Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೋಟರ್ ಐಡಿ ಹಗರಣ: ಚಿಲುಮೆ ಸಂಸ್ಥೆಯನ್ನು...

ವೋಟರ್ ಐಡಿ ಹಗರಣ: ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ

ಸಂಸ್ಥೆಯ ನಿರ್ದೇಶಕರ ಸಹಭಾಗಿತ್ವದ ಸಂಸ್ಥೆಗಳಿಗೂ ಟೆಂಡರ್ ನಿರಾಕರಣೆ

27 Dec 2022 6:28 PM IST
share
ವೋಟರ್ ಐಡಿ ಹಗರಣ: ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ
ಸಂಸ್ಥೆಯ ನಿರ್ದೇಶಕರ ಸಹಭಾಗಿತ್ವದ ಸಂಸ್ಥೆಗಳಿಗೂ ಟೆಂಡರ್ ನಿರಾಕರಣೆ

ಬೆಂಗಳೂರು, ಡಿ.27: ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು(ಚಿಲುಮೆ ಸಂಸ್ಥೆ) ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಅರಿವು ಮೂಡಿಸಲು ಚಿಲುಮೆ ಸಂಸ್ಥೆಗೆ ಆ.20ರಂದು ಅನುಮತಿಯನ್ನು ನೀಡಲಾಗಿತ್ತು. ಸೆ.20ರಂದು ಸಮನ್ವಯ ಎಂಬ ಟ್ರಸ್ಟ್, ಚಿಲುಮೆ ಸಂಸ್ಥೆಯ ವಿರುದ್ಧ ಬಿಬಿಎಂಪಿಯಲ್ಲಿ ದೂರು ದಾಖಲಿಸಿತ್ತು. ಹಾಗಾಗಿ ನ.2ರಂದು ಚಿಲುಮೆಗೆ ನೀಡಲಾಗಿದ್ದ ಅನುಮತಿಯನ್ನು ಬಿಬಿಎಂಪಿ ಹಿಂಪಡೆದಿತ್ತು. 

ಚಿಲುಮೆ ಸಂಸ್ಥೆಯ ಪ್ರತಿನಿಧಿಗಳು ಮತಗಟ್ಟೆಯ ಅಧಿಕಾರಿಗಳು ಎಂದು ಗುರುತಿನ ಚೀಟಿಯನ್ನು ಧರಿಸಿ, ಮನೆ ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪಡೆಯಲಾಗುತ್ತಿತ್ತು. ಈ ದೂರಿನ ಅನ್ವಯ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಮತ್ತು ಹಲಸೂರು ಪೊಲೀಸ್ ಠಾಣೆಯಲ್ಲಿ ನ.17ರಂದು ಪ್ರತ್ಯೇಕ ಎಫ್‍ಐಆರ್ ಗಳು ದಾಖಲು ಮಾಡಲಾಗಿತ್ತು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಅರಿವು ಮೂಡಿಸಲು ನೀಡಲಾಗಿದ್ದ ಅನುಮತಿಯನ್ನು ಚಿಲುಮೆ ಸಂಸ್ಥೆಯು ದುರುಪಯೋಗ ಮಾಡಿಕೊಳ್ಳಲಾಗಿದೆ. ಅಲ್ಲದೆ, ರಾಜಕೀಯ ಪಕ್ಷದಿಂದ ದೇಣಿಗೆ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸುವ ಕುರಿತು, ಬಿಬಿಎಂಪಿಯು ಚಿಲುಮೆ ಸಂಸ್ಥೆಗೆ ಡಿ.7ರಂದು ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಸೂಕ್ತ ಉತ್ತರವನ್ನು ನೀಡದ ಕಾರಣ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ.

ಚಿಲುಮೆ ಸಂಸ್ಥೆಯಾಗಲೀ, ಸಂಸ್ಥೆಯ ನಿರ್ದೇಶಕರ ಸಹಭಾಗಿಯಾಗಿ ನಡೆಯುವ ಇತರೆ ಯಾವುದೇ ಸಂಸ್ಥೆಯಾಗಲೀ ಬಿಬಿಎಂಪಿ ವತಿಯಿಂದ ನಡೆಸುವ ಉಚಿತ ಕಾರ್ಯಕ್ರಮಗಳಿಗೆ ಅನುಮತಿಯನ್ನು ಪಡೆಯದಂತೆ ನಿರ್ಬಂಧಿಸಲಾಗಿದೆ. ಹಾಗೆಯೇ ಪಾಲಿಕೆಯ ಸೇವೆ ಹಾಗೂ ಸಂಗ್ರಹಣೆಯ ಟೆಂಡರ್‍ಗಳಲ್ಲಿ ಭಾಗವಹಿಸದಂತೆಯೂ, ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆಯೂ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

share
Next Story
X