ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ: ಸುವರ್ಣಸೌಧ ಪ್ರವೇಶಿಸಲು ಅವಕಾಶ ನೀಡುವಂತೆ ವಕೀಲರ ಪಟ್ಟು
ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ
ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ
ಬೆಳಗಾವಿ, ಡಿ.27: ರಾಜ್ಯದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಅಖಿಲ ಭಾರತ ವಕೀಲರ ಒಕ್ಕೂಟ ವತಿಯಿಂದ ಸಾವಿರಾರು ವಕೀಲರು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಈ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಡ್ಡ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ಕಿತ್ತೆಸೆದು ತಳ್ಳಾಡಿದ ಘಟನೆಯೂ ನಡೆದಿದೆ.
ಇದಕ್ಕೂ ಮುನ್ನ ಸುವರ್ಣಸೌಧದಲ್ಲಿ ಮುಖ್ಯಧ್ವಾರದಲ್ಲಿ ವಕೀಲರ ಪ್ರತಿಭಟನೆಯಲ್ಲಿ ಭಾಗಿಯಾಗಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಆರ್. ಅಶೋಕ್, 'ವಕೀಲರು ಮಾಡುವ ಪ್ರತಿಭಟನೆಯಲ್ಲಿ ನ್ಯಾಯ ಇದೆ. ನನಗೂ ವಕೀಲ ರಕ್ಷಣೆ ಕೊಡಬೇಕು ಎಂದು ಅನಿಸಿದೆ. ಈ ಕುರಿತು ಸಿಎಂ ಬೊಮ್ಮಾಯಿ ಜೊತೆಗೆ ಮಾತನಾಡಿದ್ದೇನೆ.ಅವರಿಗೆ ರಕ್ಷಣೆ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಹೇಳಿದ್ದಾರೆ.
Next Story