Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಲಸಕ್ಕೆ ವಾಪಸಾಗಿ ಇಲ್ಲವೇ ವೇತನ...

ಕೆಲಸಕ್ಕೆ ವಾಪಸಾಗಿ ಇಲ್ಲವೇ ವೇತನ ಕಳೆದುಕೊಳ್ಳಲು ಸಿದ್ಧರಾಗಿ: ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಆಡಳಿತ ಎಚ್ಚರಿಕೆ

22 Dec 2022 4:14 PM IST
share
ಕೆಲಸಕ್ಕೆ ವಾಪಸಾಗಿ ಇಲ್ಲವೇ ವೇತನ ಕಳೆದುಕೊಳ್ಳಲು ಸಿದ್ಧರಾಗಿ: ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಆಡಳಿತ ಎಚ್ಚರಿಕೆ

ಜಮ್ಮು,ಡಿ.22: ತವರು ಜಿಲ್ಲೆಗೆ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಶ್ಮೀರ ಕಣಿವೆಯಲ್ಲಿ ನಿಯೋಜಿತ ಕಾಶ್ಮೀರಿ ಪಂಡಿತ ನೌಕರರಿಗೆ ಕೆಲಸಕ್ಕೆ ಮರಳುವಂತೆ ಸ್ಪಷ್ಟ ಸಂದೇಶವನ್ನು ರವಾನಿಸಿರುವ ಜಮ್ಮು-ಕಾಶ್ಮೀರದ ಉಪ ರಾಜ್ಯಪಾಲ ಮನೋಜ ಸಿನ್ಹಾ ಅವರು,ಮನೆಯಲ್ಲಿ ಕುಳಿತುಕೊಳ್ಳುವದಕ್ಕೆ ವೇತನಗಳನ್ನು ನೀಡಲಾಗುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಉಗ್ರಗಾಮಿಗಳಿಂದ ತಮ್ಮ ಸಮುದಾಯದವರ ಉದ್ದೇಶಿತ ಹತ್ಯೆಗಳ ಬಳಿಕ ಕಳೆದ ಮೇ ತಿಂಗಳಲ್ಲಿ ಕಾಶ್ಮೀರ ಕಣಿವೆಯನ್ನು ತೊರೆದಿದ್ದ ಪಂಡಿತ ನೌಕರರು ಪ್ರಧಾನ ಮಂತ್ರಿ ವಿಶೇಷ ಉದ್ಯೋಗ ಯೋಜನೆಯಡಿ ಕಣಿವೆಗೆ ಮರಳಿದ್ದಾರಾದರೂ ಕಳೆದ ಆರು ತಿಂಗಳುಗಳಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. ಪ್ರತಿಭಟನೆಯಲ್ಲಿ ತೊಡಗಿರುವ ಅವರು,ಉಗ್ರರ ಉದ್ದೇಶಿತ ದಾಳಿಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳ ಕೊರತೆಯಿಂದಾಗಿ ತಮ್ಮನ್ನು ಕಣಿವೆಯಿಂದ ಹೊರಗೆ ವರ್ಗಾಯಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

