Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತಶಕ್ತಿ ರಾಜಕೀಯ ಶಕ್ತಿಯಾಗಿ...

ರೈತಶಕ್ತಿ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಬೇಕು...: ತವರಿಗೆ ಮರಳಿದ ದರ್ಶನ್‍ ಪುಟ್ಟಣ್ಣಯ್ಯಗೆ ಅದ್ದೂರಿ ಸ್ವಾಗತ

23 Dec 2022 2:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರೈತಶಕ್ತಿ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಬೇಕು...: ತವರಿಗೆ ಮರಳಿದ ದರ್ಶನ್‍ ಪುಟ್ಟಣ್ಣಯ್ಯಗೆ ಅದ್ದೂರಿ ಸ್ವಾಗತ

ಮಂಡ್ಯ, ಡಿ.23: ಯಾವ ಪಕ್ಷಗಳ ಸರಕಾರಗಳಿಗೂ ರೈತರ ಬಗ್ಗೆ ಕಾಳಜಿ ಇಲ್ಲ. ಆದ್ದರಿಂದ ರೈತಶಕ್ತಿ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಬೇಕಿದೆ ಎಂದು ಅಮೆರಿಕಾದಿಂದ ಮರಳಿರುವ ರೈತಸಂಘದ ನಾಯಕ ದರ್ಶನ್ ಪುಟ್ಟಣ್ಣಯ್ಯ ಕರೆ ನೀಡಿದ್ದಾರೆ.

ಟನ್ ಕಬ್ಬಿಗೆ 4,500 ರೂ. ನಿಗದಿ ಹಾಗೂ ಹಾಲಿನ ದರ 40 ರೂ.ಗೆ ಹೆಚ್ಚಳಕ್ಕೆ ಆಗ್ರಹಿಸಿ ಒಂದೂವರೆ ತಿಂಗಳಿಂದ ನಗರದಲ್ಲಿ ರೈತಸಂಘ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಶುಕ್ರವಾರ ಭಾಗವಹಿಸಿ ಅವರು ಮಾತನಾಡಿದರು.

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ದರ ನಿಗದಿಗೆ ಆಗ್ರಹಿಸಿ ರೈತರು ಒಂದೂವರೆ ತಿಂಗಳಿಂದ ಚಳವಳಿ ಮಾಡುತ್ತಿದ್ದು, ಸರಕಾರ ಸ್ಪಂದಿಸುತ್ತಿಲ್ಲ. ರೈತರಿಗೆ ನ್ಯಾಯ ಕೊಡಿಸುವ ಕಾಳಜಿ ಯಾವ ರಾಜಕೀಯ ಪಕ್ಷಗಳಿಗೂ ಇಲ್ಲ ಎಂಬುದು ಸಾಬೀತಾಗಿದೆ ಎಂದು ಅವರು ಕಿಡಿಕಾರಿದರು.

‘ಎಲ್ಲರೂ ಹುಟ್ಟುತ್ತಾರೆ, ಸಾಯುತ್ತಾರೆ. ಈ ಮಧ್ಯೆ ಏನಾದರೂ ಒಳ್ಳೆಯದನ್ನು ಮಾಡಬೇಕು’ ಎಂದು ನಮ್ಮ ತಂದೆ ಕೆ.ಎಸ್.ಪುಟ್ಟಣ್ಣಯ್ಯ ಅವರು ಹೇಳುತ್ತಿದ್ದರು. ಆದ್ದರಿಂದ ನಾವು ಹೊಸ ನಡೆನುಡಿಯ ರಾಜಕಾರಣಲು ರಾಜಕೀಯಕ್ಕೆ ಧುಮುಕಿದ್ದೇವೆ. ಎಲ್ಲರೂ ಕೈಜೋಡಿಸಿ ರೈತಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ರೈತಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ತಾವು ರೈತರಪರ ಎಂದು ಹೇಳುವ ಜೆಡಿಎಸ್ ಮುಖಂಡರಿಗೆ, ರೈತರು ಅಹೋರಾತ್ರಿ ಧರಣಿ ನಡೆಸುತ್ತಿರುವುದು ಕಾಣದಿರುವುದು ದುರಂತ. ಯಾವ ಶಾಸಕರೂ ಸೌಜನ್ಯಕ್ಕಾದರೂ ರೈತರನ್ನು ಮಾತನಾಡಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿವೇಶನದಲ್ಲಿ ಭಾಗವಹಿಸಿ ರೈತಪರವಾಗಿ ದನಿಯೆತ್ತದೆ ಪಂಚರತ್ನ ರಥಯಾತ್ರೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ರೈತರ ಬಗ್ಗೆ ಕಾಳಜಿ ಇದ್ದರೆ ಯಾತ್ರೆಯನ್ನು ಮುಂದೂಡಿ ಅಧಿವೇಶನದಲ್ಲಿ ಭಾಗವಹಿಸಿ ರೈತರ ಪರವಾಗಿ ಧನಿ ಎತ್ತಬೇಕು ಎಂದು ತಾಕೀತು ಮಾಡಿದರು.

ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಸನ್ನ ಎಸ್.ಗೌಡ, ಹರೀಶ್, ಲಿಂಗಪ್ಪಾಜಿ, ಬಿ.ಬೊಮ್ಮೇಗೌಡ, ರವಿ, ವಿಜಯಕುಮಾರ್, ಇತರೆ ಮುಖಂಡರು ಉಪಸ್ಥಿತರಿದ್ದರು.

ದರ್ಶನ್‍ಗೆ ಅದ್ದೂರಿ ಸ್ವಾಗತ:

ಅಮೆರಿಕಾದಿಂದ ತವರಿಗೆ ಮರಳಿದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ರೈತಸಂಘದ ಕಾರ್ಯಕರ್ತರು ಅದ್ದೂರಿಯಿಂದ ಸ್ವಾಗತಿಸಿದರು. ದುದ್ದ ಗ್ರಾಮದಿಂದ ಮಂಡ್ಯ ನಗರದವರೆಗೆ ಬೈಕ್ ರ್ಯಾಲಿ ಮೂಲಕ ಮೆರವಣಿಗೆಯಲ್ಲಿ ಕರೆ ತರಲಾಯಿತು.

ಹೊಳಲು ಗ್ರಾಮದಲ್ಲೂ ನೂರಾರು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ, ಮಂಡ್ಯದಲ್ಲೂ ಬೃಹತ್ ಗಾತ್ರದ ಸೇಬಿನಹಣ್ಣಿನ ಹಾರ ಹಾಕಿ ಬರಮಾಡಿಕೊಳ್ಳಲಾಯಿತು. ಮಂಡ್ಯದಿಂದಲೂ ಪಾಂಡವಪುರದವರೆಗೆ ಬೈಕ್ ರ್ಯಾಲಿಯ ಮೂಲಕ ಮೆರವಣಿಗೆಯಲಿ ಕರೆದೊಯ್ಯಲಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X