Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಕ್ತಿಯ ಅಪಹರಣ ಪ್ರಯತ್ನವನ್ನು...

ವ್ಯಕ್ತಿಯ ಅಪಹರಣ ಪ್ರಯತ್ನವನ್ನು ಚಾಣಾಕ್ಷತೆಯಿಂದ ತಡೆದ ರಿಕ್ಷಾ ಚಾಲಕ

21 Dec 2022 11:06 PM IST
share
ವ್ಯಕ್ತಿಯ ಅಪಹರಣ ಪ್ರಯತ್ನವನ್ನು ಚಾಣಾಕ್ಷತೆಯಿಂದ ತಡೆದ ರಿಕ್ಷಾ ಚಾಲಕ

ಹೊಸದಿಲ್ಲಿ: ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗುಂಪೊಂದು ಬಲವಂತವಾಗಿ ಕಾರಿಗೆ ಎಳೆದುಕೊಂಡಾಗ ಸಮಯ ಪ್ರಜ್ಞೆ ಮೆರೆದಿರುವ ಆಟೋ ಚಾಲಕ, ಆಟೋವನ್ನು ಕಾರಿಗೆ ಅಡ್ಡಲಾಗಿ ಚಲಾಯಿಸಿ ಅಪಹರಣ ಯತ್ನವನ್ನು ವಿಫಲಗೊಳಿಸಿರುವ ಘಟನೆ ಆಗ್ನೇಯ ದಿಲ್ಲಿಯ ಕಲ್ಕಾಜಿ ಪ್ರದೇಶದಿಂದ ವರದಿಯಾಗಿದೆ.

ರವಿವಾರ ಈ ಅಪಹರಣ ಪ್ರಯತ್ನ ನಡೆದಿದ್ದು, ಘಟನೆಯ ಸಂಬಂಧ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಗಳನ್ನು  ಉತ್ತರ ಪ್ರದೇಶದ ಸಾಹಿಬಾಬಾದ್ ನಿವಾಸಿ ಇಕ್ರಾಕ್ ಅಲಿ (27) ಹಾಗೂ ಸುಂದರ್ ನಗ್ರಿ ನಿವಾಸಿ ಅನುರಾಧ ಅಲಿಯಾಸ್ ಪ್ರೀತಿ ಗುಪ್ತ (19) ಎಂದು ಗುರುತಿಸಲಾಗಿದೆ.

ರವಿವಾರ ಸಂಜೆ 6.50ಕ್ಕೆ ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲಿ ಹಾಗೂ ಅನುರಾಧ ಇಬ್ಬರೂ ಅಪಹರಣಕ್ಕೀಡಾಗಿದ್ದ ಜಾವೇದ್‌ರೊಂದಿಗೆ ಕಾರಿನಲ್ಲಿ ಸೆರೆಯಾಗಿರುವುದು ಕಂಡು ಬಂದಿತ್ತು.

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ನನ್ನ ಇತರ ಸಹಚರರೊಂದಿಗೆ ನಾನು ಜಾವೇದ್ ಅವರನ್ನು ಹನಿಟ್ರ್ಯಾಪ್ ಮಾಡುವ ಪಿತೂರಿಯ ಭಾಗವಾಗಿದ್ದೆ ಎಂದು ಅನುರಾಧ ಬಹಿರಂಗ ಪಡಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಜಾವೇದ್ ಶ್ರೀಮಂತ ಕುಟುಂಬಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಆತನನ್ನು ಅಪಹರಿಸಿದರೆ ದೊಡ್ಡ ಮೊತ್ತದ ಹಣವನ್ನು ಸುಲಿಗೆ ಮಾಡಬಹುದು ಎಂದು ನನ್ನ ಸಹಚರರು ನನಗೆ ತಿಳಿಸಿದ್ದರು ಎಂದು ತನಿಖೆಯ ವೇಳೆ ಅನುರಾಧ ಬಾಯ್ಬಿಟ್ಟಿದ್ದಾಳೆ.

ಜಾವೇದ್‌ರನ್ನು ಅಪಹರಣ ಮಾಡುವ ಮುನ್ನ ಮೂವರು ಆರೋಪಿಗಳು ಅನುರಾಧಳನ್ನು ಭೇಟಿ ಮಾಡುವಂತೆ ಎರಡು ಬಾರಿ ಅವರಿಗೆ ಸೂಚಿಸಿದ್ದರು. ಆದರೆ, ಆ ಎರಡು ಬಾರಿಯೂ ಅನುರಾಧಳನ್ನು ಭೇಟಿ ಮಾಡಲು ಜಾವೇದ್ ನಿರಾಕರಿಸಿದ್ದರು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಆಗ್ನೇಯ ವಿಭಾಗ) ಸುರೇಂದ್ರ ಚೌಧರಿ ತಿಳಿಸಿದ್ದಾರೆ.

ಅನುರಾಧ ವಾಟ್ಸ್ ಆ್ಯಪ್ ಸಂಭಾಷಣೆ ಹಾಗೂ ಕರೆಗಳ ಮೂಲಕ ಜಾವೇದ್ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗಿದೆ.

share
Next Story
X