Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ನಟಿ ಅಲಿದೂಸ್ತಿ ಬಂಧನ: ಕಾನ್,...

ಇರಾನ್ ನಟಿ ಅಲಿದೂಸ್ತಿ ಬಂಧನ: ಕಾನ್, ಟೊರಾಂಟೊ ಚಿತ್ರೋತ್ಸವ ಸಂಘಟಕರಿಂದ ತೀವ್ರ ಖಂಡನೆ

20 Dec 2022 11:04 PM IST
share
ಇರಾನ್ ನಟಿ ಅಲಿದೂಸ್ತಿ ಬಂಧನ: ಕಾನ್, ಟೊರಾಂಟೊ ಚಿತ್ರೋತ್ಸವ ಸಂಘಟಕರಿಂದ ತೀವ್ರ ಖಂಡನೆ

ಟೆಹರಾನ್,ಡಿ.20 : ಇರಾನ್ ಚಿತ್ರನಟಿ ತಾರಾನೆಹ್ ಅಲಿದೂಸ್ತಿ (Taraneh Alidusti)ಅವರ ಬಂಧನವನ್ನು ಕಾನ್ ಚಲನಚಿತ್ರೋತ್ಸವ, ಬರ್ಲಿನ್ ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟಕರು ತೀವ್ರವಾಗಿ ಖಂಡಿಸಿದ್ದಾರೆ ಹಾಗೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ಇರಾನ್ ಜನತೆಯ ಜೊತೆ ಏಕತೆಯನ್ನು ಪ್ರದರ್ಶಿಸಿದ್ದಾರೆ.

38 ವರ್ಷ ವಯಸ್ಸಿನ ಅಲಿ ದೂಸ್ತಿ ಅವರನ್ನು ಶನಿವಾರ ಬಂಧಿಸಲಾಗಿತ್ತು. ಆಡಳಿತ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಅಪರಾಧ ಎಸಗಿದ ಆರೋಪಕ್ಕೊಳಗಾಗಿ ಗಲ್ಲುಶಿಕ್ಷೆಗೆ ಗುರಿಯಾದ ಮೊಹ್ಸೆನ್ ಶೆಕಾರಿಯನ್ನು ಬೆಂಬಲಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಒಂದು ವಾರದ ಬಳಿಕ ಅಲಿದೂಸ್ತಿ ಅವರನ್ನು ಪೊಲೀಸರು ಬಂಧಿಸಿದ್ದರು.

ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಸುಳ್ಳುವದಂತಿಗಳನ್ನು ಹರಡುತ್ತಿರುವ ಆರೋಪದಲ್ಲಿ ಆಕೆಯನ್ನು ಬಂಧಿಸಿದ್ದರು.

ಆಸ್ಗರ್ ಫಾರ್‌ಹದಿ ನಿರ್ದೇಶನದ ಆಸ್ಕರ್ ವಿಜೇತ ಚಿತ್ರ ‘ ದಿ ಸೇಲ್ಸ್ ಮ್ಯಾನ್’ (The Sales Man)ಚಿತ್ರದ ನಟಿಯಾದ ಅಲಿದೂಸ್ತಿ, ಇರಾನ್ ಆಡಳಿತದ ವಿರುದ್ಧ ಜಗತ್ತಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದರು ಎಂದು ಬರ್ಲಿನ್ ಚಿತ್ರೋತ್ಸವದ ಸಂಘಟಕರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಟೊರಾಂಟೊ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ವರಿಷ್ಠ ಕ್ಯಾಮರೂನ್ ಬೈಲಿ ಈ ಬಗ್ಗೆ ಟ್ವೀಟ್ ಮಾಡಿದ್ದು, ‘‘ ತಾರಾನೆಹ್ ಅಲಿದೂಸ್ತ್ ಇರಾನ್‌ನ ಅತ್ಯಂತ ಪ್ರತಿಭಾವಂತ ಹಾಗೂ ಪ್ರಸಿದ್ಧ ತಾರೆಯರಲ್ಲೊಬ್ಬರು. ಆಕೆಯ ನೂತನ ಚಿತ್ರ ಸಬ್‌ಟ್ರಾಕ್ಷನ್ ಅನ್ನು ಟೊರಾಂಟೊ ಚಿತ್ರೋತ್ಸವದಲ್ಲಿ ಪ್ರದರ್ಶಿಸಲು ಹೆಮ್ಮೆಪಡುತ್ತೇವೆ. ಇರಾನ್ ಚಿತ್ರರಂಗವನ್ನು ಬಲಪಡಿಸಲು ಆಕೆ ಶೀಘ್ರದಲ್ಲೇ ಬಂಧಮುಕ್ತಿಗೊಳ್ಳುವರೆಂದು ನಾವು ಆಶಿಸುತ್ತೇವೆ’’ ಎಂದು ಹೇಳಿದ್ದಾರೆ.

ಮಹ್‌ಸಾ ಅಮಿನಾ ಎಂಬ ಯುವತಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಘಟನೆಯ ಬಳಿಕ ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನೆ ಭುಗಿಲೆದ್ದಿದೆ.

share
Next Story
X