Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ದಿಷ್ಟ ಇತಿಹಾಸಕಾರರ ಗುಂಪಿನಿಂದ...

ನಿರ್ದಿಷ್ಟ ಇತಿಹಾಸಕಾರರ ಗುಂಪಿನಿಂದ ಭಾರತದಲ್ಲಿ ವಿರೂಪಗೊಳಿಸಿದ ಇತಿಹಾಸ ಬೋಧನೆ: ಕೇಂದ್ರ ಸಚಿವ ಆರೋಪ

27 Dec 2022 12:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿರ್ದಿಷ್ಟ ಇತಿಹಾಸಕಾರರ ಗುಂಪಿನಿಂದ ಭಾರತದಲ್ಲಿ ವಿರೂಪಗೊಳಿಸಿದ ಇತಿಹಾಸ ಬೋಧನೆ: ಕೇಂದ್ರ ಸಚಿವ ಆರೋಪ

ಸಸರಾಂ (ಬಿಹಾರ): ನಿರ್ದಿಷ್ಟ ಇತಿಹಾಸಕಾರರ ಗುಂಪಿನಿಂದ ಭಾರತದಲ್ಲಿ ವಿರೂಪಗೊಳಿಸಿದ ಇತಿಹಾಸದ ಬೋಧನೆಯಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಮಹೇಂದ್ರ ನಾಥ್ ಪಾಂಡೆ, ಭಾರತೀಯರ ಇತಿಹಾಸಕ್ಕೆ ಮರುಭೇಟಿ ನೀಡಬೇಕಾದ ಅಗತ್ಯವಿದೆ ಮತ್ತು ಇಂತಹ ವಿರೂಪಗಳನ್ನು ತಿದ್ದುವ ಪ್ರಯತ್ನಗಳು ನಡೆಯಬೇಕಿವೆ ಎಂದು ಪ್ರತಿಪಾದಿಸಿದ್ದಾರೆ.

ಬಿಹಾರದ ಸಸರಾಂ ಜಿಲ್ಲೆಯ ಜಮುಹಾರ್‌ನ ಗೋಪಾಲ್ ನಾರಾಯಣ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ ಹಾಗೂ ಭಾರತೀಯ ಇತಿಹಾಸ ಸಂಕಲನ ಯೋಜನೆ ಜಂಟಿಯಾಗಿ ಆಯೋಜಿಸಿದ್ದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಹುತೇಕ ಇತಿಹಾಸಕಾರರು ಭಾರತ ಅಥವಾ ಭಾರತದ ಸಂಸ್ಕೃತಿ ಮತ್ತು ನಾಗರಿಕತೆಗೆ ನ್ಯಾಯ ಒದಗಿಸಿಲ್ಲ. ನಿರ್ದಿಷ್ಟ ಇತಿಹಾಸಕಾರರ ಗುಂಪು ವಿರೂಪಗೊಳಿಸಿದ ಇತಿಹಾಸವನ್ನು ಬೋಧಿಸುತ್ತಿದೆ. ಈಗ ಈ ಕುರಿತು ಚಿಂತನೆ ನಡೆಸಬೇಕಾದ ಸಮಯವಾಗಿದ್ದು, ಸರಿಪಡಿಸುವ ಕ್ರಮವನ್ನು ಜಾರಿಗೊಳಿಸಿ, ಈ ತಪ್ಪುಗಳನ್ನು ತಿದ್ದಬೇಕಿದೆ ಮತ್ತು ಅಂತಿಮವಾಗಿ ಪ್ರಾಚೀನ ಭಾರತೀಯ ಇತಿಹಾಸವನ್ನು ವಿಜೃಂಭಿಸಬೇಕಿದೆ. ನಿರ್ದಿಷ್ಟ ಸೈದ್ಧಾಂತಿಕತೆಗೆ ಸೇರಿರುವ ನಿರ್ದಿಷ್ಟ ಇತಿಹಾಸಕಾರರ ಗುಂಪಿನಿಂದ ಮಂಡನೆಯಾಗಿರುವ ವಿರೂಪಗೊಳಿಸಿದ ಭಾರತೀಯ ಇತಿಹಾಸ ದೃಷ್ಟಿಕೋನವನ್ನು ನಾವು ಸರಿಪಡಿಸಲೇಬೇಕಿದೆ ಎಂದು ಹೇಳಿದ್ದಾರೆ.

ಕೆಲವು ಮೂಲಭೂತ ತಿದ್ದುಪಡಿಗಾಗಿ ಭಾರತೀಯ ಇತಿಹಾಸಕ್ಕೆ ಮರುಭೇಟಿ ನೀಡಬೇಕಾದ ಅಗತ್ಯವಿದೆ ಎಂದು ಹೇಳಿರುವ ಸಚಿವರು, ವಾಸ್ತವವೆಂದರೆ ಭಾರತೀಯ ನಾಗರಿಕತೆ ಅತ್ಯಂತ ಪ್ರಾಚೀನವಾಗಿದೆ. ಈ ನಾಗರಿಕತೆಯ ಜನರು ಜ್ಞಾನ ಮತ್ತು ಆಡಳಿತದ ವಿಷಯದಲ್ಲಿ ವಿಶ್ವದ ಬಹುತೇಕ ದೇಶಗಳಿಗಿಂತ ಮುಂದಿದ್ದರು. ದೇಶಕ್ಕೆ ತನ್ನ ದಾಖಲೆಯನ್ನು ನೇರವಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಇತಿಹಾಸವು ವಿಷಯಾಧಾರಿತವಾಗಿ ದಾಖಲಾಗಬೇಕಿದೆ. ಹೀಗಾಗಿ ಇತಿಹಾಸವನ್ನು ಸರಿಪಡಿಸಿದ ಆವೃತ್ತಿಯಲ್ಲಿ ಹೊರತರುವ ಜವಾಬ್ದಾರಿಯನ್ನು ಭಾರತೀಯ ಪ್ರಾಚೀನ ಇತಿಹಾಸ ಯೋಜನೆ ಸಂಸ್ಥೆಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಆರೆಸ್ಸೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸುರೇಶ್ ಸೋನಿ, ಭಾರತದ ಸಂಪದ್ಭರಿತ ಇತಿಹಾಸವನ್ನು ಸರಿಯಾದ ಕ್ರಮದಲ್ಲಿ ವಿಜೃಂಭಿಸಲು ಇದು ಸಕಾಲವಾಗಿದೆ. ಈ ಪ್ರಕ್ರಿಯೆ ಇದೀಗ ಆರಂಭಗೊಂಡಿದ್ದು, ಅಗತ್ಯವಿರುವ ಎಲ್ಲ ತಿದ್ದುಪಡಿಯನ್ನು ಭಾರತದ ಇತಿಹಾಸದಲ್ಲಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X