Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುವ...

ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುವ ಅಧಿಕಾರಿಗಳನ್ನು ಉತ್ತರ ಪ್ರದೇಶಕ್ಕೆ ವರ್ಗಾಯಿಸಲಾಗುವುದು: ತಮಿಳುನಾಡು ಬಿಜೆಪಿ ನಾಯಕ

20 Dec 2022 9:51 PM IST
share
ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುವ ಅಧಿಕಾರಿಗಳನ್ನು ಉತ್ತರ ಪ್ರದೇಶಕ್ಕೆ ವರ್ಗಾಯಿಸಲಾಗುವುದು: ತಮಿಳುನಾಡು ಬಿಜೆಪಿ ನಾಯಕ

ಚೆನ್ನೈ: ಕೇಂದ್ರ ಸರ್ಕಾರದ ಬದಲು ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುವ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಿಜೆಪಿಯು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶಕ್ಕೆ ವರ್ಗಾಯಿಸಲಿದೆ ಎಂದು ತಮಿಳುನಾಡಿನ ಬಿಜೆಪಿ ನಾಯಕ ಎಚ್. ರಾಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು The New Indian Express ವರದಿ ಮಾಡಿದೆ.

ಶನಿವಾರ ತೆಂಕಾಸಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಒಂದು ವೇಳೆ ಅಧಿಕಾರಿಗಳು ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸಿದರೆ ಅಂತಹ ಅಧಿಕಾರಿಗಳಿಗೆ ಆದಿತ್ಯನಾಥ್ ಮತ್ತು ಬುಲ್ಡೋಜರ್ ಅನ್ನು ಎದುರಿಸುವಂತೆ ಮಾಡಲಾಗುವುದು ಎಂದು ಎಚ್.ರಾಜ ಹೇಳಿದ್ದಾರೆ. "ಅವರು ಸಂವಿಧಾನದ ಪ್ರಕಾರ ಒಕ್ಕೂಟ ಪದವನ್ನು ಬಳಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ನಾನು ಲೆಕ್ಕ ಪರಿಶೋಧಕ ಮಾತ್ರವಲ್ಲ; ವಕೀಲ ಕೂಡಾ. ರಾಜ್ಯಗಳ ಒಕ್ಕೂಟ ಎಂಬುದು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಿಗೆ ಅನ್ವಯಿಸುವುದಿಲ್ಲ" ಎಂದಿದ್ದಾರೆ.

2021ರಲ್ಲಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಸರ್ಕಾರ, ತನ್ನ ಅಧಿಕೃತ ಪತ್ರ ವ್ಯವಹಾರಗಳಲ್ಲಿ ಮತ್ತು ಪತ್ರಿಕಾ ಪ್ರಕಟಣೆಗಳಲ್ಲಿ ಈ ಹಿಂದಿನಂತೆ  ಕೇಂದ್ರ ಸರ್ಕಾರ ಎಂದು ಬಳಸುವ ಬದಲು ಭಾರತ ಸರ್ಕಾರವನ್ನು ತಮಿಳಿನಲ್ಲಿ 'ಒಂಡ್ರಿಯ ಅರಸು' (ಒಕ್ಕೂಟ ಸರ್ಕಾರ) ಎಂತಲೇ ಉಲ್ಲೇಖಿಸುತ್ತಿದೆ.

ತನ್ನ ನಡೆಯನ್ನು ಸಮರ್ಥಿಸಿಕೊಂಡಿರುವ ಡಿಎಂಕೆ ಸರ್ಕಾರ, ಸಾಂವಿಧಾನಿಕ ಸ್ಥಾನವನ್ನು ಸಮರ್ಪಕವಾಗಿ ಉಲ್ಲೇಖಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತ್ತು. ಪಕ್ಷದ ನಾಯಕರ ಪ್ರಕಾರ, ಸಂವಿಧಾನದಲ್ಲಿ ಭಾರತವನ್ನು ಒಕ್ಕೂಟ ಸರ್ಕಾರ ಎಂದು ವಿವರಿಸಿರುವುದರಿಂದ ಕೇಂದ್ರ ಸರ್ಕಾರದ ಬದಲು ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುವುದೇ ಸಮರ್ಪಕ ವಿಧಾನ ಎನ್ನುತ್ತಾರೆ.

ಆದರೆ, ಈ ನಡೆಯನ್ನು ವಿರೋಧಿಸಿದ್ದ ಬಿಜೆಪಿಯು, ಡಿಎಂಕೆ ನಡೆಯು ತಮಿಳುನಾಡನ್ನು ದೇಶದಿಂದ ವಿಭಜಿಸುವ ಪ್ರಕ್ರಿಯೆಯ ಪ್ರಾರಂಭ ಎಂದು ಆರೋಪಿಸಿತ್ತು.

ಸೇವಾನಿರತ ಐಎಎಸ್ ಅಧಿಕಾರಿಯೊಬ್ಬರು ಕೇಂದ್ರ ಸರ್ಕಾರದ ಬದಲು ಒಕ್ಕೂಟ ಸರ್ಕಾರ ಎಂದು ಉಲ್ಲೇಖಿಸುತ್ತಿದ್ದಾರೆ. ಅವರು ಇದೇ ಕೆಲಸವನ್ನು ಮಧ್ಯಪ್ರದೇಶದಲ್ಲೂ ಮಾಡಲಿ ನೋಡೋಣ ಎಂದು ಎಚ್.ರಾಜ ಸವಾಲು ಹಾಕಿದ್ದಾರೆ.

"ಆತ ಕೇಂದ್ರದ ಸೇವೆಯಲ್ಲಿದ್ದಾನೆ. ಮರುದಿನ ಆತನನ್ನು ಮಧ್ಯಪ್ರದೇಶಕ್ಕೆ ವರ್ಗಾಯಿಸಿದರೆ ಏನಾಗಬಹುದು ಊಹಿಸಿ! ಆತ ಅಲ್ಲಿಯೂ ಒಕ್ಕೂಟ ಸರ್ಕಾರ ಎಂದೇ ಬಳಸುತ್ತಾನೆಯೆ? ಆತನಿಗೆ ಯಾವುದೇ ನಾಚಿಕೆ ಇಲ್ಲವೆ?" ಎಂದು ಎಚ್.ರಾಜ ಹೇಳಿದ್ದಾರೆ ಎಂದು India Today ವರದಿ ಮಾಡಿದೆ.

ಒಕ್ಕೂಟ ಸರ್ಕಾರ ಎಂದು ಬಳಸುತ್ತಿರುವವರು ದೇಶದ್ರೋಹಿಗಳಾಗಿದ್ದು, ತಮಿಳುನಾಡು ರಾಷ್ಟ್ರೀಯತೆ ಬಗ್ಗೆ ಚರ್ಚಿಸುತ್ತಿರುವವರನ್ನು ಗೂಂಡಾ ಕಾಯ್ದೆ ಅಡಿ ಜೈಲಿಗೆ ಹಾಕಬೇಕು ಎಂದು ಎಚ್‌.ರಾಜ ಕಿಡಿ ಕಾರಿದ್ದಾರೆ ಎಂದು The New Indian Express ವರದಿ ಮಾಡಿದೆ.

share
Next Story
X