Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಮಹಿಳೆ ಸೇರಿ ಒಳಮೀಸಲಾತಿ ಹೋರಾಟಗಾರರ...

ದಲಿತ ಮಹಿಳೆ ಸೇರಿ ಒಳಮೀಸಲಾತಿ ಹೋರಾಟಗಾರರ ವಿರುದ್ಧ ಮೊಕದ್ದಮೆ

20 Dec 2022 9:07 PM IST
share
ದಲಿತ ಮಹಿಳೆ ಸೇರಿ ಒಳಮೀಸಲಾತಿ ಹೋರಾಟಗಾರರ ವಿರುದ್ಧ ಮೊಕದ್ದಮೆ

ಬೆಂಗಳೂರು, ಡಿ.20: ನ್ಯಾ.ಎ.ಜೆ ಸದಾಶಿವ ಆಯೋಗ ವರದಿಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ  ಹೋರಾಟ ಮುಂದುವರೆಸಿರುವ ದಲಿತ ಮಹಿಳೆ ಸೇರಿ ಹಲವು ನಾಯಕರ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಮೊಕದ್ದಮೆ ದಾಖಲಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ‌ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಡಿ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಗೂ ಮುನ್ನ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ‌ ಕೋರ್ಟಿನ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹತ್ತು  ಹೋರಾಟಗಾರರ ಮೇಲೆ ಮೊಕದ್ದಮೆ ದಾಖಲು ಮಾಡಲಾಗಿದೆ.

ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ,  ಅಂಬಣ್ಣ ಅರೋಲಿಕರ್, ಮಾದಿಗ ಪಾವಗಡ ಶ್ರೀರಾಮ್,  ಶಂಕರ್ ಪೂಜಾರಿ,  ಭಾಸ್ಕರ್ ಪ್ರಸಾದ್, ಎನ್.ಮರ‍್ತಿ, ಬಿ.ಗೋಪಾಲ್, ಹೆಣ್ಣೂರ್ ಶ್ರೀನಿವಾಸ್, ಭಾಗ್ಯಮ್ಮ,  ಲಿಂಗರಾಜು ವಿರುದ್ಧ ಮೊಕದ್ದಮೆ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?: 

ಡಿ.11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು ಮೂರು ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್ ಗೇಟ್ ಮುಂಭಾಗದಲ್ಲಿ, ಶಾಂತಲಾ ರ‍್ಕಲ್‌ನಿಂದ ಖೋಡೆ ರ‍್ಕಲ್ ಕಡೆಗೆ ಹೋಗುವ ಸರ‍್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಸಂಬಂಧ ನ್ಯಾಯಾಲಯ ಆದೇಶದ ಉಲ್ಲಂಘನೆ ಹಿನ್ನೆಲೆ ಮೊಕದ್ದಮೆ ದಾಖಲು ಮಾಡಲಾಗಿದೆ.

ಪ್ರಮುಖ ಆರೋಪಿ ಮುಖ್ಯಮಂತ್ರಿ: ಅಂಬಣ್ಣ

ಡಿ.11ರಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟಿಸುವ ವಿಷಯವನ್ನು ಒಂದು ತಿಂಗಳ ಮೊದಲೇ ಮುಖ್ಯಮಂತ್ರಿಯನ್ನು ಒಳಗೊಂಡಂತೆ ಸಚಿವರು ಹಾಗೂ ಪೊಲೀಸ್ ಇಲಾಖೆಗೂ ಮಾಹಿತಿ ತಲುಪಿಸಿದ್ದೆವು. ನಾವು ನಗರದೊಳಗೆ ಬರದಂತೆ ಸಮಸ್ಯೆ ಬಗೆಹರಿಸಿ ವಾಪಸ್ ಕಳುಹಿಸಬಹುದಿತ್ತು. ಇದಕ್ಕೆ ಅವರೇ ಹೊಣೆಗಾರರು. ಸಾರ್ವಜನಿಕವಾಗಲಿ,ವಾಣಿಜ್ಯೋದ್ಯಮಗಳಾಗಲಿ ಪ್ರತಿಭಟನೆಯಿಂದ ತೊಂದರೆಯಾಗಿದೆಯೆಂದು ಪ್ರಕರಣ ದಾಖಲಿಸಿಲ್ಲ.

ಕುಮ್ಮಕ್ಕಿನಿಂದ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಆದರೆ, ನಮ್ಮ ಹೋರಾಟಕ್ಕೆ ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಆರೋಪಿ ಮಾಡಬೇಕು ಎಂದು ಒಳಮೀಸಲಾತಿ ಹೋರಾಟದ  ನಾಯಕ ಅಂಬಣ್ಣ ಅರೋಲಿಕರ್ ತಿಳಿಸಿದರು.

share
Next Story
X