Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 74 ದಿನ ಸಿಜೆಐ ಆಗಿದ್ದ ಜ. ಯು.ಯು....

74 ದಿನ ಸಿಜೆಐ ಆಗಿದ್ದ ಜ. ಯು.ಯು. ಲಲಿತ್‌ ನಿವಾಸದಲ್ಲಿದ್ದರು 40ಕ್ಕೂ ಅಧಿಕ ಸಹಾಯಕ ಸಿಬ್ಬಂದಿ!

28 Dec 2022 6:36 PM IST
share
74 ದಿನ ಸಿಜೆಐ ಆಗಿದ್ದ ಜ. ಯು.ಯು. ಲಲಿತ್‌ ನಿವಾಸದಲ್ಲಿದ್ದರು 40ಕ್ಕೂ ಅಧಿಕ ಸಹಾಯಕ ಸಿಬ್ಬಂದಿ!

ಹೊಸದಿಲ್ಲಿ: ಆಗಸ್ಟ್‌ 27 ರಿಂದ ನವೆಂಬರ್‌ 8ರ ತನಕ, ಒಟ್ಟು 74 ದಿನಗಳ ಕಾಲ  ಸುಪ್ರೀಂ ಕೋರ್ಟಿನ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಜಸ್ಟಿಸ್‌ ಯು ಯು ಲಲಿತ್‌ ತಮ್ಮ ಅಧಿಕಾರಾವಧಿಯಲ್ಲಿ 19, ಅಕ್ಬರ್‌ ರೋಡ್‌ನಲ್ಲಿದ್ದ ತಮ್ಮ ಅಧಿಕೃತ ನಿವಾಸದಲ್ಲಿ ದಾಖಲೆ 40 ಕ್ಕೂ ಹೆಚ್ಚು ಸಹಾಯಕ ಸಿಬ್ಬಂದಿಗಳನ್ನು ಹೊಂದಿದ್ದರು. ರಾಷ್ಟ್ರಪತಿ ಭವನ ಅಥವಾ ಪ್ರಧಾನಿ ನಿವಾಸ ಹೊರತುಪಡಿಸಿ ಬೇರೆ ಯಾವುದೇ ಸಂವಿಧಾನಿಕ ಹುದ್ದೆ ಹೊಂದಿದವರ ಗೃಹ ಕಚೇರಿಯಲ್ಲಿ ಇಷ್ಟೊಂದು ಸಂಖ್ಯೆಯ ಸಿಬ್ಬಂದಿ ಹೊಂದಿದ ಇತಿಹಾಸವಿಲ್ಲ ಎಂದು timesofindia ವರದಿ ಮಾಡಿದೆ.

ಸಿಜೆಐ ಆಗಿ ನಿವೃತ್ತರಾದಾಗ ಕೆಲವೊಂದು ಸಿಬ್ಬಂದಿಗಳನ್ನು ಜಸ್ಟಿಸ್‌ ಲಲಿತ್‌ ಕೈಬಿಟ್ಟರಾದರೂ ಈಗ  28 ಅಟೆಂಡರುಗಳು ಹಾಗೂ ಸಹಾಯಕ ಸಿಬ್ಬಂದಿ ಅವರ ನಿವಾಸದಲ್ಲಿದ್ದಾರೆ. ಈ ಸಿಬ್ಬಂದಿಯಲ್ಲಿ ಸುಪ್ರೀಂ ಕೋರ್ಟ್‌ ಸ್ವಚ್ಛತೆ ಮತ್ತಿತರ ಕಾರ್ಯಗಳಿಗಾಗಿ ಸಿಬ್ಬಂದಿ ನೇಮಿಸಲು ಹೊರಗುತ್ತಿಗೆ ನೀಡಿದ್ದ ಬಿವಿಜಿ ಇಂಡಿಯಾದಿಂದ ಬಂದ ಕೆಲ ಸಿಬ್ಬಂದಿಗಳೂ ಇದ್ದಾರೆ.

ಸಾಮಾನ್ಯವಾಗಿ ಮುಖ್ಯ ನ್ಯಾಯಮೂರ್ತಿಗಳು 12-15 ಸಹಾಯಕ ಸಿಬ್ಬಂದಿ ಹೊಂದಿರುತ್ತಿದ್ದರೆ ನಿವೃತ್ತರಾದ ನಂತರ 2-3 ಸಹಾಯಕ ಸಿಬ್ಬಂದಿಗಳನ್ನು ಹೊಂದಿರುತ್ತಾರೆ. ನಿವೃತ್ತ ಸಿಜೆಐ ದಿಲ್ಲಿಯಲ್ಲಿಯೇ ಉಳಿದುಕೊಂಡರೆ ಸಿಬ್ಬಂದಿಯನ್ನು ಸುಪ್ರೀಂ ಕೋರ್ಟ್‌ ಒದಗಿಸುತ್ತದೆ, ಅವರು ತಮ್ಮ ತವರು ರಾಜ್ಯಕ್ಕೆ ಮರಳಿದರೆ ಆಯಾ ರಾಜ್ಯದ ಹೈಕೋರ್ಟುಗಳು ಸಹಾಯಕ ಸಿಬ್ಬಂದಿಯನ್ನು ಒದಗಿಸುತ್ತವೆ.

ಈಗಿನ ಸಿಜೆಐ ಡಿ ವೈ ಚಂದ್ರಚೂಡ್‌ ಅವರು ಸದ್ಯ ಜಸ್ಟಿಸ್‌ ಲಲಿತ್‌ ಇರುವ ನಿವಾಸದಲ್ಲಿ ವಾಸಿಸಲು ನಿರ್ಧರಿಸಿರುವುದರಿಂದ ಜಸ್ಟಿಸ್‌ ಲಲಿತ್‌ ಅವರಿಗೆ ಸಫ್ದರ್‌ಜಂಗ್‌ ರಸ್ತೆಯಲ್ಲಿರುವ ಬಂಗಲೆ ಒದಗಿಸಲಾಗಿದೆ. ಆದರೆ ಹೊಸ ನಿವಾಸಕ್ಕೆ ತೆರಳಿದ ನಂತರ ಈಗಿನ 28 ಸಹಾಯಕ ಸಿಬ್ಬಂದಿ ಪೈಕಿ ಕನಿಷ್ಠ 12 ಮಂದಿಯನ್ನು ಉಳಿಸಿಕೊಳ್ಳಲು ಜಸ್ಟಿಸ್‌ ಲಲಿತ್‌ ಅವರ ಕಚೇರಿ ಮನವಿ ಮಾಡಿದೆಯೆನ್ನಲಾಗಿದೆ.

share
Next Story
X