Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 19 ವರ್ಷಗಳ ನಂತರ ಸರಣಿ ಹಂತಕ ಚಾರ್ಲ್ಸ್...

19 ವರ್ಷಗಳ ನಂತರ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ ನೇಪಾಳ ಜೈಲಿನಿಂದ ಬಿಡುಗಡೆ

ಹಲವು ದೇಶಗಳನ್ನು ಬೆಚ್ಚಿಬೀಳಿಸಿದ್ದ ಹಂತಕನ ಬಗ್ಗೆ ಇಲ್ಲಿದೆ ವಿವರ

21 Dec 2022 9:48 PM IST
share
19 ವರ್ಷಗಳ ನಂತರ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ ನೇಪಾಳ ಜೈಲಿನಿಂದ ಬಿಡುಗಡೆ
ಹಲವು ದೇಶಗಳನ್ನು ಬೆಚ್ಚಿಬೀಳಿಸಿದ್ದ ಹಂತಕನ ಬಗ್ಗೆ ಇಲ್ಲಿದೆ ವಿವರ

ಕಠ್ಮಂಡು: ನೇಪಾಳದ ಸರ್ವೋಚ್ಚ ನ್ಯಾಯಾಲಯವು ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಅವರ ಆರೋಗ್ಯ ಸ್ಥಿತಿ ಮತ್ತು ವಯಸ್ಸಿನ ಕಾರಣ ನೀಡಿ ಆತನನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಿದ್ದ 'ಸರ್ಪೆಂಟ್' ಚಿತ್ರ ಸರಣಿಯ ಕಥಾನಾಯಕ ಹಾಗೂ ಫ್ರೆಂಚ್ ಮೂಲದ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್‌ 19 ವರ್ಷಗಳ ಸುದೀರ್ಘ ಸೆರೆವಾಸದಿಂದ ಚಾರ್ಲ್ಸ್ ಶೋಭರಾಜ್ ಬಿಡುಗಡೆಯಾಗುತ್ತಿದ್ದಾನೆ.

ಫ್ರೆಂಚ್ ಪ್ರಜೆಯಾಗಿದ್ದ ಚಾರ್ಲ್ಸ್‌ ಶೋಬರಾಜ್‌, 1970 ರ ದಶಕದಲ್ಲಿ ಏಶ್ಯಾದಾದ್ಯಂತ ಸರಣಿ ಕೊಲೆಗಳನ್ನು ಮಾಡಿ ಬೆಚ್ಚಿ ಬೀಳಿಸಿದ್ದ ಹಂತಕನಾಗಿದ್ದು, ಆತ 20 ಕ್ಕೂ ಹೆಚ್ಚು ಹತ್ಯೆಗಳನ್ನು ಮಾಡಿದ್ದಾನೆ. ಶೋಬರಾಜ್‌, ಫ್ರೆಂಚ್ ಪ್ರವಾಸಿಯೊಬ್ಬರಿಗೆ ವಿಷ ನೀಡಿದ ಹಾಗೂ ಇಸ್ರೇಲಿ ಪ್ರಜೆಯನ್ನು ಕೊಂದ ಪ್ರಕರಣದಲ್ಲಿ ಭಾರತದಲ್ಲಿ 21 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾನೆ.

ಶೋಭರಾಜ್ ಹಾಂಗ್ ಕಾಂಗ್‌ ನ ನಕಲಿ ಗುರುತಿ ಚೀಟಿಯೊಂದಿಗೆ ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದ ವೇಳೆ, ನೇಪಾಳದ ರಾಜಧಾನಿ ಕಠ್ಮಂಡುವಿನ ಕ್ಯಾಸಿನೊ ಒಂದರಿಂದ ಪೊಲೀಸರು ಬಂಧಿಸಿದ್ದರು.  2003 ರಿಂದ ನೇಪಾಳಿ ಜೈಲಿನಲ್ಲಿರುವ ಶೋಬರಾಜ್‌ಗೆ ಈಗ 78 ವರ್ಷ ವಯಸ್ಸಾಗಿದೆ. ಇಬ್ಬರು ಅಮೆರಿಕನ್ ಪ್ರವಾಸಿಗರನ್ನು ಕೊಂದ ಆರೋಪದ ಮೇಲೆ ಆತನನ್ನು ನೇಪಾಳಿ ಜೈಲಿನಲ್ಲಿ ಇರಿಸಲಾಗಿತ್ತು.

