕ್ಕೆ ಜಾಗದ...

ಕೊರಟಗೆರೆ: ಶವ ಸಂಸ್ಕಾರಕ್ಕೆ ಜಾಗದ ಕೊರತೆ; ಗ್ರಾ.ಪಂ ಎದುರು ಶವವಿಟ್ಟು ಪ್ರತಿಭಟನೆ, ಆಕ್ರೋಶ

19 Dec 2022 9:10 PM IST
share
ಕೊರಟಗೆರೆ: ಶವ ಸಂಸ್ಕಾರಕ್ಕೆ ಜಾಗದ ಕೊರತೆ; ಗ್ರಾ.ಪಂ ಎದುರು ಶವವಿಟ್ಟು ಪ್ರತಿಭಟನೆ, ಆಕ್ರೋಶ

ತುಮಕೂರು, ಡಿ,19: ಶವ ಸಂಸ್ಕಾರಕ್ಕೆ ಜಾಗವಿಲ್ಲದೇ ವೃದ್ಧೆಯ ಶವವಿಟ್ಟು ಕುಟುಂಬಸ್ಥರು ಗ್ರಾಮ ಪಂಚಾಯತ್ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿ, ಆಕ್ರೋಶ ಹೊರ ಹಾಕಿರುವ ಘಟನೆ  ಕೊರಟಗೆರೆ ತಾಲೂಕು ಇರಕಸಂದ್ರ ಕಾಲನಿಯಲ್ಲಿ ನಡೆದಿದೆ. 

ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರಕಸಂದ್ರ ಕಾಲನಿಯ ವೆಂಕಟಮ್ಮ (80) ವರ್ಷ ಸಾವನ್ನಪ್ಪಿದರು. ಇವರ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ, ಕಳೆದ 25 ಗಂಟೆಗಳಿಂದ ಶವವನ್ನು ಮನೆಯಲ್ಲಿಯೇ ಇಟ್ಟು ದಿಕ್ಕು ಕಾಣದೇ ಪರದಾಡುತ್ತಿದ್ದಾರೆನ್ನಲಾಗಿದೆ. 

'ಇರಕಸಂದ್ರ ಕಾಲನಿಯಲ್ಲಿ ಸುಮಾರು ನಲವತ್ತಕ್ಕೂ ಹೆಚ್ಚು ಕುಟುಂಬಗಳಿದ್ದು, ಒಬ್ಬರಿಗೂ ಭೂಮಿ ಇಲ್ಲ. ಈ ಹಿಂದೆ ಯಾರಾದರು ಸತ್ತರೆ ಗ್ರಾಮದ ಕೆರೆ ಅಂಗಳದಲ್ಲೋ,ಇಲ್ಲ ರಸ್ತೆ ಬದಿಯಲ್ಲೋ ಮಣ್ಣು ಮಾಡುತ್ತಿದ್ದರು, ಕಳೆದ ನಾಲ್ಕೈದು ವರ್ಷಗಳಿಂದ ಚನ್ನಾಗಿ ಮಳೆಯಾಗುತ್ತಿದ್ದು, ಕೆರೆ,ಕಟ್ಟೆಗಳು ತುಂಬಿರುವ ಹಿನ್ನೆಲೆಯಲ್ಲಿ ಮಣ್ಣಿಗೆ ಅವಕಾಶವಿಲ್ಲ.ಗುಡ್ಡದಲ್ಲಿ ಮಣ್ಣು ಮಾಡಲು ಜಮೀನಿನವರು ಬೇಲಿ ನಿರ್ಮಿಸಿಕೊಂಡಿರುವ ಕಾರಣ ಹೋಗಲು ಆಗುತ್ತಿಲ್ಲ.ಹೀಗಾಗಿ ಶವ ಸಂಸ್ಕಾರಕ್ಕೆ ಜಾಗ ನೀಡುವಂತೆ ಗ್ರಾಮ ಪಂಚಾಯತ್ ಸದಸ್ಯರು,ಅಧಿಕಾರಿಗಳನ್ನು ಕೇಳಿದರೆ, ಅವರಿಂದಲೂ ಸಮರ್ಪಕ ಉತ್ತರವಿಲ್ಲ. ಹಾಗಾಗಿ ಶವವನ್ನು ಗ್ರಾ.ಪಂ ಮುಂದೆ ಇಟ್ಟು ಪ್ರತಿಭಟಿಸುವುದಾಗಿ' ಇರಕಸಂದ್ರ ಕಾಲನಿಯ ಮುಖಂಡರು ಹಾಗು ಗ್ರಾಮಸ್ಥರು ತಿಳಿಸಿದ್ದಾರೆ. 

ಹತ್ತಾರು ವರ್ಷಗಳಿಂದ ಸ್ಮಶಾನಕ್ಕಾಗಿ ಗ್ರಾಮಸ್ಥರು ಮನವಿ ಮಾಡಿದ್ದರೂ ತಲೆ ಕೊಳ್ಳದ ಅಧಿಕಾರಿಗಳು,ಸ್ಮಶಾನಕ್ಕಾಗಿ ಒಂದು ಎಕರೆ ಭೂಮಿ ಮಂಜೂರು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಸದರಿ ಜಮೀನು ಸಂಪೂರ್ಣ ಕಲ್ಲು ಬಂಡೆಯಾಗಿದ್ದು, ಇಲ್ಲಿ ಶವ ಸಂಸ್ಕಾರ ಸಾಧ್ಯವಿಲ್ಲ. ಅಧಿಕಾರಿಗಳು ಸೂಕ್ತ ಜಾಗ ತೋರಿಸುವವರೆಗೂ ಶವವನ್ನು ಗ್ರಾ.ಪಂ ಮುಂದೆ ಇಡುವುದಾಗಿ ಮೃತರ ಮಗಳಾದ ಪಟ್ಟಮ್ಮ, ಸಂಬಂಧಿಕರಾದ ರಾಮಕೃಷ್ಣಯ್ಯ, ಗಂಗಮ್ಮ ತಿಳಿಸಿದ್ದಾರೆ.

share
Next Story
X