Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರದ ವಿರುದ್ಧ ದಿಲ್ಲಿಯಲ್ಲಿ ಬೃಹತ್‌...

ಸರಕಾರದ ವಿರುದ್ಧ ದಿಲ್ಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಆರೆಸ್ಸೆಸ್ ಅಂಗಸಂಸ್ಥೆ

ಬೇಡಿಕೆ ಈಡೇರದಿದ್ದರೆ ಸರ್ಕಾರಕ್ಕೆ ತೊಂದರೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಬಿಕೆಎಸ್‌

19 Dec 2022 10:28 PM IST
share
ಸರಕಾರದ ವಿರುದ್ಧ ದಿಲ್ಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಆರೆಸ್ಸೆಸ್ ಅಂಗಸಂಸ್ಥೆ
ಬೇಡಿಕೆ ಈಡೇರದಿದ್ದರೆ ಸರ್ಕಾರಕ್ಕೆ ತೊಂದರೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಬಿಕೆಎಸ್‌

ಹೊಸದಿಲ್ಲಿ: ಕೃಷಿ ಸರಕುಗಳ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಆರ್‌ಎಸ್‌ಎಸ್  ರೈತ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಬ್ಯಾನರ್ ಅಡಿಯಲ್ಲಿ ಸಾವಿರಾರು ರೈತರು ಸೋಮವಾರ ದಿಲ್ಲಿಯಲ್ಲಿ ಮೆರವಣಿಗೆ ನಡೆಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಸಿದ್ದಾರೆ.

ತೀವ್ರ ಚಳಿಯ ನಡುವೆಯೂ ರೈತರು ಪಂಜಾಬ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳ ರೈತರು ಟ್ರ್ಯಾಕ್ಟರ್‌ಗಳು, ಮೋಟಾರ್‌ಸೈಕಲ್‌ಗಳು ಮತ್ತು ಖಾಸಗಿ ಬಸ್‌ಗಳಲ್ಲಿ ದಿಲ್ಲಿಗೆ ತಲುಪಿ ಅಲ್ಲಿನ ರಾಮಲೀಲಾದಲ್ಲಿ ನಡೆದ ‘ಕಿಸಾನ್ ಗರ್ಜನ’ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.  

ಕೃಷಿ ಚಟುವಟಿಕೆಗಳ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯಬೇಕು, ಪಿಎಂ-ಕಿಸಾನ್ ಯೋಜನೆಯಡಿ ಒದಗಿಸಲಾದ ಆದಾಯ ಬೆಂಬಲವನ್ನು ಹೆಚ್ಚಿಸಬೇಕು, ತಳೀಯವಾಗಿ ಮಾರ್ಪಡಿಸಿದ (ಜಿಎಂ) ಬೆಳೆಗಳ ವಾಣಿಜ್ಯ ಉತ್ಪಾದನೆಗೆ ಅನುಮತಿಯನ್ನು ರದ್ದುಗೊಳಿಸಬೇಕು ಮತ್ತು ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.  

 ಸಕಾಲದಲ್ಲಿ ರೈತರ ಬೇಡಿಕೆಗೆ ಕಿವಿಗೊಡದಿದ್ದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತೊಂದರೆ ಎದುರಿಸಬೇಕಾಗುತ್ತದೆ ಎಂದು ಬಿಕೆಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

"ಸರ್ಕಾರವು ರೈತರ ಆದಾಯವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತು, ಆದರೆ ಇದು ಇದುವರೆಗೂ ಈಡೇರಲಿಲ್ಲ, ರೈತರು ಭಿಕ್ಷುಕರಲ್ಲ, ಅವರ ಬೆಳೆಗಳಿಗೆ ಲಾಭದಾಯಕ ಬೆಲೆ ಪಡೆಯುವ ಹಕ್ಕಿದೆ" ಎಂದು ಬಿಕೆಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹಿನಿ ಮೋಹನ್ ಹೇಳಿದರು.

ಸರಕಾರ ಸಕಾಲದಲ್ಲಿ ಎಚ್ಚೆತ್ತುಕೊಳ್ಳದಿದ್ದಲ್ಲಿ ಜಗತ್ತಿನ ಅತಿ ದೊಡ್ಡ ರೈತ ಸಂಘಟನೆ ಘರ್ಜಿಸಲಿದೆ ಎಂದು ಮೋಹನ್ ಎಚ್ಚರಿಸಿದರು.

ಕೃಷಿ ಯಂತ್ರೋಪಕರಣಗಳು ಮತ್ತು ಕೀಟನಾಶಕಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಬೇಕು ಎಂದು ಮಧ್ಯಪ್ರದೇಶದ ಇಂದೋರ್‌ನ ನರೇಂದ್ರ ಪಾಟಿದಾರ್ ಹೇಳಿದ್ದಾರೆ.

“ಇನ್ಪುಟ್ ವೆಚ್ಚ ಮತ್ತು ಹಣದುಬ್ಬರ ಏರಿಕೆಯಿಂದ ನಮಗೆ ಯಾವುದೇ ಲಾಭವಿಲ್ಲ, ಸರ್ಕಾರ ನಮ್ಮ ಸಮಸ್ಯೆಗಳತ್ತ ಗಮನ ಹರಿಸಬೇಕು. ಹೈನುಗಾರಿಕೆ ಮೇಲೂ ಜಿಎಸ್ಟಿ ಹೇರಬಾರದು. ಪ್ರಸ್ತುತ ಪರಿಸ್ಥಿತಿ ಯಾರಾದರೂ 6,000 ಅಥವಾ 12,000 ರೂ.ಗಳಲ್ಲಿ ಕುಟುಂಬವನ್ನು ಹೇಗೆ ನಡೆಸುತ್ತಾರೆ?" ಅವರು ಹೇಳಿದರು.

