Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಕಪ್ ಚಾಂಪಿಯನ್ ಮೆಸ್ಸಿ, ತಂಡಕ್ಕೆ...

ವಿಶ್ವಕಪ್ ಚಾಂಪಿಯನ್ ಮೆಸ್ಸಿ, ತಂಡಕ್ಕೆ ತವರಿನಲ್ಲಿ ಅದ್ದೂರಿ ಸ್ವಾಗತ: ಸಾರ್ವತ್ರಿಕ ರಜೆ ಘೋಷಿಸಿದ ಅರ್ಜೆಂಟೀನ

20 Dec 2022 4:15 PM IST
share
ವಿಶ್ವಕಪ್ ಚಾಂಪಿಯನ್ ಮೆಸ್ಸಿ, ತಂಡಕ್ಕೆ ತವರಿನಲ್ಲಿ ಅದ್ದೂರಿ ಸ್ವಾಗತ: ಸಾರ್ವತ್ರಿಕ ರಜೆ ಘೋಷಿಸಿದ ಅರ್ಜೆಂಟೀನ

ಬ್ಯೂನಸ್‌ ಐರಿಸ್‌: ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿನ ರೋಚಕ ಹಣಾಹಣಿಯಲ್ಲಿ ನಿಕಟಪೂರ್ವ ಚಾಂಪಿಯನ್ ಆಗಿದ್ದ ಫ್ರಾನ್ಸ್ ತಂಡವನ್ನು 4-2ರಿಂದ ಮಣಿಸಿ ಈ ಬಾರಿಯ ಚಾಂಪಿಯನ್ ಆಗಿರುವ ಲಿಯೊನೆಲ್ ಮೆಸ್ಸಿ ಹಾಗೂ ತಂಡಕ್ಕೆ ತವರಿನಲ್ಲಿ ಅದ್ದೂರಿ ಸ್ವಾಗತ ದೊರೆತಿದ್ದು, ಸಂಭ್ರಮಾಚರಣೆಯಲ್ಲಿ ದೇಶದ ಪ್ರತಿ ಪ್ರಜೆಯೂ ಪಾಲ್ಗೊಳ್ಳಲು ಅನುವಾಗುವಂತೆ ಅರ್ಜೆಂಟೀನ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಅಧಿಕೃತವಾಗಿ ಟ್ವೀಟ್ ಮಾಡಿರುವ ಅರ್ಜೆಂಟೀನ ಫುಟ್‌ಬಾಲ್ ಒಕ್ಕೂಟ, "ವಿಶ್ವಕಪ್ ಚಾಂಪಿಯನ್ ತಂಡವು ಮಂಗಳವಾರ ಮಧ್ಯಾಹ್ನ ಬೂನಸ್ ಐರಿಸ್‌ನ ಒಬೆಲಿಸ್ಕ್ ಕ್ರೀಡಾಂಗಣ ತಲುಪಲಿದ್ದು, ಅಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದೆ" ಎಂದು ತಿಳಿಸಿದೆ.

ಸಂಭ್ರಮಾಚಣೆಯ ನಿಮಿತ್ತ ಸರ್ಕಾರಿ ರಜೆ ಘೋಷಿಸಿರುವ ಅರ್ಜೆಂಟೀನಾ ಸರ್ಕಾರ, ಇಡೀ ದೇಶ ರಾಷ್ಟ್ರೀಯ ತಂಡದ ಆಟಗಾರರೊಂದಿಗೆ ರಾಜಧಾನಿ ಬೂನಸ್ ಏರಿಸ್‌ನ ಒಬೆಲಿಸ್ಕ್ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿ ಎಂಬ ಕಾರಣದಿಂದ ಮಂಗಳವಾರ ಬ್ಯಾಂಕ್ ಸೇರಿದಂತೆ ಎಲ್ಲ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಪ್ರಕಟಿಸಿದೆ.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಅಂತರದ ಗೆಲುವು ದಾಖಲಿಸುವ ಮೂಲಕ ಅರ್ಜೆಂಟೀನಾ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು‌. ಇದರಿಂದ ನಾಯಕ ಲಿಯೊನೆಲ್ ಮೆಸ್ಸಿಗೆ ಇದುವರೆಗೆ ಒಲಿಯದೆ ಉಳಿದಿದ್ದ ವಿಶ್ವಕಪ್ ಪ್ರಶಸ್ತಿ ಗರಿಯೂ ಸೇರಿ ಹೋಯಿತು.

