Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದಾಖಲಾತಿಯ ಕಾಲಹರಣದಿಂದ ತಾಯಿ, ಅವಳಿ...

ದಾಖಲಾತಿಯ ಕಾಲಹರಣದಿಂದ ತಾಯಿ, ಅವಳಿ ಶಿಶುಗಳು ಸಾವು: ಲೋಕಾಯುಕ್ತ ತನಿಖಾ ತಂಡದಿಂದ ವರದಿ ಸಲ್ಲಿಕೆ

ಜಿ.ಮಹಾಂತೇಶ್ಜಿ.ಮಹಾಂತೇಶ್20 Dec 2022 9:07 AM IST
share
ದಾಖಲಾತಿಯ ಕಾಲಹರಣದಿಂದ ತಾಯಿ, ಅವಳಿ ಶಿಶುಗಳು ಸಾವು: ಲೋಕಾಯುಕ್ತ ತನಿಖಾ ತಂಡದಿಂದ ವರದಿ ಸಲ್ಲಿಕೆ

ಬೆಂಗಳೂರು: ತಾಯಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲ ಎಂದು ತುಮಕೂರಿನ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು ಮತ್ತು ಪ್ರಾಥಮಿಕ ಚಿಕಿತ್ಸೆ ನೀಡದೆಯೇ ದಾಖಲಾತಿಗಳಿಗಾಗಿ ಕಾಲಹರಣ ಮಾಡಿದ್ದರಿಂದಲೇ ಹೆರಿಗೆ ನೋವಿನಿಂದ ಬಳಲುತ್ತಿದ್ದ ಅನಾಥ ಮಹಿಳೆ ಮತ್ತು ಅವಳಿ ಶಿಶುಗಳು ಮೃತಪಟ್ಟಿವೆ ಎಂದು ಲೋಕಾಯುಕ್ತ ತನಿಖಾ ತಂಡ ವರದಿ ಸಲ್ಲಿಸಿದೆ.

ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಯ ಅಮಾನವೀಯತೆಯೂ ಬಹಿರಂಗವಾಗಿದೆ. ಅಮಾನವೀಯತೆಯಿಂದ ನಡೆದುಕೊಂಡ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಕರ್ತವ್ಯಲೋಪ ಮತ್ತು ದುರ್ನಡತೆ  ಆರೋಪದ ಮೇರೆಗೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು  ಕೈತೊಳೆದುಕೊಂಡಿದ್ದಾರೆ ಎಂದೂ ವರದಿಯಲ್ಲಿವಿವರಿಸಲಾಗಿದೆ.

ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ನಡೆದ ಈ ಅಮಾನವೀಯ ಪ್ರಕರಣ ಕುರಿತು ತನಿಖೆ ನಡೆಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ಮತ್ತಿತರರು ಬರೆದಿದ್ದ ಪತ್ರವನ್ನಾಧಿಕಾರಿಸಿ ತನಿಖೆ ಕೈಗೊಂಡಿದ್ದ ಲೋಕಾಯುಕ್ತ ಸಂಸ್ಥೆಯು ಈ ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ನ್ಯೂನತೆಗಳನ್ನು ಹೊರಗೆಡವಿದೆ. ಲೋಕಾಯುಕ್ತ ತನಿಖಾ ತಂಡ ಸಲ್ಲಿಸಿರುವ ತನಿಖಾ ವರದಿಯು ''ಣhe-ಜಿiಟe.iಟಿ''ಗೆ ಲಭ್ಯವಾಗಿದೆ.

 ಜಿಲ್ಲಾಸ್ಪತ್ರೆಗೆ ಕಸ್ತೂರಿ ಅವರು 2022ರ ನವಂಬರ್ 2ರ ರಾತ್ರಿ 9:30 ಗಂಟೆಗೆ ಚಿಕಿತ್ಸೆಗೆಂದು ಬಂದಿದ್ದು ಮತ್ತು ಚಿಕಿತ್ಸೆ ಪಡೆಯದೇ ವಾಪಸ್ ಹೋಗಿರುವ ಬಗ್ಗೆ ಲೋಕಾಯುಕ್ತ ತನಿಖಾ ತಂಡವು ಆಸ್ಪತ್ರೆಯ ಸಿ.ಸಿ.ಟಿವಿ ಕ್ಯಾಮರಾ ಮತ್ತು ದಾಖಲಾತಿಗಳನ್ನು ಪರಿಶೀಲಿಸಿರುವುದು ವರದಿಯಿಂದ ಗೊತ್ತಾಗಿದೆ.

