Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಬೀಗರಾಗಿದ್ದರೂ ಯೋಜನೆ ಅನುಷ್ಟಾನ...

'ಬೀಗರಾಗಿದ್ದರೂ ಯೋಜನೆ ಅನುಷ್ಟಾನ ಆಗುತ್ತಿಲ್ಲ': ಸದನದಲ್ಲಿ ಕೆಲ ಸಮಯ ಸ್ವಾರಸ್ಯಕರ ಚರ್ಚೆ

20 Dec 2022 3:30 PM IST
share
ಬೀಗರಾಗಿದ್ದರೂ ಯೋಜನೆ ಅನುಷ್ಟಾನ ಆಗುತ್ತಿಲ್ಲ: ಸದನದಲ್ಲಿ ಕೆಲ ಸಮಯ ಸ್ವಾರಸ್ಯಕರ ಚರ್ಚೆ

ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ. 20: ‘ಇಬ್ಬರು ಸಚಿವರ, ಬೀಗರ ಊರುಗಳು ನಮ್ಮ ಕ್ಷೇತ್ರದಲ್ಲಿದ್ದರೂ ಗಲಗಲಿ-ಮರೆಗುದ್ದಿ ನೀರಾವರಿ ಯೋಜನೆ ಅನುಷ್ಟಾನಗೊಳಿಸಿಲ್ಲ’ ಎಂಬುದು ಕೆಲ ಸಮಯ ಸ್ವಾರಸ್ಯಕರ ಚರ್ಚೆ ಗ್ರಾಸವಾಯಿತು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಸಿದ್ದು ನ್ಯಾಮಗೌಡ, ಮುಧೋಳ ಭಾಗಕ್ಕೆ ನೀರಾವರಿ ಯೋಜನೆ ಪೂರ್ಣಗೊಳಿಸಬೇಕೆಂದು ತಮ್ಮದೆ ದಾಟಿಯಲ್ಲಿ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಗೋವಿಂದ ಕಾರಜೋಳ, 2018-19ರ ಸಾಲಿನಲ್ಲಿ ಹಣ ಮೀಸಲಿಟ್ಟಿಲ್ಲ. ಆದ್ಯತೆ ಮೇಲೆ ಮಾಡಬೇಕು. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮರೆಗುದ್ದಿ ಯೋಜನೆ ಜಾರಿಗೊಳಿಸಬೇಕೆಂದು ಪ್ರತಿ ದಿನ ನನ್ನ ಬೆನ್ನತ್ತಿದ್ದಾರೆ. ಏಕೆಂದ್ದರೆ ಸೊಸೆ ಮರೆಗುದ್ದಿಯವರು. ಅದಕ್ಕಾಗಿ ಬೀಗರೂರಿಗೆ ಮಾಡಿಕೊಡಲು ನನ್ನ ಜೀವ ತಿನ್ನುತ್ತಿದ್ದಾರೆ ಎಂದು ಪ್ರಸ್ತಾಪಿಸಿದರು.

ಇದಕ್ಕೆ ಧ್ವನಿಗೂಡಿಸಿದ ಆನಂದ್ ಸಿದ್ದು ನ್ಯಾಮಗೌಡ, ‘ನಮ್ಮ ದುರ್ದೈವ ಏನೆಂದರೆ ಸಚಿವರಾದ ಸಿ.ಸಿ.ಪಾಟೀಲ್ ನಮ್ಮ ಕ್ಷೇತ್ರದ ಬೀಗರು, ಮುರುಗೇಶ್ ನಿರಾಣಿ ಅವರು ಬೀಗರಾಗಿದ್ದರೂ ಮರೆಗುದ್ದಿ ಯೋಜನೆ ಅನುಷ್ಠಾನ ಆಗುತ್ತಿಲ್ಲ’ಎಂದು ಚಟಾಕಿ ಹಾರಿಸಿದರು.

ಈ ವೇಳೆ ಎದ್ದುನಿಂತ ಕಾಂಗ್ರೆಸ್ ಸದಸ್ಯೆ ಲಕ್ಷ್ಮೀ ಹೆಬ್ಬಾಳ್ಕರ್, ‘ಆನಂದ್ ನೀವು ಮರೆಗುದ್ದಿಯಲ್ಲೇ ಬೀಗತನ ಮಾಡಿಕೊಳ್ಳಿ’ ಎಂದು ಮಸಾಲೆ ಬೆರೆಸಿದ್ದು ಸದನದಲ್ಲಿ ನಗೆ ಅಲೆಯನ್ನು ಉಕ್ಕಿಸಿತು.

ಬಳಿಕ ಉತ್ತರ ನೀಡಿದ ಸಚಿವ ಕಾರಜೋಳ, ಗಲಗಲಿ-ಮರೆಗುದ್ದಿ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

share
Next Story
X