ಖತರ್‌ನ ಲುಸೈಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಯಿತು. ಪಂದ್ಯಾಂತ್ಯದ ವೇಳೆಗೆ ಅರ್ಜೆಂಟೀನಾ-ಫ್ರಾನ್ಸ್ ತಂಡಗಳೆರಡೂ 2-2ರ ಅಂತರದಲ್ಲಿ ಸಮಬಲ ಸಾಧಿಸಿದ್ದವು. ಹೆಚ್ಚುವರಿ ಸಮಯದ ಆಟದಲ್ಲೂ 3-3 ಅಂತರದಲ್ಲಿ ಸಮಬಲ ಸಾಧಿಸಿದವು. ನಂತರ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಚಾಂಪಿಯನ್ ಆಗಿ ಹೊಮ್ಮಿದ್ದು ಅರ್ಜೆಂಟೀನಾ ಗೋಲ್ ಕೀಪರ್ ಎಮಿಲಿಯಾನೊ ಮಾರ್ಟಿನೆಜ್. ಅವರ ಅದ್ಭುತ ಗೋಲು ರಕ್ಷಣೆಯಿಂದ ಅರ್ಜೆಂಟೀನಾ 4-2ರ ಅಂತರದಲ್ಲಿ ಫ್ರಾನ್ಸ್ ವಿರುದ್ಧ ಗೆಲುವು ಸಾಧಿಸಿ, ಕಳೆದ ಮೂರು ದಶಕದ ನಂತರ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.

ಇದಕ್ಕೂ ಮುನ್ನ ಪಂದ್ಯದುದ್ದಕ್ಕೂ ಮೇಲುಗೈ ಸಾಧಿಸಿ 2-0 ಅಂತರದ ಮುನ್ನಡೆಯೊಂದಿಗೆ, ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಅರ್ಜೆಂಟೀನಾ ತಂಡಕ್ಕೆ ಕೊನೆಯ ಹದಿನೈದು ನಿಮಿಷದಲ್ಲಿ ತೊಡರುಗಾಲು ಆಗಿದ್ದು ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪೆ. ಪಂದ್ಯದ 80 ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಒಡೆತದಲ್ಲಿ ಕೊಲೊ ಮುವಾನಿ ನೀಡಿದ ಪಾಸನ್ನು ಅರ್ಜೆಂಟೀನಾ ಗೋಲು ಪೆಟ್ಟಿಗೆಗೆ ತೂರಿಸುವಲ್ಲಿ ಕಿಲಿಯನ್ ಎಂಬಾಪೆ ಯಶಸ್ವಿಯಾದರು. ಮರು ನಿಮಿಷವೇ ಅವರು ಪಂದ್ಯವನ್ನು 2-2 ಅಂತರದಲ್ಲಿ ಸಮಬಲಗೊಳಿಸಿದರು.

ಹೆಚ್ಚುವರಿ ಸಮಯದಲ್ಲಿ ಹ್ಯೂಗೊ ಲಾರಿಸ್, ಫ್ರಾನ್ಸ್ ಗೋಲ್ ಕೀಪರ್‌ನನ್ನು ವಂಚಿಸಿ ಬಾಲನ್ನು ಗೋಲು ಪೆಟ್ಟಿಗೆ ಸೇರಿಸುವ ಮೂಲಕ ಅರ್ಜೆಂಟೀನಾ ತಂಡಕ್ಕೆ 3-2 ಅಂತರದ ಮುನ್ನಡೆ ದೊರಕಿಸಿಕೊಟ್ಟರು. ಆದರೆ, 118ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಎಂಬಾಪೆ ಬಾಲನ್ನು ಗೋಲು ಪೆಟ್ಟಿಗೆ ಸೇರಿಸುವ ಮೂಲಕ ಹ್ಯಾಟ್ರಿಕ್ ಗೌರವಕ್ಕೆ ಭಾಜನರಾದರು ಮತ್ತು ಪಂದ್ಯವನ್ನು 3-3 ಅಂತರದಲ್ಲಿ ಸಮಬಲಗೊಳಿಸಿದರು.

#PHOTOS: #Argentina football team, led by #LionelMessi, arrive home to hero’s welcome after winning the greatest @WorldCupFinal of all time https://t.co/Qw2p4K96LL pic.twitter.com/Cm6vh5QCgo

— Arab News | Sport (@ArabNewsSport) December 20, 2022

03:30 in Argentina right now and that’s how things look like as players are going to Ezeiza camp

pic.twitter.com/K03sAFgujn

— All About Argentina (@AlbicelesteTalk) December 20, 2022
share
Next Story
X