Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಮಾಹಿತಿ ಹರಡಿದ್ದಕ್ಕಾಗಿ 104...

ಸುಳ್ಳು ಮಾಹಿತಿ ಹರಡಿದ್ದಕ್ಕಾಗಿ 104 ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಕೇಂದ್ರ ಸರಕಾರ

22 Dec 2022 9:58 PM IST
share
ಸುಳ್ಳು ಮಾಹಿತಿ ಹರಡಿದ್ದಕ್ಕಾಗಿ 104 ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ: ಕೇಂದ್ರ ಸರಕಾರ

ಹೊಸದಿಲ್ಲಿ,ಡಿ.22: ವದಂತಿಗಳು ಮತ್ತು ಭೀತಿಯನ್ನು ಸೃಷ್ಟಿಸಲು ಕಾರಣವಾಗಬಹುದಾದ ‘ಸುಳ್ಳು’ (lie)ಮತ್ತು ‘ದಾರಿ ತಪ್ಪಿಸುವ’(Misleading) ಮಾಹಿತಿಗಳನ್ನು ಹರಡುತ್ತಿದ್ದಕ್ಕಾಗಿ ಸರಕಾರವು 104 ಯೂಟ್ಯೂಬ್ ಚಾನೆಲ್‌(YouTube channel)ಗಳನ್ನು ಮತ್ತು 45 ಯೂಟ್ಯೂಬ್ ವೀಡಿಯೊಗಳನ್ನು ನಿರ್ಬಂಧಿಸಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್(Anurag Thakur) ಅವರು ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದರು.

ಯೂಟ್ಯೂಬ್ ಈ ವಾರದ ಆರಂಭದಲ್ಲಿ ಸಚಿವಾಲಯದ ನಿರ್ದೇಶನದ ಮೇರೆಗೆ ಸರ್ವೋಚ್ಚ ನ್ಯಾಯಾಲಯ,ಭಾರತದ ಮುಖ್ಯ ನ್ಯಾಯಾಧೀಶರು,ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ಕುರಿತು ತಪ್ಪು ಮಾಹಿತಿಗಳನ್ನು ಹರಡಿದ್ದ ಆರೋಪದಲ್ಲಿ 30 ಕೋಟಿಗೂ ಅಧಿಕ ವೀಕ್ಷಕರನ್ನು ಮತ್ತು 33 ಲಕ್ಷ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದ ಮೂರು ಚಾನೆಲ್‌ಗಳನ್ನು ನಿರ್ಬಂಧಿಸಿತ್ತು.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರಸಾರಗೊಳ್ಳುವ ಸುಳ್ಳು ಸುದ್ದಿಗಳ ಹರಡುವಿಕೆ ಕುರಿತು ಬಿಜೆಪಿಯ ರಾಜ್ಯಸಭಾ ಸದಸ್ಯ ಜುಗಲಸಿಂಹ ಲೋಖಂಡವಾಲಾ ಅವರ ಪ್ರಶ್ನೆಗೆ ಠಾಕೂರ್ ಉತ್ತರಿಸುತ್ತಿದ್ದರು.

ದಾರಿ ತಪ್ಪಿಸಲು ಹಾಗೂ ಸಮಾಜದಲ್ಲಿ ಭೀತಿ ಮತ್ತು ಒಡಕನ್ನು ಸೃಷ್ಟಿಸಲು ಪ್ರಯತ್ನಿಸಿದ್ದ ಚಾನೆಲ್‌ಗಳ ವಿರುದ್ಧ ಐಟಿ ಕಾಯ್ದೆಯ 69ಎ ಕಲಮ್‌ನಡಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ ಠಾಕೂರ್,‘104 ಯೂಟ್ಯೂಬ್ ಚಾನೆಲ್‌ಗಳು,45 ವೀಡಿಯೊಗಳು,ನಾಲ್ಕು ಫೇಸ್‌ಬುಕ್ ಖಾತೆಗಳು ಮತ್ತು ಎರಡು ಪೋಸ್ಟ್‌ಗಳು,ಮೂರು ಇನ್‌ಸ್ಟಾಗ್ರಾಂ ಖಾತೆಗಳು,ಐದು ಟ್ವಿಟರ್ ಖಾತೆಗಳು ಮತ್ತು ಮೂರು ಪಾಡ್‌ಕಾಸ್ಟ್‌ಗಳನ್ನು ನಾವು ನಿಷೇಧಿಸಿದ್ದೇವೆ ’ಎಂದು ತಿಳಿಸಿದರು. ಎರಡು ಆ್ಯಪ್‌ಗಳು ಮತ್ತು ಆರು ವೆಬ್‌ಸೈಟ್‌ಗಳ ವಿರುದ್ಧವೂ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ದೇಶದ ಭದ್ರತೆಯನ್ನು ಕಾಪಾಡಲು ಇಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸಚಿವಾಲಯವು ಹಿಂಜರಿಯುವುದಿಲ್ಲ ಎಂದೂ ಅವರು ಹೇಳಿದರು.

ಮಕ್ಕಳನ್ನು ಗುರಿಯಾಗಿಸಿಕೊಂಡು ಲೈಂಗಿಕ ಸ್ವರೂಪದ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ಬಿಜೆಪಿಯ ರಾಜ್ಯಸಭಾ ಸದಸ್ಯ ರಾಕೇಶ ಸಿನ್ಹಾ ಅವರ ಪ್ರಶ್ನೆಗೆ ಉತ್ತರಿಸಿದ ಠಾಕೂರ್,ನಿಯಮಗಳನ್ನು ಉಲ್ಲಂಘಿಸುವ ಇಂತಹ ಜಾಹೀರಾತುಗಳನ್ನು ತಕ್ಷಣವೇ ಗುರುತಿಸಲಾಗುತ್ತದೆ ಮತ್ತು ಅವುಗಳ ಸೃಷ್ಟಿಕರ್ತರಿಗೆ ನೋಟಿಸ್ ಕಳುಹಿಸಲಾಗುತ್ತದೆ ಎಂದು ತಿಳಿಸಿದರು. 

share
Next Story
X