ಮೂರು ತಿಂಗಳೊಳಗೆ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ರೈತರು ಪಿಟಿಐಗೆ ತಿಳಿಸಿದರು.

"ಕೃಷಿ ಯಂತ್ರೋಪಕರಣಗಳು, ಕೀಟನಾಶಕಗಳು ಮತ್ತು ರಸಗೊಬ್ಬರಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಬೇಕು. ಯಾವುದೇ ಕಾರಣವಿಲ್ಲದೆ ಹೈನುಗಾರಿಕೆಯ ಮೇಲೆ ಐದು ಶೇಕಡಾ ತೆರಿಗೆಯನ್ನು ವಿಧಿಸಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೂ. 6,000 ನೀಡುವುದು ರೈತರಿಗೆ ಅಗೌರವ. ಇದನ್ನು ಕನಿಷ್ಠ 15,000 ರೂ.ಗೆ ಏರಿಸಬೇಕೆಂದು "ಮಧ್ಯಪ್ರದೇಶದ ಮತ್ತೊಬ್ಬ ರೈತ ದಿಲೀಪ್ ಕುಮಾರ್ ಹೇಳಿದರು.

ಮಹಾರಾಷ್ಟ್ರದ ರಾಯಗಡದ ಪ್ರಮೋದ್ ಮಾತನಾಡಿ, “ಸರ್ಕಾರ ರೈತರ ಮೇಲೆ ಜಿಎಸ್‌ಟಿ ಹೇರುತ್ತದೆ ಮತ್ತು ಕಂಪನಿಗಳಿಗೆ ಸಬ್ಸಿಡಿ ನೀಡುತ್ತದೆ. ಬೀಜಗಳ ಮೇಲೂ ಜಿಎಸ್‌ಟಿ ವಿಧಿಸುತ್ತಾರೆ, ಏನಾದರೂ ಮಾಡಬೇಕು. ಅವರು ನೀಡುವ ಪಿಂಚಣಿ ಒಂದು ತಮಾಷೆಯಾಗಿದೆ. ಕೇವಲ 6,000 ರೂ.ಗಳಿಂದ ಕುಟುಂಬವನ್ನು ಹೇಗೆ ನಿರ್ವಹಿಸುವುದು? (ಕೇಂದ್ರ ಕೃಷಿ ಸಚಿವ) ನರೇಂದ್ರ ತೋಮರ್ ಇದನ್ನು 12,000 ರೂ.ಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಅದು ಕೂಡ ಸಾಕಾಗುವುದಿಲ್ಲ" ಎಂದು ಹೇಳಿದರು.

ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಕಳೆದ ಎರಡು ಕಂತುಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಎಂದು ಸುರೇಂದ್ರ ಸಿಂಗ್ ಪಂಜಾಬ್‌ನ ಫಿರೋಜ್‌ಪುರ್ ಹೇಳಿದ್ದಾರೆ.

"ರೈತರು ಕೂಡ ನುರಿತ ಕಾರ್ಮಿಕರಾಗಿದ್ದು, ಕನಿಷ್ಠ ನಮಗೆ ಹೆಚ್ಚಿನ ಗೌರವವನ್ನು ನೀಡಬೇಕು" ಎಂದು ಅವರು ಹೇಳಿದರು.

ಕೆಲವು ಬೇಡಿಕೆಗಳನ್ನು ಈಡೇರಿಸಲಾಗಿದೆ, ಆದರೆ ರಾಜ್ಯ ಚುನಾವಣೆಗೆ ಮುನ್ನ ಭರವಸೆ ನೀಡಿದರೂ ಪ್ರಾಥಮಿಕ ಬೇಡಿಕೆಗಳನ್ನು ಪರಿಗಣಿಸಿಲ್ಲ ಎಂದು ಗುಜರಾತ್‌ನ ಮೂಲದ ಕಿಶೋರ್ ಪಟೇಲ್ ಹೇಳಿದ್ದಾರೆ.

ದಿಲ್ಲಿಗೆ ಬರುವ ಮೊದಲು ನಾಲ್ಕು ತಿಂಗಳ ಕಾಲ ದೇಶಾದ್ಯಂತ 560 ಜಿಲ್ಲೆಗಳ 60,000 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ನಡೆಸಿದೆ ಎಂದು ಬಿಕೆಎಸ್ ಹೇಳಿದೆ. ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲಿಯೇ ಸುಮಾರು 20,000 ಪಾದಯಾತ್ರೆಗಳು, 13,000 ಸೈಕಲ್ ಪ್ರವಾಸಗಳು ಮತ್ತು 18,000 ಸಭೆಗಳನ್ನು ಆಯೋಜಿಸಲಾಗಿದೆ ಎಂದು ಬಿಕೆಎಸ್‌ ಮೂಲಗಳು ಹೇಳಿಕೊಂಡಿದೆ.

share
Next Story
X