Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನ್ಯತೆ ರದ್ದಾಗಿದ್ದ ಅಮೆರಿಕಾದ ವಿವಿ...

ಮಾನ್ಯತೆ ರದ್ದಾಗಿದ್ದ ಅಮೆರಿಕಾದ ವಿವಿ ಜೊತೆ 35,000 ಕೋಟಿ ರೂ.ಗಳ ಒಡಂಬಡಿಕೆ ಮಾಡಿಕೊಂಡ ಉತ್ತರ ಪ್ರದೇಶ ಸರ್ಕಾರ!

22 Dec 2022 9:11 PM IST
share
ಮಾನ್ಯತೆ ರದ್ದಾಗಿದ್ದ ಅಮೆರಿಕಾದ ವಿವಿ ಜೊತೆ 35,000 ಕೋಟಿ ರೂ.ಗಳ ಒಡಂಬಡಿಕೆ ಮಾಡಿಕೊಂಡ ಉತ್ತರ ಪ್ರದೇಶ ಸರ್ಕಾರ!

ಲಕ್ನೊ: ಉತ್ತರ ಪ್ರದೇಶ ಸರಕಾರವು 35,000 ಕೋಟಿ ರೂ. ವೆಚ್ಚದಲ್ಲಿ ನಾಲೆಡ್ಜ್ ಸ್ಮಾರ್ಟ್ ಸಿಟಿ ನಿರ್ಮಾಣಕ್ಕಾಗಿ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಟಿನ್ ವಿಶ್ವವಿದ್ಯಾಲಯದ ಜೊತೆ ಒಡಂಬಡಿಕೆ (ಎಂಒಯು)ಯನ್ನು ಮಾಡಿಕೊಂಡಿರುವುದಾಗಿ ಡಿ.18ರಂದು ಅಧಿಕೃತ ಹೇಳಿಕೆಯನ್ನು ನೀಡಿದೆ. ವಿದೇಶಗಳಿಂದ ಹೂಡಿಕೆಗಳನ್ನು ಆಕರ್ಷಿಸುವ ತನ್ನ ಇತ್ತೀಚಿನ ಪ್ರಯತ್ನಗಳ ಭಾಗವಾಗಿ ಸರಕಾರವು ಸಹಿ ಹಾಕಿರುವ ಹಲವಾರು ಒಡಂಬಡಿಕೆಗಳಲ್ಲಿ ಇದೂ ಒಂದಾಗಿದೆ ಎಂದು ಹೇಳಿಕೆಯು ಬಣ್ಣಿಸಿದೆ. ಆದರೆ ಸರಕಾರದ ಪ್ರಕಟಣೆಗೆ 10 ದಿನಗಳ ಮೊದಲೇ ವಿವಿಯ ಮಾನ್ಯತೆ ರದ್ದುಗೊಂಡಿರುವುದನ್ನು ಅಮೆರಿಕದ ಅಧಿಕೃತ ದಾಖಲೆಗಳನ್ನು ಉಲ್ಲೇಖಿಸಿ indianexpress.com ವರದಿ ಮಾಡಿದೆ.

ಈ ಕುರಿತು ಬುಧವಾರ ಸ್ಪಷ್ಟೀಕರಣ ನೀಡಿರುವ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಮೂಲಸೌಕರ್ಯ ಮತ್ತು ಅಭಿವೃದ್ಧಿ) ಅರವಿಂದ್ ಕುಮಾರ್ ಅವರು, ಒಡಂಬಡಿಕೆಯನ್ನು ‘ಆಸ್ಟಿನ್ ಕನ್ಸಲ್ಟಿಂಗ್ ಗ್ರೂಪ್’ನೊಂದಿಗೆ ಮಾಡಿಕೊಳ್ಳಲಾಗಿದೆಯೇ ಹೊರತು ಆಸ್ಟಿನ್ ವಿವಿಯೊಂದಿಗಲ್ಲ ಎಂದು ತಿಳಿಸಿದ್ದಾರೆ.

