Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಕಪ್ ಸಂಭ್ರಮಾಚರಣೆಗೆ ಬೀದಿಗಿಳಿದ...

ವಿಶ್ವಕಪ್ ಸಂಭ್ರಮಾಚರಣೆಗೆ ಬೀದಿಗಿಳಿದ ಲಕ್ಷಾಂತರ ಜನ, ತೆರೆದ ಬಸ್ ಬಿಟ್ಟು ಹೆಲಿಕಾಪ್ಟರ್ ಏರಿದ ಮೆಸ್ಸಿ ಬಳಗ

21 Dec 2022 10:22 AM IST
share
ವಿಶ್ವಕಪ್ ಸಂಭ್ರಮಾಚರಣೆಗೆ ಬೀದಿಗಿಳಿದ ಲಕ್ಷಾಂತರ ಜನ, ತೆರೆದ ಬಸ್ ಬಿಟ್ಟು ಹೆಲಿಕಾಪ್ಟರ್  ಏರಿದ ಮೆಸ್ಸಿ ಬಳಗ

ಬ್ಯುನಸ್ ಐರಿಸ್: ಅರ್ಜೆಂಟೀನದ ವಿಶ್ವಕಪ್ ಪ್ರಶಸ್ತಿಯನ್ನು ಆಚರಿಸಲು ಲಕ್ಷಾಂತರ ಜನರು ಮಂಗಳವಾರ ಬ್ಯೂನಸ್ ಐರಿಸ್‌ನಲ್ಲಿ ಬೀದಿಗಿಳಿದರು. ಕಿಕ್ಕಿರಿದು ಸೇರಿದ್ದ ಜನರು ವಿಶ್ವಕಪ್ ವಿಜೇತ ತಂಡದ  ಯೋಜಿತ ಮೆರವಣಿಗೆ ಮಾರ್ಗವನ್ನು ಅಡ್ಡಿಪಡಿಸಿದರು. ಹೀಗಾಗಿ ಲಿಯೊನೆಲ್ ಮೆಸ್ಸಿ ಹಾಗೂ  ಅವರ ತಂಡದ ಸದಸ್ಯರು ತೆರೆದ ಬಸ್ ಅನ್ನು ತ್ಯಜಿಸಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದರು.

ಅರ್ಜೆಂಟೀನ ತಂಡ ಫ್ರಾನ್ಸ್ ಅನ್ನು ಸೋಲಿಸಿ ತನ್ನ ಮೂರನೇ ವಿಶ್ವಕಪ್ ಪ್ರಶಸ್ತಿ ಜಯಿಸಿ  36 ವರ್ಷಗಳ ಕನಸು ಈಡೇರಿಸಿಕೊಂಡ ಕಾರಣ ಫುಟ್ಬಾಲ್-ಕ್ರೇಜಿಂಗ್ ದೇಶವು ರವಿವಾರದಿಂದ ಸಂಭ್ರಮಾಚರಣೆಯಲ್ಲಿ ಮುಳುಗಿದೆ. ತಂಡದ ಬಸ್ ವಿಮಾನ ನಿಲ್ದಾಣಕ್ಕೆ 3 ಗಂಟೆಗೆ ಆಗಮಿಸಿದ ನಂತರ ಜನಸಮೂಹವು ಬಸ್ ಅನ್ನು ಸುತ್ತುವರಿದರು. ಫೋಟೊ ತೆಗೆಸಿಕೊಳ್ಳಲು ಮುಗಿಬಿದ್ದರು ಕನಿಷ್ಠ 4 ಮಿಲಿಯನ್ ಜನರು ರಸ್ತೆಯಲ್ಲಿ  ಜಮಾಯಿಸಿದ ಕಾರಣ  ವಿಶ್ವಕಪ್ ವಿಜೇತ ತಂಡವು ರಸ್ತೆ ಮೂಲಕ ಬಸ್ ನಲ್ಲಿ ಸಾಗುವ ಯೋಜನೆ ಕೈಬಿಡಬೇಕಾಯಿತು.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಅಭಿಮಾನಿಯೊಬ್ಬ ಮೆಸ್ಸಿ ಸಾಗುತ್ತಿದ್ದ ತಂಡದ ಬಸ್‌ ಮೇಲೆ ಸೇತುವೆಯಿಂದ ಬೀಳುತ್ತಿರುವುದು ಕಂಡುಬಂದಿದೆ. ಅದೇ ಸಮಯದಲ್ಲಿ ಫುಟ್ಬಾಲ್ ಅಸೋಸಿಯೇಷನ್‌ನ ಮುಖ್ಯಸ್ಥ ಚಿಕ್ವಿ ಟಾಪಿಯಾ ಅವರು ಬಸ್‌ನಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದರು. ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ  ಬೆಂಬಲಿಗರಿಗೆ  ಅವರು ಕ್ಷಮೆಯಾಚಿಸಿದರು.

ಅರ್ಜೆಂಟೀನ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಅವರು ವಿಶ್ವಕಪ್ ಸಂಭ್ರಮಾಚರಣೆಗೆ ಮಂಗಳವಾರ ಸಾರ್ವತ್ರಿಕ ರಜೆ ಘೋಷಿಸಿದ ನಂತರ, ಸ್ಥಳೀಯ ಟಿವಿಯಲ್ಲಿ ಪ್ರಸಾರವಾದ ದೃಶ್ಯದಲ್ಲಿ  ಅರ್ಜೆಂಟೀನದ ಜನತೆ ಹೆದ್ದಾರಿಯ ಸೇತುವೆಗಳಲ್ಲಿ ತುಂಬಿ ತುಳುಕಿರುವುದು, ಲೈಟ್ ಪೋಸ್ಟ್‌ಗಳು ಮತ್ತು ವಾಹನಗಳನ್ನು ಹತ್ತಿ ವೀಕ್ಷಿಸುತ್ತಿರುವುದು , ಶರ್ಟ್‌ಗಳು ಮತ್ತು ಧ್ವಜಗಳನ್ನು ಬೀಸುತ್ತಿರುವುದನ್ನು ತೋರಿಸಿದೆ.

share
Next Story
X