Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರ ಚಳಿಯಲ್ಲಿ ಕೇವಲ ಟಿಶರ್ಟ್ ತೊಟ್ಟು...

ತೀವ್ರ ಚಳಿಯಲ್ಲಿ ಕೇವಲ ಟಿಶರ್ಟ್ ತೊಟ್ಟು ಹೇಗೆ ಹೆಜ್ಜೆ ಹಾಕುತ್ತಿದ್ದೀರಿ ಎಂಬ ಪ್ರಶ್ನೆಗೆ ರಾಹುಲ್ ಉತ್ತರಿಸಿದ್ದು ಹೀಗೆ

25 Dec 2022 12:38 PM IST
share
ತೀವ್ರ ಚಳಿಯಲ್ಲಿ ಕೇವಲ ಟಿಶರ್ಟ್ ತೊಟ್ಟು ಹೇಗೆ ಹೆಜ್ಜೆ ಹಾಕುತ್ತಿದ್ದೀರಿ ಎಂಬ ಪ್ರಶ್ನೆಗೆ ರಾಹುಲ್ ಉತ್ತರಿಸಿದ್ದು ಹೀಗೆ

ಹೊಸದಿಲ್ಲಿ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೊ ಯಾತ್ರೆ (Bharat Jodo Yatra) ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಪ್ರವೇಶಿಸಿದ್ದು, ಕೇವಲ ಟಿಶರ್ಟ್ ತೊಟ್ಟು ಉತ್ತರ ಭಾರತದ ತೀವ್ರ ಚಳಿಯ ಹವಾಮಾನದಲ್ಲಿ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಯನ್ನು "ನೀವು ಈ ತೀವ್ರ ಚಳಿಯಲ್ಲಿ ಅದು ಹೇಗೆ ಕೇವಲ ಟಿಶರ್ಟ್ ತೊಟ್ಟು ಹೆಜ್ಜೆ ಹಾಕುತ್ತಿದ್ದೀರಿ?" ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ರಾಹುಲ್ ಗಾಂಧಿ, "ಇದೇ ಪ್ರಶ್ನೆಯನ್ನು ನೀವು ರೈತರು, ಕಾರ್ಮಿಕರು, ಬಡ ಮಕ್ಕಳಿಗೆ ಕೇಳುವುದಿಲ್ಲ" ಎಂದು ಈ ಚಳಿಯ ಹವಾಮಾನದಲ್ಲಿ ಬೆಚ್ಚನೆಯ ಉಡುಪುಗಳನ್ನು ಹೊಂದಿಸಿಕೊಳ್ಳಲಾಗದ ಜನರನ್ನು ಉಲ್ಲೇಖಿಸಿ ಹೇಳಿದ್ದಾರೆ.

"ನಾನು ಈವರೆಗೆ 2800 ಕಿಮೀ ನಡೆದಿದ್ದೇನೆ. ಆದರಿದು ದೊಡ್ಡ ಸಂಗತಿಯಲ್ಲ. ವಾಸ್ತವವಾಗಿ ರೈತರು, ರೈತ ಕಾರ್ಮಿಕರು, ಕಾರ್ಖಾನೆಯ ನೌಕರರು ಸೇರಿದಂತೆ ಇಡೀ ದೇಶ ಪ್ರತಿ ದಿನ ಇದಕ್ಕಿಂತ ಹೆಚ್ಚು ದೂರ ನಡೆಯುತ್ತದೆ" ಎಂದು ಕೆಂಪು ಕೋಟೆಯ ಬಳಿ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಚಳಿಯ ಅನುಭವವಾಗುತ್ತಿಲ್ಲವೆ ಎಂಬ ವಿಷಯದ ಕುರಿತು ndtv.comಗೆ ಪ್ರತಿಕ್ರಿಯಿಸಿರುವ ಮತ್ತೋರ್ವ ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್, "ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷಕ್ಕೆ ರಾಹುಲ್ ಗಾಂಧಿ ಅಚ್ಚುಮೆಚ್ಚಿನ ಗುರಿಯಾಗಿರುವುದು ನಿಮಗೂ ತಿಳಿದೇ ಇದೆ. ಪ್ರತಿನಿತ್ಯ ಯಾವುದೇ ವ್ಯಕ್ತಿ ತೀವ್ರವಾದ ದಾಳಿಗೆ ಗುರಿಯಾಗತೊಡಗಿದಾಗ ಅಂತಹ ವ್ಯಕ್ತಿಯ ದೇಹ ಸ್ವಯಂ ನಿರೋಧಕ ಶಕ್ತಿ ಬೆಳೆಸಿಕೊಳ್ಳುತ್ತದೆ" ಎಂದು ತಿಳಿಸಿದ್ದಾರೆ.

ಭಾರತ್ ಜೋಡೊ ಯಾತ್ರೆಯು ದಿಲ್ಲಿ ಹಂತ ಪೂರೈಸಿದ ನಂತರ ಮಾತನಾಡಿದ ರಾಹುಲ್ ಗಾಂಧಿ, ನಾನು ಈ ಯಾತ್ರೆಯಲ್ಲಿ ಹಲವು ಬಗೆಯ ಜನರನ್ನು ಕಂಡೆ. ಈ ಯಾತ್ರೆಯು ಕನ್ಯಾಕುಮಾರಿಯಿಂದ ಶುರುವಾಗಿದ್ದು, ಕಾಶ್ಮೀರದಲ್ಲಿ ಅಂತ್ಯವಾಗಲಿದೆ. ಆದರೆ, ದಾರಿಯುದ್ದಕ್ಕೂ ಜನರಲ್ಲಿ ನಾನು ಭಯ ಗುರುತಿಸಿದೆನೇ ಹೊರತು ದ್ವೇಷವನ್ನಲ್ಲ" ಎಂದಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ದೇಶಾದ್ಯಂತ ದ್ವೇಷ ಹರಡುತ್ತಿವೆ ಎಂದು ಆರೋಪಿಸಿದ ಅವರು, "ನಾನು ಯಾತ್ರೆ ಆರಂಭಿಸಿದಾಗ ದೇಶದೆಲ್ಲೆಡೆ ದ್ವೇಷ ತುಂಬಿದೆ ಎಂದು ಭಾವಿಸಿದ್ದೆ. ಆದರದು ನನಗೆ ಕಂಡು ಬರಲೇ ಇಲ್ಲ. ನೀವು ಯಾವುದೇ ಟಿವಿ ನೋಡಿದರೂ ಹಿಂದೂ-ಮುಸ್ಲಿಂ, ಹಿಂದೂ-ಮುಸ್ಲಿಂ ಎಂದು ವಿವಾದ ಸೃಷ್ಟಿಸಲಾಗುತ್ತಿದೆ. ಆದರೆ ಭಾರತದ ಜನರು ಹಾಗಿಲ್ಲ" ಎಂದು ಅಭಿಪ್ರಾಯ ಪಟ್ಟರು.

ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಿದರು.

share
Next Story
X