Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಸಾರಿಗೆ ಪ್ರಾಧಿಕಾರ ಮಸೂದೆ...

ನೂತನ ಸಾರಿಗೆ ಪ್ರಾಧಿಕಾರ ಮಸೂದೆ ಅಂಗೀಕರಿಸಿದ ರಾಜ್ಯ ವಿಧಾನಸಭೆ

28 Dec 2022 6:34 PM IST
share
ನೂತನ ಸಾರಿಗೆ ಪ್ರಾಧಿಕಾರ ಮಸೂದೆ ಅಂಗೀಕರಿಸಿದ ರಾಜ್ಯ ವಿಧಾನಸಭೆ

ಬೆಳಗಾವಿ (ಸುವರ್ಣಸೌಧ), ಡಿ.28: ಕರ್ನಾಟಕ ವಿಧಾನಸಭೆಯು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್ ಟಿಎ) ಮಸೂದೆಯನ್ನು ಮಂಗಳವಾರ ಅಂಗೀಕರಿಸಿದೆ. ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು.

ಬೆಂಗಳೂರಿನ ನಗರ ಸಂಚಾರ ಪ್ರದೇಶಕ್ಕೆ ಅನ್ವಯಿಸುವ ಈ ಮಸೂದೆಯು ಈ ಪ್ರದೇಶದಲ್ಲಿ ಅಭಿವೃದ್ಧಿ, ಕಾರ್ಯಾಚರಣೆ, ನಿರ್ವಹಣೆ ಮತ್ತು ನಗರ ಸಂಚಾರದ ಮೇಲ್ವಿಚಾರಣೆಯ ಉದ್ದೇಶವನ್ನು ಹೊಂದಿದೆ.

ಏಕೆ ಈ ಮಸೂದೆ?

ಬೆಂಗಳೂರಿನ ಸಂಚಾರ ದಟ್ಟಣೆಯು ರಾಜ್ಯ ಸರಕಾರಕ್ಕೆ ದೊಡ್ಡ ತಲೆನೋವಾಗಿದೆ, ಏಕೆಂದರೆ ಸಂಚಾರ ಸಮಸ್ಯೆಗಳು ಹೂಡಿಕೆದಾರರು ಹಿಂಜರಿಯುವಂತೆ ಮಾಡಬಹುದು ಎಂದು ಅದು ಭಾವಿಸಿದೆ. ವಿವಿಧ ಸಾರಿಗೆ ಮತ್ತು ಪೌರ ಸಂಸ್ಥೆಗಳ ನಡುವೆ ಸಮನ್ವಯದ ಕೊರತೆಯಿದ್ದು,ಇದರಿಂದಾಗಿ ಸಾರ್ವಜನಿಕ ಸಾರಿಗೆ ಯೋಜನೆಗಳು ವಿಳಂಬಗೊಳ್ಳುತ್ತಿವೆ ಎಂಬ ದೂರುಗಳೂ ಇವೆ.

ಅಲ್ಲದೆ ರಾಷ್ಟ್ರೀಯ ನಗರ ಸಾರಿಗೆ ನೀತಿಯೂ ಬೆಂಗಳೂರಿನಂತಹ ನಗರಗಳಲ್ಲಿ ಸಮಗ್ರ ಸಾರಿಗೆ ಯೋಜನೆಯನ್ನು ಸಾಧ್ಯವಾಗಿಸಲು ವಿವಿಧ ಇಲಾಖೆಗಳ ಏಕೀಕರಣಕ್ಕಾಗಿ ಮಾರ್ಗಸೂಚಿಯನ್ನು ರೂಪಿಸಿದೆ.

ಮಸೂದೆಯ ಅನುಷ್ಠಾನವು ಸುಸ್ಥಿರ ನಗರ ಸಾರಿಗೆ ಮಾದರಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರಿಗೆ ಸಮಗ್ರ ಸಂಚಾರ ಯೋಜನೆಯನ್ನು ಖಚಿತಪಡಿಸಲಿದೆ. ಭೂ ಬಳಕೆ ಮತ್ತು ಸಾರಿಗೆ ಯೋಜನೆಯ ಏಕೀಕರಣ ಕೂಡ ಪ್ರಮುಖ ಅಂಶಗಳಾಗಿವೆ. ನಗರ ಸಂಚಾರ ಪ್ರದೇಶದಲ್ಲಿ ಪ್ರಯಾಣ ವ್ಯವಸ್ಥೆಯನ್ನು ನಿಯಂತ್ರಿಸಲು ದಟ್ಟಣೆಯ ಪ್ರದೇಶಗಳಲ್ಲಿ ಪಾರ್ಕಿಂಗ್ ಮತ್ತು ಪಾರ್ಕಿಂಗ್ ನಿಯಮಗಳು,ಶುಲ್ಕ ವಿಧಿಸುವಿಕೆ,ವಿಶೇಷ ಉದ್ದೇಶದ ಲೇನ್ಗಳು ಇತ್ಯಾದಿ ಕ್ರಮಗಳಿಗೆ ಅವಕಾಶವನ್ನೂ ಶಾಸನವು ಒದಗಿಸಲಿದೆ.

ಬಿಎಂಎಲ್ ಟಿಎ 36 ಸದಸ್ಯರನ್ನು ಒಳಗೊಂಡಿದ್ದು, ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸಿಟಿ ಪೊಲೀಸ್, ನೈರುತ್ಯ ರೈಲ್ವೆ ಮತ್ತು ಭಾರತೀಯ ಹೆದ್ದಾರಿ ಪ್ರಾಧಿಕಾರ ಇತ್ಯಾದಿಗಳ ಪ್ರತಿನಿಧಿಗಳು ಬಿಎಂಎಲ್ ಟಿಎ ಸದಸ್ಯರಾಗಿರುತ್ತಾರೆ.

ದಂಡಗಳು

ಬಿಎಂಎಲ್ ಟಿಎ ದ ನಿಯಮಗಳು, ನಿಬಂಧನೆಗಳು, ಆದೇಶಗಳು ಅಥವಾ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲಗೊಳ್ಳುವ ವ್ಯಕ್ತಿಗೆ ಒಂದು ಲ.ರೂ.ವರೆಗೆ ದಂಡವನ್ನು ವಿಧಿಸಲಾಗುತ್ತದೆ. ಎರಡನೇ ಸಲ ಉಲ್ಲಂಘಿಸಿದರೆ ದಂಡದ ಮೊತ್ತವು ಎರಡು ಲ.ರೂ.ಗಳಿಗೆ ಹೆಚ್ಚಲಿದೆ.

ಉಲ್ಲಂಘನೆಗಳು ಮುಂದುವರಿದರೆ ಆರೋಪಿಗೆ ಉಲ್ಲಂಘನೆಯ ಅವಧಿಯಲ್ಲಿ ಪ್ರತಿದಿನ 5,000 ರೂ.ವರೆಗಿನ ಹೆಚ್ಚುವರಿ ದಂಡವನ್ನು ವಿಧಿಸಲಾಗುವುದು. ಕಾನೂನಿನ ನಿಬಂಧನೆಗಳಡಿ ವಿವಿಧ ರಾಜ್ಯ ಸರಕಾರಿ ಇಲಾಖೆಗಳು ಮತ್ತು ಏಜೆನ್ಸಿಗಳ ಅಧಿಕಾರಿಗಳನ್ನೂ ದಂಡಿಸಬಹುದಾಗಿದೆ.

share
Next Story
X