Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ಯುಟ್ಯೂಬ್ ಚಾನೆಲ್‌ಗಳಿಂದ ಪ್ರಧಾನಿ,...

3 ಯುಟ್ಯೂಬ್ ಚಾನೆಲ್‌ಗಳಿಂದ ಪ್ರಧಾನಿ, ಸಿಜೆಐ, ಚು.ಆಯೋಗದ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಕೇಂದ್ರ ಸರಕಾರ

20 Dec 2022 11:05 PM IST
share
3 ಯುಟ್ಯೂಬ್ ಚಾನೆಲ್‌ಗಳಿಂದ ಪ್ರಧಾನಿ, ಸಿಜೆಐ, ಚು.ಆಯೋಗದ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಕೇಂದ್ರ ಸರಕಾರ

ಹೊಸದಿಲ್ಲಿ, ಡಿ. 20: ಒಟ್ಟು 13 ಲಕ್ಷ ಚಂದಾದಾರರನ್ನು ಹೊಂದಿರುವ ಮೂರು ಯುಟ್ಯೂಬ್ ಚಾನೆಲ್‌ಗಳು ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ಪ್ರಮುಖ ಸಂಸ್ಥೆಗಳ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿವೆ ಎಂದು  ಕೇಂದ್ರ ಸರಕಾರ ಮಂಗಳವಾರ ತಿಳಿಸಿದೆ. ಈ ಯುಟ್ಯೂಬ್ ಚಾನೆಲ್‌ಗಳೆಂದರೆ ನ್ಯೂಸ್ ಹೆಡ್‌ಲೈನ್ಸ್, ಸರಕಾರಿ ಅಪಡೇಟ್ ಹಾಗೂ ಆಜ್ ತಕ್ ಲೈವ್. 

ಈ ಮೂರು ಚಾನೆಲ್‌ಗಳ ವಿರುದ್ಧದ ತನಿಖೆಯನ್ನು ಮಾಹಿತಿ ಪ್ರಸಾರ ಮಾಡುವ ಸರಕಾರದ ನೋಡಲ್ ಏಜನ್ಸಿಯಾದ ಪ್ರೆಸ್ ಇನ್‌ಫಾರ್ಮೇಶನ್ ಬ್ಯುರೋದ ಸತ್ಯ ಶೋಧನಾ ಘಟಕ ನಡೆಸಿದೆ ಎಂದು ಸರಕಾರದ ಹೇಳಿಕೆ ತಿಳಿಸಿದೆ.  

ಈ ಘಟಕ 40ಕ್ಕೂ ಅಧಿಕ ಸರಣಿ ಸತ್ಯ ಶೋಧನೆಯನ್ನು ಕೈಗೊಂಡಿದೆ. ಹಲವು ವೀಡಿಯೊಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಚುನಾವಣಾ ಆಯೋಗ, ಇವಿಎಂ ಮತದಾನದ ವ್ಯವಸ್ಥೆ ಕುರಿತು ತಪ್ಪು ಮಾಹಿತಿ ಪ್ರಸಾರ ಮಾಡಿರುವುದು ಪತ್ತೆಯಾಗಿದೆ. ಈ ವೀಡಿಯೊಗಳನ್ನು 30 ಕೋಟಿಗೂ ಅಧಿಕ ಬಾರಿ ವೀಕ್ಷಿಸಲಾಗಿದೆ ಎಂದು ಸರಕಾರ ತಿಳಿಸಿದೆ. 

ಈ ಚಾನೆಲ್‌ಗಳಲ್ಲಿ ಹಂಚಿಕೊಳ್ಳಲಾದ ತಪ್ಪು ಮಾಹಿತಿಗಳಲ್ಲಿ ಮುಂದಿನ ಚುನಾವಣೆಗಳು ಮತಪತ್ರದ ವ್ಯವಸ್ಥೆಯ ಮೂಲಕ ನಡೆಯಲಿದೆ ಎಂದು ಪ್ರತಿಪಾದಿಸುವ ಸುಳ್ಳು ಸುದ್ದಿ ಕೂಡ ಒಳಗೊಂಡಿದೆ. ಬ್ಯಾಂಕ್ ಖಾತೆ ಅಥವಾ ಆಧಾರ್ ಕಾರ್ಡ್ ಹೊಂದಿರುವ ಯಾರಿಗಾದರೂ ಸರಕಾರ ಹಣ ವಿತರಿಸುತ್ತದೆ ಎಂದು ಇನ್ನೊಂದು ವೀಡಿಯೊ ಹೇಳಿದೆ. 

ಈ ಯುಟ್ಯೂಬ್ ಚಾನೆಲ್‌ಗಳು ಟಿವಿ ಚಾನೆಲ್‌ಗಳ ಲೋಗೋಗಳು ಮತ್ತು ಪ್ರಮುಖ ಸುದ್ದಿ ನಿರೂಪಕರ ಚಿತ್ರಗಳನ್ನು ಬಳಸಿಕೊಂಡು ಸುದ್ದಿ ಅಧಿಕೃತ ಎಂದು ವೀಕ್ಷಕರು ನಂಬುವಂತೆ ಮಾಡುತ್ತಿದೆ ಎಂದು ತನಿಖೆ ಕಂಡುಕೊಂಡಿದೆ. ಈ ಚಾನೆಲ್‌ಗಳು ತಮ್ಮ ವೀಡಿಯೊಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸುತ್ತಿರುವುದು ಹಾಗೂ ಯುಟ್ಯೂಬ್‌ನಲ್ಲಿ ತಪ್ಪು ಮಾಹಿತಿಯಿಂದ ಹಣ ಗಳಿಸುತ್ತಿರುವುದು ಕೂಡ ಪತ್ತೆಯಾಗಿದೆ ಎಂದು ಪಿಐಬಿ ಹೇಳಿಕೆ ತಿಳಿಸಿದೆ.
ತಪ್ಪು ಮಾಹಿತಿ ಪ್ರಸಾರ ತಡೆಯುವ ಭಾಗವಾಗಿ ಕಳೆದ ಒಂದು ವರ್ಷಗಳಲ್ಲಿ ನೂರಕ್ಕೂ ಅಧಿಕ ಯುಟ್ಯೂಬ್ ಚಾನೆಲ್‌ಗಳನ್ನು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಸ್ಥಗಿತಗೊಳಿಸಿದೆ.

share
Next Story
X