ಈಜಿಪ್ಟ್‌ನ ರಾಜಮನೆತನಕ್ಕೆ ಸೇರಿದ ಅಮೆರಿಕನ್ ಪ್ರಜೆ ಎಂದು indianexpress.com ಜೊತೆ ಸಂದರ್ಶನದಲ್ಲಿ ತನ್ನನ್ನು ಬಣ್ಣಿಸಿಕೊಂಡಿರುವ ಅಷ್ರಫ್ ಅಲ್ ಮುಸ್ತಫಾ ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಟಿನ್ ವಿಶ್ವವಿದ್ಯಾಲಯ ಹಾಗೂ ಆಸ್ಟಿನ್ ಕನ್ಸಲ್ಟಿಂಗ್ ಗ್ರೂಪ್ ಹಿಂದಿರುವ ವ್ಯಕ್ತಿಯಾಗಿದ್ದಾರೆ ಎಂದೂ ದಾಖಲೆಗಳು ತೋರಿಸಿವೆ.
ಕ್ಯಾಲಿಫೋರ್ನಿಯಾದ ಗ್ರಾಹಕ ಮತ್ತು ವ್ಯವಹಾರಗಳ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಟಿನ್ ವಿಶ್ವವಿದ್ಯಾಲಯಕ್ಕೆ ಮಾನ್ಯತೆರಹಿತ ಪ್ರೌಢಶಿಕ್ಷಣೋತ್ತ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲು 2011ರಲ್ಲಿ ನೀಡಲಾಗಿದ್ದ ಅನುಮತಿಯನ್ನು ಡಿಸೆಂಬರ್ 8, 2022ರಂದು ರದ್ದುಗೊಳಿಸಲಾಗಿದೆ ಮತ್ತು ಅದಕ್ಕೆ 9965 ಡಾಲರ್ ದಂಡವನ್ನೂ ವಿಧಿಸಲಾಗಿದೆ.

ಇದಲ್ಲದೆ, ಅಮೆರಿಕಾ ಸರಕಾರದ ನಿಯಮಾವಳಿಗಡಿ ವಿವಿಯು 2016-2020ರ ನಡುವಿನ ತನ್ನ ಸಾಧನೆಯ ವಾಸ್ತವ ವರದಿಯನ್ನು  ವಾಸ್ತವ ಸ್ಥಿತಿಯ ಪ್ರತಿಯನ್ನು ತನ್ನ  ಜಾಲತಾಣದಲ್ಲಿ ಪ್ರಕಟಿಸಿದ್ದು, ಅದರಂತೆ ತಾನು ಎಂಬಿಎ ಪದವಿ ತರಗತಿಗಳನ್ನು ನಡೆಸುತ್ತಿರುವುದಾಗಿ ಹೇಳಿಕೊಂಡಿದೆಯಾದರೂ, ಆ ಕೋರ್ಸ್‌ಗೆ ಯಾವುದೇ ವಿದ್ಯಾರ್ಥಿ ನೋಂದಾಯಿಸಿಕೊಂಡಿಲ್ಲ.

‘ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಒಂದು ಹಾಗೂ ಈಜಿಪ್ಟ್‌ನಲ್ಲಿ ಇನ್ನೊಂದು ಯೋಜನೆಗಾಗಿ ಲಾಭಕ್ಕಾಗಿ ಕೆಲಸ ಮಾಡುವ ಆಸ್ಟಿನ್ ಕನ್ಸಲ್ಟಿಂಗ್ ಗ್ರೂಪ್‌ನ್ನು ಇತ್ತೀಚಿಗಷ್ಟೇ ಸ್ಥಾಪಿಸಿದ್ದೇನೆ. ನಾನು ಆಸ್ಟಿನ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷನೂ ಆಗಿದ್ದು, ಅದು ಲಾಭರಹಿತ ಸಂಸ್ಥೆಯಾಗಿದೆ. ಆದರೆ ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ತನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮುಸ್ತಫಾ ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರಕಾರವು ಒಡಂಬಡಿಕೆಯ ಪ್ರಕಟಣೆಯೊಂದಿಗೆ ಹಂಚಿಕೊಂಡಿರುವ ಚಿತ್ರಗಳು ಒಡಂಬಡಿಕೆಗೆ ಸಹಿ ಹಾಕಿದ ಸಂದರ್ಭದಲ್ಲಿ  ರಾಜ್ಯ ಹಣಕಾಸು ಸಚಿವ ಸುರೇಶ್ ಖನ್ನಾ ಮತ್ತು ಮಾಜಿ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರೊಂದಿಗೆ ಮುಸ್ತಫಾ ಉಪಸ್ಥಿತಿಯನ್ನು ತೋರಿಸಿವೆ.

San Francisco, US | UP Govt signed MoU with Austin University for a US$ 42 Bn project-Austin Smart City of Knowledge, in UP

UP Min Suresh Khanna, ex-min Sidharth Nath Singh, Addl Chief Secy, Infrastructure & Industrial Development Arvind Kumar&others were present on the occasion pic.twitter.com/lUXLDQ7W1v

— ANI UP/Uttarakhand (@ANINewsUP) December 18, 2022
share
Next Story
X