 ಕಾಶ್ಮೀರಿ ನೌಕರರ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಅವರನ್ನು ಜಮ್ಮುವಿಗೆ ಮರುವರ್ಗಾವಣೆಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭ ಸ್ಪಷ್ಟವಾಗಿ ಹೇಳಿದ ಸಿನ್ಹಾ,‘ಪ್ರತಿಭಟನಾನಿರತರ ಆ.31ರವರೆಗಿನ ವೇತನಗಳನ್ನು ನಾವು ಪಾವತಿಸಿದ್ದೇವೆ,ಆದರೆ ಅವರು ಮನೆಗಳಲ್ಲಿ ಕುಳಿತಿದ್ದಕ್ಕಾಗಿ ಅವರಿಗೆ ವೇತನಗಳನ್ನು ಪಾವತಿಸಲು ಸಾಧ್ಯವಿಲ್ಲ. ಇದು ಅವರಿಗೆ ಸ್ಪಷ್ಟವಾದ ಸಂದೇಶವಾಗಿದೆ. ಅವರು ಇದನ್ನು ಆಲಿಸಬೇಕು ಮತ್ತು ಅರ್ಥ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಭವಿಷ್ಯದಲ್ಲಿ ಉಗ್ರರ ಯಾವುದೇ ದಾಳಿಗಳಿಂದ ಪಂಡಿತ ನೌಕರರನ್ನು ರಕ್ಷಿಸಲು ಎಲ್ಲ ಭದ್ರತಾ ವ್ಯವಸ್ಥೆಗಳು ಜಾರಿಯಲ್ಲಿವೆ ಎಂದು ಒತ್ತಿ ಹೇಳಿದ ಸಿನ್ಹಾ,ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಪಂಡಿತ ನೌಕರರನ್ನು ಈಗಾಗಲೇ ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರನ್ನು ಈಗಾಗಲೇ ತಾಲೂಕು ಮತ್ತು ಜಿಲ್ಲಾ ಕೇಂದ್ರಕ್ಕೆ ಸಮೀಪದ ಗ್ರಾಮಗಳಿಗೆ ನಿಯೋಜಿಸಲಾಗಿದೆ ಎಂದರು.
ಜಮ್ಮು-ಕಾಶ್ಮೀರ ಆಡಳಿತವು ಕಾಶ್ಮೀರಿ ಪಂಡಿತರ ಕುಂದುಕೊರತೆಗಳನ್ನು ಪರಿಶೀಲಿಸಲು ಪ್ರತಿ ಜಿಲ್ಲೆಯಲ್ಲಿ ಮತ್ತು ರಾಜಭವನದಲ್ಲಿ ಅಧಿಕಾರಿಗಳನ್ನು ನೇಮಕಗೊಳಿಸಿದೆ ಎಂದು ಸಿನ್ಹಾ ತಿಳಿಸಿದರು.

ಸಿನ್ಹಾ ಹೇಳಿಕೆಯ ಬಳಿಕ ವಲಸಿಗ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಕಳೆದ ಮೂರು ತಿಂಗಳುಗಳಿಂದ ಕಣಿವೆಯಿಂದ ವರ್ಗಾವಣೆಗೆ ಆಗ್ರಹಿಸಿ ತಾವು ನಡೆಸುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಲಷ್ಕರೆ ತೈಬಾದೊಂದಿಗೆ ಗುರುತಿಸಿಕೊಂಡಿರುವ ಉಗ್ರವಾದಿ ಸಂಘಟನೆಯು ಕಾಶ್ಮೀರಿ ಪಂಡಿತ ಉದ್ಯೋಗಿಗಳ ಹಿಟ್ ಲಿಸ್ಟ್ಗಳನ್ನು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆಯ ಅನುಪಸ್ಥಿತಿಯಲ್ಲಿ ತಾವು ಕಣಿವೆಯಲ್ಲಿ ತಮ್ಮ ಕೆಲಸಗಳಿಗೆ ಮರಳುವುದಿಲ್ಲ. ಹೀಗಾಗಿ ತಮ್ಮನ್ನು ಸೇವೆಗಳಿಂದ ವಜಾಗೊಳಿಸುವುದು ಸರಕಾರಕ್ಕೆ ಉತ್ತಮ ಆಯ್ಕೆಯಾಗಿದೆ ಎಂದು ಜಮ್ಮುವಿನ ಪ್ರೆಸ್ ಕ್ಲಬ್ನೆದುರು ಪ್ರತಿಭಟನೆಯನ್ನು ನಡೆಸುತ್ತಿದ್ದ ಕಾಶ್ಮೀರಿ ಪಂಡಿತರು ಹೇಳಿದರು.

share
Next Story
X