ಬುಧವಾರ, ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠಾ ಅವರ ಪೀಠವು ಶೋಭರಾಜ್ ಅವರಿಗೆ ಹೃದಯ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಕೊಲೆ ಆರೋಪದ ಮೇಲೆ ತನಗೆ ಶಿಫಾರಸು ಮಾಡಿದ ಅವಧಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇರಿಸಲಾಗಿದೆ ಎಂದ ವಾದಿಸಿದ್ದ ಶೋಭರಾಜ್, ವೃದ್ಧಾಪ್ಯದ ಆಧಾರದ ಮೇಲೆ ತನ್ನ ಶಿಕ್ಷೆಯಲ್ಲಿ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಆತನ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.

ಡಿಸೆಂಬರ್ 1975 ರಲ್ಲಿ ಅಮೇರಿಕನ್ ಪ್ರಜೆ ಕೋನಿ ಜೋ ಬ್ರೋಂಜಿಚ್ ಮತ್ತು ಕೆನಡಾದ ಪ್ರಜೆ ಲಾರೆಂಟ್ ಕ್ಯಾರಿಯರ್ ಎಂಬವರ ಹತ್ಯೆಗಾಗಿ ಭಕ್ತಾಪುರದ ಜಿಲ್ಲಾ ನ್ಯಾಯಾಲಯವು ಶೋಬರಾಜ್‌ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ನ್ಯಾಯಾಲಯದ ತೀರ್ಪಿನ ಪ್ರಕಾರ, ಜೀವಾವಧಿ ಶಿಕ್ಷೆಯ ಅವಧಿಯ ಪ್ರಕಾರ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲು ಶೋಭರಾಜ್ ಸೆಪ್ಟೆಂಬರ್ 18, 2023 ರವರೆಗೆ ಜೈಲಿನಲ್ಲಿ ಇರಬೇಕಾಗಿತ್ತು.

ತಾನು ಶಿಕ್ಷೆಯ 20 ವರ್ಷಗಳಲ್ಲಿ 17 ವರ್ಷಗಳನ್ನು ಈಗಾಗಲೇ ಪೂರೈಸಿದ್ದೇನೆ ಮತ್ತು ಉತ್ತಮ ನಡವಳಿಕೆಗಾಗಿ ಈಗಾಗಲೇ ಬಿಡುಗಡೆಗೆ ಶಿಫಾರಸು ಮಾಡಲಾಗಿದೆ ಎಂದು ಶೋಭರಾಜ್‌ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಶೋಭರಾಜ್‌ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ನೇಪಾಳ ಸರ್ಕಾರವು ಶೋಭರಾಜ್ ಅವರ ಅಪರಾಧಕ್ಕೆ ವಿನಾಯಿತಿ ನೀಡಲಾಗಿಲ್ಲ ಮತ್ತು ಅವರು ವಿದೇಶಿ ಪ್ರಜೆಯಾಗಿರುವುದರಿಂದ ಅವರಿಗೆ ವಿನಾಯಿತಿ ನೀಡಲಾಗುವುದಿಲ್ಲ ಎಂದು ಹೇಳಿತ್ತು.

"ಅಪರಾಧಿಗೆ ವಯಸ್ಸು, ಕಾಯಿಲೆ ಅಥವಾ ಇತರ ಕಾರಣಗಳಿಂದ ವಿನಾಯಿತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಜೈಲು ಶಿಕ್ಷೆಯನ್ನು ಕಡಿಮೆ ಮಾಡಬಹುದಾದರೂ, ಕೊಲೆ, ಕಳ್ಳಸಾಗಣೆ, ಅತ್ಯಾಚಾರ, ಪರಾರಿ ಇತ್ಯಾದಿ ಪ್ರಕರಣಗಳಲ್ಲಿ ಅದನ್ನು ಕಡಿಮೆ ಮಾಡಲು ಸಾಧ್ಯವಿಲ್ಲ" ಎಂದು ಸರ್ಕಾರ ಹೇಳಿತ್ತು. 

ಅದಾಗ್ಯೂ, ಆರೋಗ್ಯ ಮತ್ತು ವಯಸ್ಸಿನ ಆಧಾರದ ಮೇಲೆ ಶೋಭರಾಜ್‌ನನ್ನು ಬಿಡುಗಡೆ ಮಾಡುವ ತೀರ್ಪು ನೀಡಿರುವ ನ್ಯಾಯಾಲಯವು ಆತನನ್ನು ಗಡಿಪಾರು ಮಾಡಲು ಆದೇಶಿಸಿದೆ. ಆದರೆ ಅವರನ್ನು ಎಲ್ಲಿಗೆ ಗಡೀಪಾರು ಮಾಡಲಾಗುವುದು ಎಂದು ನಮೂದಿಸಿಲ್ಲ ಎಂದು ANI ವರದಿ ಮಾಡಿದೆ.

share
Next Story
X