Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫಿಫಾ ವಿಶ್ವಕಪ್‌ನಲ್ಲಿ ರೊನಾಲ್ಡೊಗೆ...

ಫಿಫಾ ವಿಶ್ವಕಪ್‌ನಲ್ಲಿ ರೊನಾಲ್ಡೊಗೆ ರಾಜಕೀಯ ಪ್ರೇರಿತ ನಿಷೇಧ ಹೇರಲಾಗಿತ್ತು ಎಂದ ಟರ್ಕಿ ಅಧ್ಯಕ್ಷ

27 Dec 2022 12:44 PM IST
share
ಫಿಫಾ ವಿಶ್ವಕಪ್‌ನಲ್ಲಿ ರೊನಾಲ್ಡೊಗೆ ರಾಜಕೀಯ ಪ್ರೇರಿತ ನಿಷೇಧ ಹೇರಲಾಗಿತ್ತು ಎಂದ ಟರ್ಕಿ ಅಧ್ಯಕ್ಷ

ಅಂಕಾರ: ಪೋರ್ಚುಗೀಸ್ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊಗೆ ಈ ಬಾರಿಯ ಫಿಫಾ ವಿಶ್ವಕಪ್‌ನಲ್ಲಿ ರಾಜಕೀಯ ಪ್ರೇರಿತ ನಿಷೇಧ ಹೇರಲಾಗಿತ್ತು ಎಂದು ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಖತರ್‌ನಲ್ಲಿ ಅಂತ್ಯಗೊಂಡ ವಿಶ್ವಕಪ್‌ನಲ್ಲಿ ರೊನಾಲ್ಡೊರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.

ಮೊರೊಕ್ಕೊ ಎದುರಿನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 37 ವರ್ಷ ವಯಸ್ಸಿನ ರೊನಾಲ್ಡೊರನ್ನು ಪೋರ್ಚುಗಲ್ ತಂಡ ಬದಲಿ ಆಟಗಾರನನ್ನಾಗಿ ಆಡಿಸಿತ್ತು. ಆ ಪಂದ್ಯದಲ್ಲಿ ಮೊರೊಕ್ಕೊ ಎದುರು 1-0 ಅಂತರದಲ್ಲಿ ಪೋರ್ಚುಗಲ್ ತಂಡ ಪರಾಭವಗೊಂಡಿತ್ತು. ಇದಕ್ಕೂ ಮುನ್ನ ಸ್ವಿಝರ್ಲೆಂಡ್ ಎದುರು ನಡೆದಿದ್ದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲೂ ಮ್ಯಾಂಚೆಸ್ಟರ್‌ ಯುನೈಟೆಡ್‌ ಮತ್ತು ರಿಯಲ್ ಮ್ಯಾಡ್ರಿಡ್ ಕ್ಲಬ್‌ಗಳ ತಾರೆ ರೊನಾಲ್ಡೊರಿಗೆ ಪೋರ್ಚುಗಲ್ ತಂಡದ 11ರ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ.

ಐದು ವಿವಿಧ ವಿಶ್ವಕಪ್‌ಗಳಲ್ಲಿ ಗೋಲು ಗಳಿಸಿದ ಪ್ರಥಮ ಆಟಗಾರನಾಗಿ ಹೊಮ್ಮಿದ್ದ ರೊನಾಲ್ಡೊ, ಖತರ್ ವಿಶ್ವಕಪ್‌ನಿಂದ ಪೋರ್ಚುಗಲ್ ತಂಡ ನಿರ್ಗಮಿಸಿದ ನಂತರ ಕಣ್ಣೀರಿನೊಂದಿಗೆ ಅಲ್ಲಿಂದ ತವರಿಗೆ ಮರಳಿದ್ದರು.

ಪೂರ್ವ ಎರ್ಝುರುಮ್ ಪ್ರಾಂತ್ಯದಲ್ಲಿ ರವಿವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಎರ್ದೊಗನ್, "ಅವರು ರೊನಾಲ್ಡೊರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ದುರದೃಷ್ಟವಶಾತ್ ಅವರು ಆತನ ಮೇಲೆ ರಾಜಕೀಯ ಪ್ರೇರಿತ ನಿಷೇಧ ಹೇರಿದರು" ಎಂದು ಹೇಳಿದ್ದಾರೆ ಎಂದು Al Jazeera ವರದಿ ಮಾಡಿದೆ.

"ರೊನಾಲ್ಡೊನಂಥ ಫುಟ್‌ಬಾಲ್ ಆಟಗಾರನನ್ನು ಪಂದ್ಯ ಮುಕ್ತಾಯವಾಗಲು ಕೇವಲ 30 ನಿಮಿಷ ಬಾಕಿಯಿರುವಾಗ ಮೈದಾನಕ್ಕೆ ಕಳಿಸುವ ಮೂಲಕ ಆತನ ಮಾನಸಿಕ ಸ್ಥೈರ್ಯವನ್ನು ನಾಶ ಮಾಡಲಾಯಿತು ಮತ್ತು ಆತನ ಶಕ್ತಿಯನ್ನು ವ್ಯರ್ಥಗೊಳಿಸಲಾಯಿತು" ಎಂದು ಎರ್ದೊಗನ್ ಹೇಳಿದ್ದಾರೆ ಎಂದು ಸ್ಪ್ಯಾನಿಷ್ ಪ್ರಕಟಣಾ ಸಂಸ್ಥೆ Marca ವರದಿ ಮಾಡಿದೆ‌.

ಇದೇ ಸಂದರ್ಭದಲ್ಲಿ ಅವರು, ಫೆಲೆಸ್ತೀನ್ ಪ್ರಜೆಗಳ ಹೋರಾಟದ ಪರ ನಿಂತಿರುವ ವ್ಯಕ್ತಿಗಳ ಪೈಕಿ ರೊನಾಲ್ಡೊ ಕೂಡಾ ಒಬ್ಬರು ಎಂದು ಶ್ಲಾಘಿಸಿದ್ದಾರೆ.

ಆದರೆ, ಇಸ್ರೆಲ್-ಫೆಲೆಸ್ತೀನ್ ಬಿಕ್ಕಟ್ಟಿನ ಕುರಿತು ರೊನಾಲ್ಡೊ ಈವರೆಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು Al Jazeera ಪ್ರತಿಪಾದಿಸಿದೆ.

share
Next Story
X