ತನಿಖಾಧಿಕಾರಿ ನೀಡಿರುವ ಅಭಿಪ್ರಾಯವಿದು: ‘ತುಂಬು ಗರ್ಭಿಣಿ ಕಸ್ತೂರಿ ಅವರು 2022ರ ನ.2ರಂದು ರಾತ್ರಿ 9:30ಕ್ಕೆ ಹೊಟ್ಟೆ ನೋವು ಎಂದು ಜಿಲ್ಲಾಸ್ಪತ್ರೆಯ ಹೆರಿಗೆವಾರ್ಡ್‌ಗೆ ಹೋಗಿ ಅಲ್ಲಿದ್ದ ಡಾ. ರೀನಾಷರಿ, ಸ್ಟಾಫ್ ನರ್ಸ್ ಯಶೋಧ, ಸವಿತಾ, ದಿವ್ಯಭಾರತಿ, ವೇದಾವತಿ ಇವರನ್ನು ಚಿಕಿತ್ಸೆ ನೀಡುವಂತೆ ಕೋರಿಕೊಂಡರೂ ಸಹ ಇವರು ತುರ್ತು ಪರಿಸ್ಥಿತಿಯಲ್ಲಿ ಇಲ್ಲಸಲ್ಲದ ದಾಖಲಾತಿಗಳನ್ನು ಕೇಳಿ ಕಾಲಹರಣ ಮಾಡಿದ್ದರು’ ಎಂದು ವರದಿಯಲ್ಲಿ ವಿವರಿಸಲಾಗಿದೆ.

‘ಕಸ್ತೂರಿ ಅವರು ಮನನೊಂದು ಆಸ್ಪತ್ರೆಯಿಂದ ಹೊರಕ್ಕೆ ಬಂದು ದಿಕ್ಕು ತೋಚದೇ ಹಾಗೂ ತನ್ನ ಹತ್ತಿರ ಹಣ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೇ ಇರುವುದರಿಂದ ವಾಪಸ್ ತನ್ನ ವಾಸದ ಮನೆಗೆ ಹೋಗಿದ್ದಾರೆ. 2022ರ ನ.2ರಂದು ರಾತ್ರಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಗಂಡು ಮಗು ಮೃತಳ ಮರ್ಮಾಂಗದಿಂದ ಅರ್ಧ ಹೊರಬಂದು ತೀವ್ರ ರಕ್ತಸ್ರಾವವಾಗಿ ಪ್ರಸವ ವೇದನೆ ತಾಳಲಾರದೇ ತಾಯಿ, ಮಗು ಮೃತಪಟ್ಟಿರುತ್ತಾರೆ’ ಎಂದು ವರದಿಯಲ್ಲಿವಿವರಿಸಲಾಗಿದೆ.

‘ ಕಸ್ತೂರಿ ಅವರಿಗೆ ಸುಮಾರು 6-7 ವರ್ಷದ ಶಂಕರಿ ಎಂಬ ಒಂದು ಹೆಣ್ಣುಮಗುವಿದ್ದು, ಈಗ ಆ ಹೆಣ್ಣುಮಗು ಅನಾಥೆಯಾಗಿದೆ. ಡಾ.ಉಷಾ, ಡಾ.ರೀನಾಷರಿ, ಸ್ಟಾಫ್ ನರ್ಸ್ ಯಶೋಧ, ಸವಿತಾ, ದಿವ್ಯಭಾರತಿ, ವೇದಾವತಿ ಅವರು ಕಸ್ತೂರಿ ಅವರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿರುತ್ತಾರೆ. ಆದ್ದರಿಂದ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು,’ ಎಂದು ತನಿಖಾಧಿಕಾರಿ ರವೀಶ್ ಸಿ.ಆರ್. ವರದಿಯಲ್ಲಿ ಶಿಫಾರಸು ಮಾಡಿದ್ದಾರೆ.

