ಮಂಡ್ಯ: ಪಂಚರತ್ನ ರಥಯಾತ್ರೆ ವೇಳೆ ಗುಂಡ್ಲುಪೇಟೆ ಜೆಡಿಎಸ್ ಅಭ್ಯರ್ಥಿಯ ಹೆಸರು ಘೋಷಿಸಿದ ಕುಮಾರಸ್ವಾಮಿ
![ಮಂಡ್ಯ: ಪಂಚರತ್ನ ರಥಯಾತ್ರೆ ವೇಳೆ ಗುಂಡ್ಲುಪೇಟೆ ಜೆಡಿಎಸ್ ಅಭ್ಯರ್ಥಿಯ ಹೆಸರು ಘೋಷಿಸಿದ ಕುಮಾರಸ್ವಾಮಿ ಮಂಡ್ಯ: ಪಂಚರತ್ನ ರಥಯಾತ್ರೆ ವೇಳೆ ಗುಂಡ್ಲುಪೇಟೆ ಜೆಡಿಎಸ್ ಅಭ್ಯರ್ಥಿಯ ಹೆಸರು ಘೋಷಿಸಿದ ಕುಮಾರಸ್ವಾಮಿ](https://www.varthabharati.in/sites/default/files/images/articles/2022/12/22/360960-1671728338.jpg)
ಮಂಡ್ಯ, ಡಿ.22: ಮುಂಬರಲಿರುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ವಿಧಾಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಡಬೂರು ಮಂಜುನಾಥ್ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಗುರುವಾರ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಜೆಡಿಎಸ್ನ ಪಂಚರತ್ನ ರಥಯಾತ್ರೆ ಸಂದರ್ಭ ಗುಂಡ್ಲುಪೇಟೆಯ ಕಡಬೂರು ಮಂಜುನಾಥ್ ಮತ್ತು ಅವರ ಹಲವಾರು ಬೆಂಬಲಿಗರು ಜೆಡಿಎಸ್ಗೆ ಸೇರ್ಪಡೆಯಾದರು.
ಈ ವೇಳೆ ಮಂಜುನಾಥ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿದ ಕುಮಾರಸ್ವಾಮಿ, ಸ್ಥಳದಲ್ಲಿಯೇ ಮಂಜುನಾಥ್ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯ ಗುಂಡ್ಲುಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಿದರು.
Next Story