Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಯುದ್ಧದ ಮುಖ್ಯ ಫಲಾನುಭವಿ...

ಉಕ್ರೇನ್ ಯುದ್ಧದ ಮುಖ್ಯ ಫಲಾನುಭವಿ ಅಮೆರಿಕ: ರಶ್ಯ ವಿದೇಶಾಂಗ ಸಚಿವ ಲಾವ್ರೋವ್ ‌

27 Dec 2022 11:15 PM IST
share
ಉಕ್ರೇನ್ ಯುದ್ಧದ ಮುಖ್ಯ ಫಲಾನುಭವಿ ಅಮೆರಿಕ: ರಶ್ಯ ವಿದೇಶಾಂಗ ಸಚಿವ ಲಾವ್ರೋವ್ ‌

ಮಾಸ್ಕೊ,ಡಿ.7: ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕವು ‘ಮುಖ್ಯ ಫಲಾನುಭವಿಯಾಗಿದೆ’ ಎಂದು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯಿ ಲಾವ್ರೊವ್(Sergey Lavrov) ಹೇಳಿದ್ದಾರೆ. ನ್ಯಾಟೊ ಜೊತೆಗೂಡಿ ಅಮೆರಿಕವು ರಶ್ಯವನ್ನು ಧ್ವಂಸಗೊಳಿಸಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಶ್ಯವು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪ್ರದೇಶಗಳನ್ನು ತನಗೆ ಒಪ್ಪಿಸಬೇಕೆಂಬ ಮಾಸ್ಕೊದ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಈ ವಿಷಯವನ್ನು ರಶ್ಯವೇ ಖುದ್ದಾಗಿ ಬಗೆಹರಿಸಲಿದೆಯೆಂದು ಲಾವ್ರೋವ್ ಉಕ್ರೇನ್ ಗೆ ಅಂತಿಮ ಎಚ್ಚರಿಕೆ ನೀಡಿದ್ದಾರೆ.

ಈಗ ನಡೆಯುತ್ತಿರುವ ಸಂಘರ್ಷದಲ್ಲಿ ಚೆಂಡು ಉಕ್ರೇನ್ ಆಡಳಿತದ ಬಳಿಯಿದೆ. ವಾಶಿಂಗ್ಟನ್ ಅದರ ಹಿಂದೆ ನಿಂತಿದೆ ಎಂದು ಲಾವ್ರೋ ರಶ್ಯದ ಅಧಿಕೃತ ಸುದ್ದಿಸಂಸ್ತೆಗೆ ತಾಸ್ ಗೆ ತಿಳಿಸಿದ್ದಾರೆ. ‘‘ ಇಂತಹ ವಿವೇಕರಹಿತ ಪ್ರತಿರೋಧವನ್ನು ಇವರಿಬ್ಬರೂ ಯಾವುದೇ ಕ್ಷಣದಲ್ಲಿ ನಿಲ್ಲಿಸಬಹುದಾಗಿದೆ’’ ಎಂದು ಲಾವ್ರೊವ್ ವ್ಯಂಗ್ಯವಾಡಿದರು.

ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ‘ಶಾಂತಿ ಶೃಂಗಸಭೆ’ಯೊಂದನ್ನು ನಡೆಸಲು ಉಕ್ರೇನ್ ಬಯಸುತ್ತಿದೆ. ಆದರೆ ರಶ್ಯವು ಅದರಲ್ಲಿ ಪಾಲ್ಗೊಳ್ಳುವುದು ಎಂಬುದನ್ನು ತಾನು ನಿರೀಕ್ಷಿಸುವುದಿಲ್ಲವೆಂದು ಉಕ್ರೇನ್ನ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಹೇಳಿಕೆ ನೀಡಿದ ಮರುದಿನವೇ ಲಾವ್ರೊ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿಕೆ ನೀಡಿ, ಯುದ್ಧಮುಂಚೂಣಿಯ ಪ್ರದೇಶವಾದ ಡೊನ್ಬಾಸ್ನಲ್ಲಿ ಪರಿಸ್ಥಿತಿ ಅತ್ಯಂತ ಕಷ್ಟಕರ ಹಾಗೂ ಯಾತನಾಮಯವಾಗಿದೆ . ದೇಶವು ತನ್ನ ಎಲ್ಲಾ ಶಕ್ತಿ ಹಾಗೂ ಗಮನವನ್ನು ಅದೆರೆಡೆಗೆ ಕೇಂದ್ರೀಕರಿಸಬೇಕಾಗಿದೆ ಎಂದು ಹೇಳಿದ್ದಾರೆ.

share
Next Story
X