ಚಿಕ್ಕಮಗಳೂರು: ಕರೆಯಲ್ಲಿ ಮುಳುಗಿ ತಾಯಿ- ಮಗಳು ಮೃತ್ಯು
ಚಿಕ್ಕಮಗಳೂರು, ಡಿ. 20: ಕೆರೆಯಲ್ಲಿ ಮುಳಗಿ ತಾಯಿ ಮಗಳು ಸಾವನಪ್ಪಿರುವ ಘಟನೆ ಮಂಗಳವಾರ ತಾಲೂಕಿನ ಬೆಳವಾಡಿ ಸಮೀಪದ ವಡ್ಡರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ವಡ್ಡರಹಳ್ಳಿ ಗ್ರಾಮದ ಶೋಭ (40), ಮಗಳು ವರ್ಷಾ (8) ಮೃತಪಟ್ಟಿರುವ ದುದೈವಿಗಳಾಗಿದ್ದು, ಶೋಭ ಅವರು ತನ್ನ ಇಬ್ಬರು ಮಕ್ಕಳಾದ ವರ್ಷ ಹಾಗೂ ಚೇತನ್ ಅವರೊಂದಿಗೆ ದನ ಮೇಯಿಸಲು ಹೋಗಿದ್ದು, ಈ ವೇಳೆ ಕೆರೆ ದಾಟುವ ವೇಳೆ ಮಗಳು ವರ್ಷ ಕೆರೆ ನೀರಿನಲ್ಲಿ ಸಿಲುಕಿಕೊಂಡಿದ್ದಾಳೆ. ಈ ವೇಳೆ ತಾಯಿ ಶೋಭ ಮಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ತಾಯಿ ಮಗಳು ಕರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ವೇಳೆ ಜೊಗೆಗಿದ್ದ ಮಗ ಚೇತನ್ ಅಪಾಯದಿಂದ ಪಾರಾಗಿದ್ದಾನೆ. ಕೆರೆಯಲ್ಲಿ ನೀರು ಹೆಚ್ಚಿದ್ದ ಭಾಗದಲ್ಲೇ ಮಗಳು ಸಿಲುಕಿಕೊಂಡಿದ್ದು, ಮಗಳನ್ನು ರಕ್ಷಣೆ ಮಾಡಲು ಹೋಗಿ ತಾಯಿಯೂ ನೀರಿನಲ್ಲಿ ಸಿಲುಕಿಕೊಂಡಿದ್ದರಿಂದ ಘಟನೆ ಸಂಭವಿಸಿದೆನ್ನಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story