Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಂಸ್ಕೃತಿಕ ‘ಜಾಂಬೂರಿ’ಗೆ ದೇಣಿಗೆ ನೀಡಲು...

ಸಾಂಸ್ಕೃತಿಕ ‘ಜಾಂಬೂರಿ’ಗೆ ದೇಣಿಗೆ ನೀಡಲು ಸಂಸದ ನಳಿನ್ ಕರೆ

19 Dec 2022 9:11 PM IST
share
ಸಾಂಸ್ಕೃತಿಕ ‘ಜಾಂಬೂರಿ’ಗೆ ದೇಣಿಗೆ ನೀಡಲು ಸಂಸದ ನಳಿನ್ ಕರೆ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಕೀರ್ಣದ ಆವರಣದಲ್ಲಿ ಡಿ.21ರಿಂದ 27ರವರೆಗೆ ನಡೆಯಲಿರುವ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಜಿಲ್ಲೆಯ ಎಲ್ಲಾ ಸರಕಾರಿ, ಸರಕಾರೇತರ ಉದ್ದಿಮೆಗಳು, ಕೈಗಾರಿಕೆಗಳು, ವಿವಿಧ ಸಂಸ್ಥೆಗಳು ಉದಾರ ಮನಸ್ಸಿನಿಂದ ಧನ ಸಹಾಯ ಮಾಡುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್, ಪ್ರವಾಹ ಸೇರಿದಂತೆ ಹಲವಾರು ಸಂಕಷ್ಟದ ಸಮಯದಲ್ಲಿ ಜಿಲ್ಲೆಯ ಸರಕಾರಿ, ಸರಕಾರೇತರ ಉದ್ದಿಮೆಗಳು ಹಾಗೂ ವಿವಿಧ ಸಂಸ್ಥೆಗಳು ಜಿಲ್ಲಾಡಳಿತಕ್ಕೆ ಸಹಾಯ ಹಸ್ತ ಚಾಚಿವೆ. ಇದೇ ಪ್ರಪ್ರಥಮ ಬಾರಿಗೆ ದೇಶದಲ್ಲಿ ಆಯೋಜಿಸಲಾಗಿರುವ ಈ ಸಾಂಸ್ಕೃತಿಕ ಜಾಂಬೂರಿಗೆ 40 ಕೋ.ರೂ.ವೆಚ್ಚವಾಗುವ ಸಾಧ್ಯತೆಯಿದೆ. ರಾಜ್ಯ ಸರಕಾರವು 10 ಕೋ.ರೂ. ಅನುದಾನ ಬಿಡುಗಡೆ ಮಾಡಿದೆ. ಅದನ್ನು ಹೊರತುಪಡಿಸಿದಂತೆ ಜಿಲ್ಲೆಯಲ್ಲಿರುವ ಕೈಗಾರಿಕೆಗಳು, ಕಾರ್ಖಾನೆಗಳು, ಉದ್ದಿಮೆಗಳು ಹಾಗೂ ಹಲವಾರು ಸಂಸ್ಥೆಗಳು ಸಿಎಸ್‌ಆರ್ ನಿಧಿಯಿಂದ ಧನಸಹಾಯ ಮಾಡುವಂತೆ ಮನವಿ ಮಾಡಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಡಾ. ವಿವೇಕ್ ಆಳ್ವಾ ಮಾತನಾಡಿ, ಸರಕಾರದಿಂದ 10 ಕೋ.ರೂ.ಹಾಗೂ ವಿದ್ಯಾರ್ಥಿಗಳ ನೋಂದಣಿಯಿಂದ 6 ಕೋ.ರೂ. ಸಂಗ್ರಹವಾಗಿದೆ. ಉಟೋಪಚಾರಕ್ಕೆ 11 ಕೋ.ರೂ. ಖರ್ಚಾಗುವ ಸಾಧ್ಯತೆಯಿದೆ. ಜಿಲ್ಲೆಯ ಎಲ್ಲಾ ಕಂಪನಿಗಳು, ಕೈಗಾರಿಕೆಗಳು, ಉದ್ಯಮಿಗಳು ಹಾಗೂ ವಿವಿಧ ಸಂಸ್ಥೆಗಳು ಉದಾರ ಮನಸ್ಸಿನಿಂದ ನೆರವು ನೀಡಿ ಸಹಕರಿಸಬೇಕು ಎಂದರು.

ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮಾತನಾಡಿ ಅಂತರಾಷ್ಟ್ರೀಯ ಜಾಂಬೂರಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಆಹಾರ ಮೇಳ, ಪುಸ್ತಕ ಮೇಳ, ಕೃಷಿ ಮೇಳ ಸಹಿತ ವಿವಿಧ ಮೇಳಗಳ ಸಿದ್ಧತೆಗಳು ಅಂತಿಮ ಹಂತದಲ್ಲಿದೆ. 50,000 ಮಕ್ಕಳು ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸಲಿದ್ದು ಅವರಿಗೆ ವಸತಿ, ಊಟೋಪಚಾರದ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತಿದೆ, ಪ್ರತಿದಿನ ಅವರೊಂದಿಗೆ 50 ಸಾವಿರ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಉಪಸ್ಥಿತರಿದ್ದರು.

ಮೂಡುಬಿದರೆಯಲ್ಲಿ ನಡೆಯಲಿರುವ ಸಾಂಸ್ಕೃತಿಕ ಜಾಂಬೂರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಗ್ರಾಪಂಗಳಿಂದ ಸಂಗ್ರಹಿಸಿದ ದೇಣಿಗೆ ಮೊತ್ತ 15 ಲಕ್ಷ ರೂ.ವನ್ನು ಸೋಮವಾರ ದ.ಕ.ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದ.ಕ.ಜಿಪಂ ಸಿಇಒ ಡಾ. ಕುಮಾರ್ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಡಾ. ವಿವೇಕ್ ಆಳ್ವಾ ಅವರಿಗೆ ಹಸ್ತಾಂತರಿಸಿದರು.

share
Next Story
X