Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಸಂಬಂಧದಲ್ಲಿ ಜನಿಸಿದ ಮಗು ಮೋಟಾರು...

ಅಕ್ರಮ ಸಂಬಂಧದಲ್ಲಿ ಜನಿಸಿದ ಮಗು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪರಿಹಾರ ಪಡೆಯಲು ಅರ್ಹ: ಹೈಕೋರ್ಟ್

21 Dec 2022 9:25 PM IST
share
ಅಕ್ರಮ ಸಂಬಂಧದಲ್ಲಿ ಜನಿಸಿದ ಮಗು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪರಿಹಾರ ಪಡೆಯಲು ಅರ್ಹ: ಹೈಕೋರ್ಟ್

ಬೆಂಗಳೂರು, ಡಿ.21: ವ್ಯಕ್ತಿಯೊಬ್ಬರಿಗೆ ಅಕ್ರಮ ಸಂಬಂಧದಿಂದ ಜನಿಸಿದ ಮಗವೂ ಕೂಡ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪರಿಹಾರ ಪಡೆಯಲು ಅರ್ಹ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು ಉತ್ತರದ ದೊಡ್ಡ ತೋಗೂರು ಗ್ರಾಮದ ಮಹಿಳೆ ಮೇಘನಾ(ಹೆಸರು ಬದಲಿಸಲಾಗಿದೆ) ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಪುತ್ರ ಹರೀಶ್(ಹೆಸರು ಬದಲಿಸಲಾಗಿದೆ) ಹಾಗೂ ಅಪಘಾತದಲ್ಲಿ ಸಾವನ್ನಪ್ಪಿದ ಮಲ್ಲಿಕಾರ್ಜುನನ ಪೋಷಕರು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

ಕೇಸ್‍ನಲ್ಲಿ ಒಟ್ಟು ಪರಿಹಾರದ ಮೊತ್ತವನ್ನು 13,28,940 ರೂ.ಗಳಿಗೆ ಹೆಚ್ಚಳ ಮಾಡಿದ್ದು, ಪ್ರಕರಣ ದಾಖಲಾದ ದಿನದಿಂದ ವಾರ್ಷಿಕವಾಗಿ ಶೇ.6ರಷ್ಟು ಬಡ್ಡಿಯೊಂದಿಗೆ ಪರಿಹಾರ ನೀಡಬೇಕು. ಅಪ್ರಾಪ್ತ ಮಗುವಿಗೆ ಪರಿಹಾರದ ಮೊತ್ತದ ಪೈಕಿ ಶೇ.4ರಷ್ಟು ಹಣಕ್ಕೆ ಅರ್ಹತೆ ಹೊಂದಿದ್ದು, ಅವರ ತಂದೆ-ತಾಯಿ ತಲಾ ಶೇ.30ರಷ್ಟು ಪರಿಹಾರದ ಮೊತ್ತಕ್ಕೆ ಅರ್ಹರಾಗಿದ್ದಾರೆ. ತಂದೆ-ತಾಯಿಗೆ 60 ವರ್ಷಗಳಾಗಿರುವುದರಿಂದ ಅವರ ಪಾಲಿನ ಪೂರ್ತಿ ಹಣವನ್ನು ನ್ಯಾಯ ಮಂಡಳಿ ಬಿಡುಗಡೆ ಮಾಡಬೇಕು. ಅಪ್ರಾಪ್ತ ಮಗುವಿಗೆ ಆತ ಪ್ರಾಪ್ತನಾಗುವವರೆಗೆ ಹಣವನ್ನು ನಿಶ್ಚಿತ ಠೇವಣಿ ರೂಪದಲ್ಲಿ ಇಡಬೇಕು ಎಂದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ. 