‘ತುಮಕೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಡಾ. ಉಷಾ, ಯಶೋಧ ಬಿ.ವೈ., ಸವಿತಾ, ದಿವ್ಯಭಾರತಿ, ಶುಶ್ರೂಧಿಕಾರಿಗಳನ್ನು ಕರ್ತವ್ಯಲೋಪ ಹಾಗೂ ದುರ್ನಡತೆ  ತೋರಿದ್ದಾರೆ ಎಂಬ ಕಾರಣದಿಂದ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಸುಮ್ಮನಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಪ್ರಾಥಮಿಕ ಚಿಕಿತ್ಸೆ ನೀಡಿರಲಿಲ್ಲ’

‘ಮೃತ ಗರ್ಭಿಣಿ ಕಸ್ತೂರಿ ಅವರು ಹೊಟ್ಟೆ ನೋವು ಎಂದು 2022ರ ನವೆಂಬರ್ 2ರ ರಾತ್ರಿ 9:30 ರ ಸಮಯದಲ್ಲಿ ಹೆರಿಗೆ ವಾರ್ಡ್‌ಗೆ ಹೋಗಿ ಡಾ. ರೀನಾಷರಿ ಅವರನ್ನು ಮತ್ತು ಸ್ಟಾಫ್ ನಸ್‌ರ್ಗಳನ್ನು ಚಿಕಿತ್ಸೆ ನೀಡಬೇಕು ಎಂದು ಕೋರಿದ್ದರು. ಡಾ.ರೀನಾಷರಿ ಮತ್ತು ಸ್ಟಾಫ್ ನರ್ಸ್ ಗರ್ಭೀಣಿ ಮಹಿಳೆಯನ್ನು ಕುಳ್ಳಿರಿಸಿ ಪ್ರಾಥಮಿಕ ಚಿಕಿತ್ಸೆ ನೀಡದೇ ಏನೋ ದಾಖಲಾತಿಗಳನ್ನು ಕೇಳುತ್ತ ಕಾಲಹರಣ ಮಾಡಿದ್ದರಿಂದ ಮನನೊಂದು ಗರ್ಭಿಣಿ ಆಸ್ಪತ್ರೆಯಿಂದ ವಾಪಸ್ ಹೋಗಿರುವುದು ಕಂಡು ಬಂದಿರುತ್ತದೆ’ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಸ್ತೂರಿ ಅವರು ಹೆರಿಗೆ ವಾರ್ಡ್‌ನಿಂದ ಹೊರಕ್ಕೆ ಬಂದಾಗ ಡ್ಯೂಟಿ ಡಾಕ್ಟರ್ ಉಷಾ ಅವರು ಬಂದಿದ್ದರು. ಇವರು ಸಹ ಗರ್ಭಿಣಿ ಮಹಿಳೆಯೊಂದಿಗೆ ಮಾತನಾಡಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿರುವುದಿಲ್ಲ. ಕನಿಷ್ಟ ಪಕ್ಷ ಇವರು ಮಾತನಾಡಿರುವುದೂ ಕಂಡು ಬಂದಿರುವುದಿಲ್ಲ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

‘ಸೌಜನ್ಯವನ್ನೇ ಮರೆತರು’

‘ಹೆರಿಗೆ ವಾರ್ಡ್‌ಲ್ಲಿದ್ದ ಸ್ಟಾಫ್‌ನರ್ಸ್‌ಗಳಾದ ಯಶೋಧ, ಸವಿತಾ, ದಿವ್ಯಭಾರತಿ, ವೇದಾವತಿ ಅವರು ಸಹ ಕಸ್ತೂರಿ ಅವರನ್ನು ಕುಳ್ಳಿರಿಸಿ ಮಾತನಾಡಿರಲಿಲ್ಲ. ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನವನ್ನೂ ಮಾಡದೆಯೇ ರೋಗಿಯೊಂದಿಗೆ ಸೌಜನ್ಯದಿಂದ ನಡೆದುಕೊಂಡಿರುವುದಿಲ್ಲ’ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X