ಎಲ್ಲ ಜಿಲ್ಲೆಗಳಲ್ಲೂ ‘ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರ: ಸಚಿವ ನಿರಾಣಿ
![ಎಲ್ಲ ಜಿಲ್ಲೆಗಳಲ್ಲೂ ‘ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರ: ಸಚಿವ ನಿರಾಣಿ ಎಲ್ಲ ಜಿಲ್ಲೆಗಳಲ್ಲೂ ‘ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರ: ಸಚಿವ ನಿರಾಣಿ](https://www.varthabharati.in/sites/default/files/images/articles/2022/12/20/360790-1671557653.jpg)
ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ.20: ‘ಉದ್ಯಮಿಯಾಗು-ಉದ್ಯೋಗ ನೀಡು’ಕಾರ್ಯಾಗಾರ ಹಾಗೂ ಕಾರ್ಯಕ್ರಮ ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲೂ ನಡೆಸುವ ಚಿಂತನೆ ಇದೆ ಎಂದು ಬೃಹತ್ ಮತ್ತು ಮಧ್ಯಮಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ.ಅದಕ್ಕಾಗಿ ಪ್ರತಿಜಿಲ್ಲೆಯ 3ರಿಂದ 4 ಕೇಂದ್ರಗಳಲ್ಲಿ ಒಂದು ದಿನದಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.
ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ ಎಂದು ತಿಳಿಸಿದರು.
Next Story