ಅಲ್ಲದೆ, ತಾಯಿ ಮೇಘನಾ, ಮಗುವಿನ ಶೈಕ್ಷಣಿಕ ಮತ್ತು ಇತರೆ ವೆಚ್ಚ ಭರಿಸಲು ನಿಶ್ಚಿತ ಠೇವಣಿಯಿಂದ ಬರುವ ಬಡ್ಡಿಯ ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪಡೆದುಕೊಳ್ಳಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಪ್ರಕರಣವೇನು: ಈ ಮೊದಲು ವ್ಯಕ್ತಿಯೊಬ್ಬರೊಂದಿಗೆ ಮದುವೆಯಾದ ನಂತರ ಮೇಘನಾ ಅವರಿಗೆ ಒಂದು ಹೆಣ್ಣು ಮಗುವೊಂದು ಜನಿಸಿತ್ತು. ನಂತರ ಆ ವ್ಯಕ್ತಿಯೊಂದಿಗೆ ವಿಚ್ಛೇದನವಾಗಿತ್ತು. 

ಇದಾದ ಬಳಿಕ ಆ ಮಹಿಳೆಗೆ ಬೇರೊಬ್ಬನ(ಸದ್ಯ ಮೃತಪಟ್ಟ ವ್ಯಕ್ತಿ) ಪರಿಚಯವಾಗಿದ್ದು, ಅಕ್ರಮ ಸಂಬಂಧಕ್ಕೆ ತಿರುಗಿತ್ತು. 2006ರ ಆ.8ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಮಧ್ಯೆ, ಆ ಮಹಿಳೆಯೊಂದಿಗೆ ಸಂಬಂಧದಲ್ಲಿದ್ದ ವ್ಯಕ್ತಿ ಕಾರಿನಲ್ಲಿ ತೆರಳುತ್ತಿದ್ದಾಗ ಕ್ಯಾಬ್ ನಡುವೆ ಸಂಭವಿಸಿದ ಅಪಘಾತದಲ್ಲಿ 2012ರ ಆ.23ರಂದು ಸಾವನ್ನಪ್ಪಿದ್ದನು. ಆ ಮಹಿಳೆ ಮತ್ತು ಅಪ್ರಾಪ್ತ ಮಗು ಸೇರಿದಂತೆ ಮೃತ ವ್ಯಕ್ತಿಯ ತಂದೆ-ತಾಯಿಯು ಪ್ರತ್ಯೇಕವಾಗಿ ಪರಿಹಾರ ಕೋರಿ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಪ್ರತಿವಾದಿ ಶ್ರೀರಾಮ್ ಇನ್ಶೂರೆನ್ಸ್ ಕಂಪೆನಿಯು ಮಹಿಳೆ ಮತ್ತು ಮೃತ ವ್ಯಕ್ತಿ ಇಬ್ಬರೂ ಮದುವೆಯಾಗಿಲ್ಲ. ಅಲ್ಲದೇ ಮಗುವನ್ನೂ ಪಡೆದಿಲ್ಲ ಎಂದು ಪೀಠಕ್ಕೆ ತಿಳಿಸಿತ್ತು.

ದಾಖಲೆಗಳನ್ನು ಪರಿಶೀಲಿಸಿದ್ದ ನ್ಯಾಯ ಮಂಡಳಿಯು, ಮೃತ ವ್ಯಕ್ತಿಯ ತಂದೆ-ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿ, ಮಹಿಳೆ ಮತ್ತು ಆಕೆಯ ಮಗು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಆ ಮಹಿಳೆ ಮತ್ತು ಅಪ್ರಾಪ್ತ ಮಗು ಅಲ್ಲದೇ ಮೃತ ವ್ಯಕ್ತಿಯ ಪೋಷಕರು ಪರಿಹಾರ ಹೆಚ್ಚಳ ಮಾಡುವಂತೆ ಕೋರಿ ಹೈಕೋರ್ಟ್‍ನಲ್ಲಿ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಅಕ್ರಮ ಸಂಬಬಂಧದ ಮಗುವಿಗೂ ಪರಿಹಾರ ನೀಡಬೇಕು ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ನಂ.1 ಸ್ಥಾನ ನನಗೆ ಮಾತ್ರ ದಕ್ಕಬೇಕೆಂಬ ಅಹಂ ಬಿಟ್ಟುಬಿಡಿ: ನಟಿ ರಮ್ಯಾ ಭಾವನಾತ್ಮಕ ಮನವಿ

share
Next Story
X