Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟರ ಮೀಸಲಾತಿ ಹೆಚ್ಚಳ:...

ಪರಿಶಿಷ್ಟರ ಮೀಸಲಾತಿ ಹೆಚ್ಚಳ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

20 Dec 2022 7:49 PM IST
share
ಪರಿಶಿಷ್ಟರ ಮೀಸಲಾತಿ ಹೆಚ್ಚಳ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.20: ಪರಿಶಿಷ್ಟ ಜಾತಿ(ಎಸ್‍ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್‍ಟಿ)ದವರಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ(ಉದ್ಯೋಗ) ಅಥವಾ ಹುದ್ದೆಗಳಲ್ಲಿ ಮೀಸಲಾತಿ ಪ್ರಮಾಣವನ್ನು ಎಸ್‍ಸಿ-ಶೇ.17 ಹಾಗೂ ಎಸ್‍ಟಿ-ಶೇ.7ಕ್ಕೆ ಹೆಚ್ಚಿಸುವ ಸಂಬಂಧ ವಿಧೇಯಕವನ್ನು ಸರಕಾರ ಮಂಡಿಸಿದೆ.

ಮಂಗಳವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಧೇಯಕವನ್ನು ಮಂಡಿಸಿದರು.

ವಿಧೇಯಕದಲ್ಲಿ ಏನಿದೆ?: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆ ಮತ್ತು ಅವು ಒಳಗೊಳ್ಳುವ ಜಾತಿಗಳ ಸಂಖ್ಯೆ ಹೆಚ್ಚಾಗಿದ್ದರೂ ಅವರಿಗೆ ಕಲ್ಪಿಸಲಾದ ಮೀಸಲಾತಿಯು 1958ನೆ ಸಾಲಿನಲ್ಲಿ ಇದ್ದಂತೆ ಎಸ್‍ಸಿಗಳಿಗೆ ಶೇ.15 ಹಾಗೂ ಎಸ್‍ಟಿಗಳಿಗೆ ಶೇ.3ರಂತೆ ಉಳಿದುಕೊಂಡು ಬಂದಿದೆ.

ಪ್ರಸ್ತುತ ಇರುವ ಎಸ್‍ಸಿ ಮೀಸಲಾತಿ ಶೇ.15 ರಿಂದ ಶೇ.17 ಹಾಗೂ ಎಸ್‍ಟಿಗೆ ಇರುವ ಶೇ.3ರಷ್ಟು ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸರಕಾರ ಸರ್ವಪಕ್ಷಗಳ ಸಭೆ ನಡೆಸಿ ತೀರ್ಮಾನ ಕೈಗೊಂಡಿತ್ತು. ಅಲ್ಲದೆ, ಅಧ್ಯಾದೇಶ(ಸುಗ್ರೀವಾಜ್ಞೆ)ವನ್ನು ಹೊರಡಿಸಿತ್ತು. ಇದೀಗ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡಿದೆ.

ಸಾರ್ವಜನಿಕ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳೆರಡರಲ್ಲಿಯೂ ಸಾಕಷ್ಟು ಪ್ರಾತಿನಿಧ್ಯವಿಲ್ಲವೆಂದು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸದಸ್ಯರು ನಿರಂತರವಾಗಿ ಬೇಡಿಕೆ ಮತ್ತು ಮನವಿಯನ್ನು ಮಾಡುತಿದ್ದರು ಹಾಗೂ ನಾಯಕ ವಿದ್ಯಾರ್ಥಿ ಸಂಘವು ಹೈಕೋರ್ಟ್ ಮೊರೆ ಹೋಗಿದೆ. ಅವರ ಮನವಿಯನ್ನು ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ಸರಕಾರ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಆಯೋಗ ರಚನೆ ಮಾಡಿತ್ತು. ಆಯೋಗವು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ನೀಡಿ, ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿತ್ತು. ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಅನುಷ್ಠಾನದಿಂದ ಆಗಬಹುದಾದ ಪರಿಣಾಮಗಳ ಕುರಿತು ಅವಲೋಕಿಸಲು ಸರಕಾರವು ನ್ಯಾ.ಸುಭಾಷ್ ಬಿ.ಅಡಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ನೇಮಕ ಮಾಡಿತ್ತು.

ನ್ಯಾ.ಸುಭಷ್ ಬಿ. ಅಡಿ ಅಧ್ಯಕ್ಷತೆಯ ಸಮಿತಿಯು ಎಸ್‍ಸಿ-ಎಸ್‍ಸಿಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಸಂಬಂಧ ನೀಡಿದ ವರದಿಯನ್ನಾಧರಿಸಿ ರಾಜ್ಯ ಸರಕಾರವು ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ತೀರ್ಮಾನ ಕೈಗೊಂಡಿದೆ. ಈಗಾಗಲೇ ತಮಿಳುನಾಡು, ಮಧ್ಯಪ್ರದೇಶ, ರಾಜಸ್ತಾನ ಮತ್ತು ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಿರುವುದರಿಂದ ರಾಜ್ಯದಲ್ಲಿಯೂ ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡುವ ಕುರಿತು ರಾಜ್ಯ ಸರಕಾರವು ನಿರ್ಧರಿಸಿದೆ.

share
Next Story
X