Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಮನೆ ಖರೀದಿಸುವ ನೆಪದಲ್ಲಿ...

ಬೆಂಗಳೂರು | ಮನೆ ಖರೀದಿಸುವ ನೆಪದಲ್ಲಿ ಬಿಜೆಪಿ ಮುಖಂಡನಿಂದ ವಂಚನೆ: ಆರೋಪ

26 Dec 2022 11:32 PM IST
share
ಬೆಂಗಳೂರು | ಮನೆ ಖರೀದಿಸುವ ನೆಪದಲ್ಲಿ ಬಿಜೆಪಿ ಮುಖಂಡನಿಂದ ವಂಚನೆ: ಆರೋಪ

ಬೆಂಗಳೂರು, ಡಿ.26: ತಮ್ಮ ಸ್ವಾಯಾರ್ಜಿತ ಮನೆಯನ್ನು ಖರೀದಿಸುವ ನೆಪದಲ್ಲಿ ಬಿಜೆಪಿ ಪಕ್ಷದ ಮುಖಂಡ ಎ.ಎಚ್. ಆನಂದ್ ಎಂಬಾತನು ಮೋಸ ಮಾಡಿದ್ದಾನೆ ಎಂದು ಮಾಜಿ ಸೈನಿಕನ ಪತ್ನಿ ಕೆ. ನಿರ್ಮಲ ಬಾಯಿ ಆರೋಪಿಸಿದ್ದಾರೆ. 

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ‘ನಾನು ವಾಸ ಮಾಡುತ್ತಿದ್ದ ಮನೆಯನ್ನು 2014ರಲ್ಲಿ 70 ಲಕ್ಷ ರೂ.ಗಳಿಗೆ ಕೊಂಡುಕೊಳ್ಳುವುದಾಗಿ ವ್ಯವಹಾರವನ್ನು ನಡೆಸಿದ್ದ ಎ.ಎಚ್. ಆನಂದ್, 15 ಲಕ್ಷ ರೂ.ಗಳನ್ನು ಮುಂಗಡವಾಗಿ ನೀಡಿದ್ದನು. ಬಾಕಿ ಹಣವನ್ನು ನೋಂದಣಿ ಸಮಯದಲ್ಲಿ ನೀಡುವುದಾಗಿ ಹೇಳಿದ್ದನು. ಬಳಿಕ ಬಾಕಿ 55 ಲಕ್ಷ ರೂ. ಹಣವನ್ನು ನೀಡದೆ, 13 ಲಕ್ಷ ರೂ. ಹಣವನ್ನು ನೀಡಿ ಕ್ರಯ ಮಾಡಿಸಿಕೊಂಡಿದ್ದಾನೆ. ಉಳಿದ 42 ಲಕ್ಷ ರೂ. ಹಣವನ್ನು ನೀಡದೆ ವಂಚಿಸುತ್ತಿದ್ದಾನೆ’ ಎಂದು ಆರೋಪಿಸಿದರು.

‘ಎ.ಎಚ್. ಆನಂದ್ ನನಗೆ ಅನ್ಯಾಯ ಮಾಡಿದ ಕಾರಣ, ಲೀಗಲ್ ನೋಟೀಸ್‍ಗಳನ್ನು ಜಾರಿ ಮಾಡಿದ್ದೇವೆ. ಆದುದರಿಂದ ನನ್ನ ಮೇಲೆ ದ್ವೇಷ, ಅಸೂಹೆ ಬೆಳೆಸಿಕೊಂಡು, ಪ್ರಾಣ ಬೆದರಿಕೆ ಹಾಕುತ್ತಿದ್ದಾನೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಸಂಪರ್ಕಿಸಿದರೂ, ಯಾವುದೇ ಪ್ರಯೋಜನ ಆಗಿಲ್ಲ. ಆದರೆ ಎ.ಎಚ್. ಆನಂದ್ ಬೆದರಿಕೆ ಮುಂದುವರೆಸಿದ್ದಾನೆ’ ಎಂದು ಹೇಳಿದರು.

ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.ಎಚ್. ಆನಂದ್ ಮತ್ತು ಇತರರ ಮೇಲೆ ವೈಯಾಲಿಕಾವಲ್ ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಎಫ್‍ಐಆರ್ ಸಹ ದಾಖಲಾಗಿದೆ. ಆದರೂ ತನ್ನ ರಾಜಕೀಯ ಪ್ರಭಾವನ್ನು ಬಳಸಿಕೊಂಡು ನನ್ನ ಮೇಲೆ ಸೇಡು ತಿರಿಸಿಕೊಳ್ಳುತ್ತಿದ್ದೇನೆ. ಮಾನಸಿಕ ಕಿರುಕುಳದಿಂದಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು, ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಈ ಅನಾಹುತಗಳಿಗೆ ಎ.ಎಚ್. ಆನಂದ್ ಮೂಲ ಕಾರಣ ಎಂದು ಅವರು ದೂರಿದರು. 

ಜಮೀನು ಖರೀದಿ ವಿವಾದದ ಹಂತದಲ್ಲಿದ್ದರೂ, ಲಿಟಿಗೇಷನ್ ಅನ್ನು ಮುಚ್ಚಿ ಹಾಕಿ ನನ್ನ ಸ್ವಾಧೀನದಲ್ಲಿರುವ ನನ್ನ ಮನೆಯನ್ನು ನನ್ನ ಅನುಮತಿಯಿಲ್ಲದೆ, ರಾಜಾನುಕುಂಟೆಯಲ್ಲಿರುವ ಎಸ್.ಬಿ.ಐ. ಬ್ಯಾಂಕ್‍ನಲ್ಲಿ ಅಡವಿಟ್ಟು 50 ಲಕ್ಷ ರೂ. ಹಣ ಪಡೆದಿದ್ದಾನೆ. ಆದರೆ ನನಗೆ ಪಾವತಿ ಮಾಡಬೇಕಾದ 42 ಲಕ್ಷ ರೂ.ಗಳನ್ನು ಇನ್ನೂ ಪಾವತಿ ಮಾಡಿಲ್ಲ ಎಂದು ಅವರು ತಿಳಿಸಿದರು. 

ಪತ್ರಿಕಾಗೋಷ್ಟಿಯಲ್ಲಿ ವಕೀಲ ಕೃಷ್ಣಯ್ಯ, ಸತೀಶ್ ರಾವ್ ಮತ್ತು ಶಾಂತಪ್ಪ ಉಪಸ್ಥಿತರಿದ್ದರು.

share
Next Story
X