Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ʼಅಳು ನಿಲ್ಲಿಸಿʼ: ಫಿಫಾ ಫೈನಲ್‌ ಬಗೆಗಿನ...

ʼಅಳು ನಿಲ್ಲಿಸಿʼ: ಫಿಫಾ ಫೈನಲ್‌ ಬಗೆಗಿನ ಫ್ರಾನ್ಸ್‌ ಅಭಿಮಾನಿಗಳ ಅಸಮಾಧಾನಕ್ಕೆ ಅರ್ಜೆಂಟೀನಾ ಅಭಿಮಾನಿಗಳಿಂದ ತಿರುಗೇಟು

25 Dec 2022 7:08 PM IST
share
ʼಅಳು ನಿಲ್ಲಿಸಿʼ: ಫಿಫಾ ಫೈನಲ್‌ ಬಗೆಗಿನ ಫ್ರಾನ್ಸ್‌ ಅಭಿಮಾನಿಗಳ ಅಸಮಾಧಾನಕ್ಕೆ ಅರ್ಜೆಂಟೀನಾ ಅಭಿಮಾನಿಗಳಿಂದ ತಿರುಗೇಟು

ಬ್ರ್ಯೂನಸ್ ಐರಿಸ್: ಫ್ರಾನ್ಸ್ ಫುಟ್‌ಬಾಲ್ ಅಭಿಮಾನಿಗಳ ಶೋಕವನ್ನು ಗೇಲಿ ಮಾಡಲು ಅರ್ಜೆಂಟೀನಾ ಫುಟ್‌ಬಾಲ್ ಅಭಿಮಾನಿಗಳು ತಮ್ಮದೇ ವಿಶಿಷ್ಟ ಶೈಲಿಯ ಮನವಿ ಪತ್ರ ಅಭಿಯಾನಯನ್ನು ಆರಂಭಿಸಿದ್ದು, "ಫ್ರಾನ್ಸ್ ಅಳುವುದನ್ನು ನಿಲ್ಲಿಸು" ಎಂಬ ಆ ಮನವಿ ಪತ್ರಕ್ಕೆ ಈವರೆಗೆ 6,50,000ಕ್ಕೂ ಹೆಚ್ಚು ಅರ್ಜೆಂಟೀನಾ ಫುಟ್‌ಬಾಲ್ ಅಭಿಮಾನಿಗಳು ಸಹಿ ಮಾಡಿದ್ದಾರೆ ಎಂದು ವರದಿಯಾಗಿದೆ.


Mesopinions ಜಾಲತಾಣ ಬಳಕೆದಾರರೊಬ್ಬರು, ಫ್ರಾನ್ಸ್ ಮತ್ತು ಅರ್ಜೆಂಟೀನಾ ತಂಡದ ನಡುವೆ ಫಿಫಾ ಮರು ಪಂದ್ಯ ಆಯೋಜಿಸಬೇಕು ಎಂದು ಆಗ್ರಹಿಸಿದ್ದರು. ಅರ್ಜೆಂಟೀನಾ ತಂಡಕ್ಕೆ ನ್ಯಾಯೋಚಿತವಲ್ಲದ ಪೆನಾಲ್ಟಿ ಕಾರ್ನರ್ ಅವಕಾಶ ನೀಡಿದ್ದು ಹಾಗೂ ಫ್ರೆಂಚ್ ತಾರೆ ಕಿಲಿಯನ್ ಎಂಬಾಪೆ, ಅರ್ಜೆಂಟೀನಾದ ಡಿ ಮಾರಿಯಾ ಅವರ ಗೋಲು ಪ್ರಯತ್ನವನ್ನು ತಡೆಯಲು ಯತ್ನಿಸಿದಾಗ ಅದನ್ನು ಫೌಲ್ ಎಂಬ ತೀರ್ಮಾನ ನೀಡಿದ್ದು ತಪ್ಪು ನಿರ್ಣಯಗಳು ಎಂದು ಅವರು ಆರೋಪಿಸಿದ್ದರು. ಇದರ ಬೆನ್ನಿಗೇ ಅರ್ಜೆಂಟೀನಾ ಫುಟ್‌ಬಾಲ್ ಅಭಿಮಾನಿಗಳು "ಫ್ರಾನ್ಸ್ ಅಳುವುದನ್ನು ನಿಲ್ಲಿಸು" ಎಂಬ ಮನವಿ ಪತ್ರ ಅಭಿಯಾನವನ್ನು ಶುರು ಮಾಡಿದ್ದಾರೆ.


ಇದಕ್ಕೂ ಮುನ್ನ, ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಅಂತರದಲ್ಲಿ ಅರ್ಜೆಂಟೀನಾ ತಂಡ ಜಯಿಸಿದ್ದ ಫೈನಲ್ ಪಂದ್ಯವನ್ನು ಮರು ಆಯೋಜಿಸಬೇಕು ಎಂದು ನಿರಾಸೆಗೊಂಡಿರುವ ಫ್ರಾನ್ಸ್ ತಂಡದ ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಮನವಿ ಪತ್ರಕ್ಕೆ ಸಹಿ ಮಾಡಿದ್ದರು.

ಇದನ್ನೂ ಓದಿ: ಫಿಫಾ ಫೈನಲ್ ಮರು ಪಂದ್ಯಾಟಕ್ಕೆ ಆಗ್ರಹಿಸಿ ಎರಡು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿದ ʼಅತೃಪ್ತ ಅಭಿಮಾನಿಗಳುʼ

Goal ಸುದ್ದಿ ಸಂಸ್ಥೆಯ ವರದಿ ಪ್ರಕಾರ, "ಫ್ರಾನ್ಸ್ ಅಳುವುದನ್ನು ನಿಲ್ಲಿಸು" ಎಂಬ ಮನವಿ ಪತ್ರ ಅಭಿಯಾನ ವ್ಯಾಲೆಂಟೀನ್ ಗೋಮೆಜ್  ಎಂಬ ಅರ್ಜೆಂಟೀನಾ ತಂಡದ ಅಭಿಮಾನಿಯಿಂದ ಶುರುವಾಗಿದೆ ಎಂದು ಹೇಳಲಾಗಿದೆ. change.org ಜಾಲತಾಣದಲ್ಲಿನ ಈ ಅಭಿಯಾನಕ್ಕೆ ಕೆಲವೇ ಗಂಟೆಗಳಲ್ಲಿ 6,50,000 ಮಂದಿ ಸಹಿ ಮಾಡಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿರುವ ಗೋಮೆಜ್, "ನಾವು ವಿಶ್ವಕಪ್ ಗೆದ್ದಾಗಿನಿಂದ ಫ್ರಾನ್ಸ್ ತಂಡದ ಅಭಿಮಾನಿಗಳು ಅಳುವುದನ್ನು, ದೂರುವುದನ್ನು ನಿಲ್ಲಿಸಿಲ್ಲ ಮತ್ತು ಅರ್ಜೆಂಟೀನಾ ತಂಡ ವಿಶ್ವ ಚಾಂಪಿಯನ್ ಆಗಿರುವುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
Next Story
X