Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಪಿಟಲ್ ಹಿಲ್ಸ್ ದಂಗೆಗೆ ತನ್ನನ್ನು...

ಕ್ಯಾಪಿಟಲ್ ಹಿಲ್ಸ್ ದಂಗೆಗೆ ತನ್ನನ್ನು ಹೊಣೆಗಾರನಾಗಿ ಮಾಡಿದ ಸಂಸದೀಯ ಸಮಿತಿಯ ವರದಿ ವಿರುದ್ಧ ಟ್ರಂಪ್ ವಾಗ್ದಾಳಿ

24 Dec 2022 11:47 PM IST
share
ಕ್ಯಾಪಿಟಲ್ ಹಿಲ್ಸ್ ದಂಗೆಗೆ ತನ್ನನ್ನು ಹೊಣೆಗಾರನಾಗಿ ಮಾಡಿದ ಸಂಸದೀಯ ಸಮಿತಿಯ ವರದಿ ವಿರುದ್ಧ ಟ್ರಂಪ್ ವಾಗ್ದಾಳಿ

ವಾಷಿಂಗ್ಟನ್, ಡಿ.24: ಜನವರಿ 6ರಂದು ನಡೆದ ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣದಲ್ಲಿ ತನ್ನನ್ನು ಹೊಣೆಗಾರನೆಂದು ಹೆಸರಿಸಿದ ಅಮೆರಿಕ ಸಂಸದೀಯ ಸಮಿತಿಯ ವರದಿಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತನ್ನ ವಿಶಿಷ್ಟ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುಥ್ ಸೋಷಿಯಲ್’(Truth Social)ನಲ್ಲಿ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ ಅವರು ‘ ನಮ್ಮ ಕ್ಯಾಪಿಟಲ್ ಹಿಲ್ಸ್ ನಲ್ಲಿ ನಾನು ಯಾವುದೇ ರೀತಿಯ ಹಿಂಸಾಚಾರಕ್ಕೆ ಉದ್ದೇಶಿಸಿದ್ದೆ ಅಥವಾ ಬಯಸಿದ್ದೆ ಎಂಬುದಕ್ಕೆ ಆಯ್ಕೆ ಮಾಡದ ಸಮಿತಿಯು ಒಂದೇ ಒಂದು ಚೂರು ಪುರಾವೆಯನ್ನೂ ಒದಗಿಸಿಲ್ಲ’ ಎಂದು ಹೇಳಿದ್ದಾರೆ.

“ಆರೋಪ ಆಧಾರ ರಹಿತ ಮತ್ತು ಮಹಾನ್ ಸುಳ್ಳು ಆಗಿರುವುದರಿಂದ ಪುರಾವೆ ಇರಲು ಸಾಧ್ಯವೇ ಇಲ್ಲ. ಜನವರಿ 6ರ ಘಟನೆಗಳು ದಂಗೆಯಾಗಿರಲಿಲ್ಲ. ಅದು ದುರಂತವಾಗಿ ನಿಯಂತ್ರಣ ಕಳೆದುಕೊಂಡ ಪ್ರತಿಭಟನೆಯಾಗಿತ್ತು” ಎಂದು ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ. ತನ್ನ ಸರಕಾರ ಪ್ರತಿಭಟನಾಕಾರರನ್ನು ನಿಯಂತ್ರಿಸಲು 20,000 ನ್ಯಾಷನಲ್ ಗಾರ್ಡ್ಸ್ ಪಡೆಯನ್ನು ನಿಯೋಜಿಸಲು ಆಗ್ರಹಿಸಿತ್ತು ಎಂದು ಟ್ರಂಪ್ ಹಲವು ಬಾರಿ ಹೇಳಿದ್ದರು. ಆದರೆ ಈ ಪ್ರತಿಪಾದನೆಯನ್ನು ಸಂಸದೀಯ ಸಮಿತಿ ನಿರಾಕರಿಸಿದೆ.

ವರದಿಯನ್ನು ಪ್ರಕಟಿಸಿದ ಸಮಿತಿಯು ಟ್ರಂಪ್ ಗೆ ಮತ್ತೆ ಅಧಿಕಾರ ವಹಿಸಲು ಅವಕಾಶ ನೀಡಬಾರದು ಎಂದು ಕರೆ ನೀಡಿದೆ. ಅಧ್ಯಕ್ಷೀಯ ಚುನಾವಣೆಯನ್ನು ಅನೂರ್ಜಿತಗೊಳಿಸಲು ಟ್ರಂಪ್ ಮತ್ತವರ ಸಂಗಡಿಗರು ನಡೆಸಿದ ಕನಿಷ್ಟ 20 ಕೃತ್ಯಗಳನ್ನು ವರದಿ ಉಲ್ಲೇಖಿಸಿದೆ. ಈ ಪುರಾವೆಗಳು ನೇರ ತೀರ್ಮಾನಕ್ಕೆ ದಾರಿ ಮಾಡಿಕೊಟ್ಟಿವೆ. ಅದೇನೆಂದರೆ, ಜನವರಿ 6ರ ಘಟನೆಯ ಹಿಂದೆ ಇದ್ದ ಪ್ರಮುಖ ಏಕೈಕ ವ್ಯಕ್ತಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಅವರನ್ನು ಇತರ ಹಲವರು ಅನುಸರಿಸಿದರು.

ಟ್ರಂಪ್ ಇಲ್ಲದೆ ಜನವರಿ 6ರ ಯಾವುದೇ ಘಟನೆ ನಡೆದಿಲ್ಲ. ಅವರು ತಮ್ಮ ಬೆಂಬಲಿಗರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿಲ್ಲ ಎಂದು 800 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
Next Story
X