Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 13 ರಾಜ್ಯಗಳಲ್ಲಿ ಪಯಣಿಸಿ ಒಡಿಶಾಕ್ಕೆ...

13 ರಾಜ್ಯಗಳಲ್ಲಿ ಪಯಣಿಸಿ ಒಡಿಶಾಕ್ಕೆ ವಾಪಸಾದ ಹಾಕಿ ವಿಶ್ವಕಪ್ ಟ್ರೋಫಿ

25 Dec 2022 11:57 PM IST
share
13 ರಾಜ್ಯಗಳಲ್ಲಿ ಪಯಣಿಸಿ ಒಡಿಶಾಕ್ಕೆ ವಾಪಸಾದ ಹಾಕಿ ವಿಶ್ವಕಪ್ ಟ್ರೋಫಿ

ಭುವನೇಶ್ವರ, ಡಿ.25: ಸುಮಾರು 13 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಾದ್ಯಂತ ಪ್ರಯಾಣಿಸಿದ ಬಳಿಕ ಪುರುಷರ ಹಾಕಿ ವಿಶ್ವಕಪ್ ಟ್ರೋಫಿಯು ರವಿವಾರ ಒಡಿಶಾಕ್ಕೆ ವಾಪಸಾಗಿದೆ. ಈ ರಾಜ್ಯದಲ್ಲಿ ಮುಂದಿನ ತಿಂಗಳು ವಿಶ್ವಕಪ್ ಟೂರ್ನಿ ನಡೆಯಲಿದೆ.

ಬಿಜು ಪಟ್ನಾಯಕ್ ಇಂಟರ್ನ್ಯಾಶನಲ್ ಏರ್ಪೋರ್ಟ್ನಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು  ಮಾಡಲಾಗಿದ್ದು, ಬೆಳಗ್ಗೆ 11:30ರ ಸುಮಾರಿಗೆ ಅಧಿಕಾರಿಗಳು ಹಾಕಿ ವಿಶ್ವಕಪ್ನೊಂದಿಗೆ ಆಗಮಿಸಿದರು. ಆಗ ವಿಮಾನ ನಿಲ್ದಾಣದಲ್ಲಿ ಸಂಭ್ರಮದ ವಾತಾವರಣ ಕಂಡುಬಂದಿದ್ದು, ಸಾಂಪ್ರದಾಯಿಕ ಸೀರೆ ಧರಿಸಿದ್ದ ಮಹಿಳೆಯರು ಹಾಗೂ ಮಕ್ಕಳು ಸಂಗೀತ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿದರು. 

ಜನರು ಏರ್ಪೋರ್ಟ್ ಹೊರಗಿನ ರಸ್ತೆಗಳ ಬದಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಏರ್ಪೋರ್ಟ್ನಿಂದ ಟ್ರೋಫಿಯನ್ನು ಹೊರಗೆ ತಂದ ಹಾಕಿ ಇಂಡಿಯಾ ಅಧ್ಯಕ್ಷ ದಿಲಿಪ್ ಟಿರ್ಕಿ ಅದನ್ನು ರಾಜ್ಯ ಕ್ರೀಡಾ ಸಚಿವ ತುಷಾರ್ಕಾಂತಿ ಬೆಹೆರಾರಿಗೆ ಹಸ್ತಾಂತರಿಸಿದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಜನತೆಯು ಟ್ರೋಫಿಯನ್ನು ಅದ್ದೂರಿಯಾಗಿ ಸ್ವಾಗತಿಸಬೇಕೆಂದು ಟ್ವಿಟರ್ನ ಮೂಲಕ ವಿನಂತಿಸಿದ್ದರು.

‘‘ಇದು ನಿಜವಾಗಿಯೂ ಒಡಿಶಾಕ್ಕೆ ಹೆಮ್ಮೆಯ ಕ್ಷಣ. ನಾವು ಸತತ ಎರಡನೇ ಬಾರಿ ಪುರುಷರ ಹಾಕಿ ವಿಶ್ವಕಪ್ ಆಯೋಜಿಸುತ್ತಿದ್ದೇವೆ. ಒಡಿಶಾದ ಪ್ರತೀ ಜಿಲ್ಲೆಗಳು ಸೇರಿದಂತೆ ರಾಜ್ಯ ವ್ಯಾಪಿ ಟ್ರೋಫಿ ತೆಗೆದುಕೊಂಡು ಹೋಗಲು ಯೋಜಿಸಲಾಗಿದ್ದು, ಎಲ್ಲರೂ ಇದರೊಂದಿಗೆ ಕೈಜೋಡಿಸಬೇಕು’’ ಎಂದು ಪಟ್ನಾಯಕ್ ಟ್ವೀಟಿಸಿದ್ದಾರೆ.

ಒಡಿಶಾ 2018ರ ಬಳಿಕ ಸತತ ಎರಡನೇ ಬಾರಿ ಪ್ರತಿಷ್ಠಿತ ಕ್ರೀಡಾ ಪಂದ್ಯಾವಳಿಯ ಆತಿಥ್ಯವಹಿಸಿಕೊಂಡಿದೆ. ಹಾಕಿ ಪಂದ್ಯಗಳು  ಭುವನೇಶ್ವರದ ಕಳಿಂಗ ಹಾಕಿ ಕ್ರೀಡಾಂಗಣ ಹಾಗೂ ರೂರ್ಕೆಲಾದ ಬಿರ್ಸಾ ಮುಂಡಾ ಇಂಟರ್ನ್ಯಾಶನಲ್ ಹಾಕಿ ಸ್ಟೇಡಿಯಮ್ಗಳಲ್ಲಿ ಜನವರಿ 13ರಿಂದ 29ರ ತನಕ ನಡೆಯಲಿದೆ.

share
Next Story
X