ಎಸ್ಸಿ-ಎಸ್ಟಿ ಮೀಸಲು ಹೆಚ್ಚಳ ವಿಧೇಯಕ; ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.26: ಶಿಕ್ಷಣ ಮತ್ತುಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ.3ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದ ಅಂಗೀಕಾರ ದೊರೆಯಿತು.
ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲ ಸದಸ್ಯರ ಒಕ್ಕೊರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆಕಾಗೇರಿ ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿರುವುದಾಗಿ ಪ್ರಕಟಿಸಿದರು.
Next Story