Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಪ್ರಥಮ ಮುಸ್ಲಿಂ ಮಹಿಳಾ ಯುದ್ಧ...

ದೇಶದ ಪ್ರಥಮ ಮುಸ್ಲಿಂ ಮಹಿಳಾ ಯುದ್ಧ ವಿಮಾನ ಪೈಲಟ್‌ ಆಗಲು ಸಜ್ಜಾದ ಉತ್ತರ ಪ್ರದೇಶದ ಸಾನಿಯಾ ಮಿರ್ಝಾ

23 Dec 2022 10:35 AM IST
share
ದೇಶದ ಪ್ರಥಮ ಮುಸ್ಲಿಂ ಮಹಿಳಾ ಯುದ್ಧ ವಿಮಾನ ಪೈಲಟ್‌ ಆಗಲು ಸಜ್ಜಾದ ಉತ್ತರ ಪ್ರದೇಶದ ಸಾನಿಯಾ ಮಿರ್ಝಾ

ಮಿರ್ಜಾಪುರ್: ‌ ಉತ್ತರ ಪ್ರದೇಶದ  ಮಿರ್ಜಾಪುರ್‌ ಇಲ್ಲಿನ ಟಿವಿ ಮೆಕ್ಯಾನಿಕ್‌ ಒಬ್ಬರ ಪುತ್ರಿ ಸಾನಿಯಾ ಮಿರ್ಝಾ (Sania Mirza) ಭಾರತೀಯ ವಾಯುಸೇನೆಯಲ್ಲಿ ಯುದ್ಧ ವಿಮಾನದ ಪೈಲಟ್‌ (Fighter Pilot) ಆಗಿ ಆಯ್ಕೆಯಾಗಿದ್ದು, ಈ ಮೂಲಕ ವಾಯುಸೇನೆಯ ಪೈಲಟ್‌ ಆಗುತ್ತಿರುವ ದೇಶದ ಪ್ರಥಮ ಮುಸ್ಲಿಂ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಮಿರ್ಜಾಪುರದ ಜಸೋವರ್‌ ಗ್ರಾಮದ ನಿವಾಸಿಯಾಗಿರುವ ಸಾನಿಯಾ ಎನ್‌ಡಿಎ (NDA) ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಯುದ್ಧ ವಿಮಾನದ ಪೈಲಟ್‌ ಆಗುವ ಅರ್ಹತೆ ಪಡೆದಿದ್ದಾರೆ. ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಸಾನಿಯಾ ಡಿಸೆಂಬರ್‌ 27 ರಂದು ಪುಣೆಯ ಎನ್‌ಡಿಎ ಖಡಕ್‌ವಾಸ್ಲಾ ಇಲ್ಲಿ ಸೇರಲಿದ್ದಾರೆ.

ಪ್ರಾಥಮಿಕ ಮತ್ತು ಹೈಸ್ಕೂಲ್‌ ಶಿಕ್ಷಣವನ್ನು  ಗ್ರಾಮದ ಪಂಡಿತ್‌ ಚಿಂತಾಮಣಿ ದುಬೆ ಇಂಟರ್‌ ಕಾಲೇಜಿನಲ್ಲಿ ಪಡೆದ ಅವರು ನಂತರ ಗುರು ನಾನಕ್‌ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಸಿದ್ದರು ಹಾಗೂ 12ನೇ ತರಗತಿಯಲ್ಲಿ ಜಿಲ್ಲಾ ಟಾಪರ್‌ ಆಗಿದ್ದರು. ಸೆಂಚೂರಿಯನ್‌ ಡಿಫೆನ್ಸ್‌ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ಅವರು ತಮ್ಮ ಯಶಸ್ಸಿನ ಶ್ರೇಯವನ್ನು ತಮ್ಮ ಹೆತ್ತವರು ಮತ್ತು ಈ ಅಕಾಡೆಮಿಗೆ ಸಲ್ಲಿಸುತ್ತಾರೆ.

ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ 2022 ಪರೀಕ್ಷೆಯಲ್ಲಿ ಯುದ್ಧ ವಿಮಾನ ಪೈಲಟ್‌ ಹುದ್ದೆಗೆ ಮಹಿಳೆಯರಿಗೆ ಕೇವಲ ಎರಡು  ಸೀಟು ಲಭ್ಯಗೊಳಿಸಲಾಗಿತ್ತು. ಮೊದಲ ಯತ್ನದಲ್ಲಿ ಸಾನಿಯಾಗೆ ಯಶಸ್ಸು ದೊರೆಯದೇ ಇದ್ದರೂ ಎರಡನೇ ಯತ್ನದಲ್ಲಿ ಅವರು ಸಫಲರಾಗಿದ್ದಾರೆ.

ಸಾನಿಯಾ ತಂದೆ ಶಾಹಿದ್‌ ಆಲಿ ಮಾತನಾಡಿ, ದೇಶದ ಪ್ರಥಮ ಮಹಿಳಾ ಫೈಟರ್‌ ಪೈಲಟ್‌ ಅವ್ನಿ ಚತುರ್ವೇದಿ ತಮ್ಮ ಮಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ನಮ್ಮ ಮಗಳು ನಮ್ಮ ಕುಟುಂಬಕ್ಕೆ ಮತ್ತು ಇಡೀ ಗ್ರಾಮಕ್ಕೆ ಹೆಮ್ಮೆ ತಂದಿದ್ದಾಳೆ ಎಂದು ಸಾನಿಯಾ ತಾಯಿ ತಬಸ್ಸುಂ ಮಿರ್ಝಾ ಹೇಳಿದ್ದಾರೆ.

ನ್ಯಾಷನ್‌ ಡಿಫೆನ್ಸ್‌ ಅಕಾಡೆಮಿ 2022 ಪರೀಕ್ಷೆಯನ್ನು ಒಟ್ಟು 400 ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗಿತ್ತು. ಇವುಗಳಲ್ಲಿ 19 ಸ್ಥಾನಗಳು ಮಹಿಳೆಯರಿಗೆ ಹಾಗೂ 2 ಸ್ಥಾನಗಳು ಮಹಿಳಾ ಫೈಟರ್‌ ಪೈಲಟ್‌ಗಳಿಗೆ ಮೀಸಲಾಗಿತ್ತು. ಈ ಎರಡು ಸೀಟುಗಳಲ್ಲಿ ಒಂದು ಸಾನಿಯಾಗೆ ದೊರಕಿದೆ.

ಇದನ್ನೂ ಓದಿ: ಬಹುರಾಷ್ಟ್ರೀಯ ಕಂಪನಿಗಳು ಭಾರತದಿಂದ ಕಾಲ್ಕೀಳುತ್ತಿರುವುದೇಕೆ?: ಇಲ್ಲಿದೆ ಮಾಹಿತಿ

share
Next Story
X