Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೇಪಾಳ ಜೈಲಿನಿಂದ ಬಿಡುಗಡೆಗೊಂಡ ಸರಣಿ...

ನೇಪಾಳ ಜೈಲಿನಿಂದ ಬಿಡುಗಡೆಗೊಂಡ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್

23 Dec 2022 2:57 PM IST
share
ನೇಪಾಳ ಜೈಲಿನಿಂದ ಬಿಡುಗಡೆಗೊಂಡ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್

ಕಠ್ಮಂಡು: ಕಳೆದ ವಾರ ಸುಪ್ರೀಂಕೋರ್ಟ್ ನೀಡಿದ್ದ ಆದೇಶದನ್ವಯ ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ನನ್ನು ಶುಕ್ರವಾರ ನೇಪಾಳದ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

1975ರಲ್ಲಿ ನಡೆದಿದ್ದ ಅಮೆರಿಕಾ ಪ್ರವಾಸಿಗರ ಹತ್ಯೆ ಪ್ರಕರಣದ ದೋಷಿ ಚಾರ್ಲ್ಸ್ ಶೋಭರಾಜ್ (78), 18 ವರ್ಷಗಳ ಕಾಲ ಜೈಲಿನಲ್ಲಿದ್ದ. ಆತನ ವೃದ್ಧಾಪ್ಯ ಹಾಗೂ ಕ್ಷೀಣಿಸುತ್ತಿರುವ ಆರೋಗ್ಯವನ್ನು ಪರಿಗಣಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಫ್ರೆಂಚ್ ಪ್ರಜೆಯಾಗಿರುವ ಶೋಭರಾಜ್, ಏಷ್ಯಾದ್ಯಂತ 20 ಮಂದಿ ಪಾಶ್ಚಾತ್ಯ ಪ್ರವಾಸಿಗರನ್ನು ಕೊಂದಿರುವ ಆರೋಪ ಹೊಂದಿದ್ದಾನೆ. ಸಾಮಾನ್ಯವಾಗಿ ಅವರನ್ನು ದೋಚುವ ಮುನ್ನ ಅವರ ಅಹಾರ ಅಥವಾ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕೊಲ್ಲುತ್ತಿದ್ದ ಎಂದು ಹೇಳಲಾಗಿದೆ.

ಶೋಭರಾಜ್ ಇನ್ನೂ ಹಲವಾರು ಹತ್ಯಾ ಪ್ರಕರಣಗಳಲ್ಲಿ ಭಾಗಿಯಾಗಿದ್ದು, 1970ರಲ್ಲಿ ಥಾಯ್ಲೆಂಡ್‌ನಲ್ಲಿ ಆರು ಮಂದಿ ಮಹಿಳೆಯರಿಗೆ ಮಾದಕ ದ್ರವ್ಯ ಉಣಿಸಿ ಹತ್ಯೆ ಮಾಡಿದ್ದ ಎಂದು ಥಾಯ್ಲೆಂಡ್ ಪೊಲೀಸರು ಆರೋಪಿಸಿದ್ದರು. ನಂತರ 1976ರಲ್ಲಿ ಹೊಸ ದಿಲ್ಲಿಯಲ್ಲಿ ಫ್ರಾನ್ಸ್ ಪ್ರವಾಸಿಗರಿಗೆ ವಿಷವುಣಿಸಿ ಕೊಂದ ಆರೋಪದಲ್ಲಿ ಬಂಧಿಸಿ, ಆತನನ್ನು ತಿಹಾರ್ ಜೈಲಿನಲ್ಲಿಡಲಾಗಿತ್ತು.

1986ರಲ್ಲಿ ನಿದ್ರೆ ಮಾತ್ರೆ ಬೆರೆಸಿದ ಬಿಸ್ಕತ್ ಹಾಗೂ ಕೇಕ್ ಅನ್ನು ತಿಹಾರ್ ಜೈಲು ಸಿಬ್ಬಂದಿಗೆ ತಿನ್ನಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ನಂತರ ಆತನನ್ನು ಸೆರೆ ಹಿಡಿಯುವಲ್ಲಿ ಗೋವಾ ಪೊಲೀಸರು ಯಶಸ್ವಿಯಾಗಿದ್ದರು. ಆತನನ್ನು 1997ರವರೆಗೆ ಜೈಲಿನಲ್ಲಿಡಲಾಗಿತ್ತು. ನಂತರ ಆತ ಫ್ರಾನ್ಸ್‌ಗೆ ಮರಳಿದ್ದ.

ಮತ್ತೆ 2003ರಲ್ಲಿ ಅಮೆರಿಕಾ ಪ್ರವಾಸಿಗಳ ಹತ್ಯೆ ಪ್ರಕರಣದಲ್ಲಿ ನೇಪಾಳ ಪೊಲೀಸರಿಂದ ಬಂಧಿತನಾಗಿದ್ದ ಶೋಭರಾಜ್, ವಿಚಾರಣೆಯ ಸಂದರ್ಭದಲ್ಲಿ ತನ್ನ ಮೇಲಿನ ಆರೋಪ ಸಾಬೀತಾಗಿದ್ದರಿಂದ ಮತ್ತೆ ಜೈಲು ಸೇರಿದ್ದ.

share
Next Story
X