Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶರಾವತಿ ನಿರಾಶ್ರಿತರ ಹಿತರಕ್ಷಣೆಗೆ ಸರಕಾರ...

ಶರಾವತಿ ನಿರಾಶ್ರಿತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿರಬೇಕು: ಸಿದ್ದರಾಮಯ್ಯ

28 Dec 2022 10:45 PM IST
share
ಶರಾವತಿ ನಿರಾಶ್ರಿತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿರಬೇಕು: ಸಿದ್ದರಾಮಯ್ಯ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.28: ಶರಾವತಿ ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ಈ ಸರಕಾರವು ಹಿಂಪಡೆದಿರುವ ನಮ್ಮ ಸರಕಾರ ಹೊರಡಿಸಿದ್ದ ಎಲ್ಲ 55 ಪ್ರಕರಣಗಳನ್ನು ಮರು ಸ್ಥಾಪಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಬುಧವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ರದ್ದು ಮಾಡಿರುವ 1 ಪ್ರಕರಣದ ವಿರುದ್ಧ ಸರಕಾರ ಮೇಲ್ಮನವಿ ಸಲ್ಲಿಸಬೇಕು. ಅಗತ್ಯ ಇರುವ ಕಡೆ ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಗಳನ್ನು ಮಂಜೂರು ಮಾಡುವುದು ಹಾಗೂ ಮಂಜೂರು ಮಾಡಿರುವ ಭೂಮಿಗಳನ್ನು ರೈತರ ವಶದಲ್ಲಿಯೆ ತಕ್ಷಣ ಉಳಿಸುವಂತಾಗಬೇಕು. ಒಟ್ಟಿನಲ್ಲಿ ಸಂತ್ರಸ್ತರಿಗೆ ಸರಕಾರದ ಯಾವುದೇ ಇಲಾಖೆಗಳಿಂದ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಣೆ ನೀಡಲು ಬದ್ಧವಾಗಿರಬೇಕು ಎಂದರು.

ರಾಜ್ಯದ ಜನರಿಗೆ ಅನೇಕ ದಶಕಗಳಿಂದ ಬೆಳಕು ಕೊಟ್ಟಿರುವ ಶಿವಮೊಗ್ಗ ಜಿಲ್ಲೆಯ ಶರಾವತಿ ಪ್ರದೇಶದ ಜನರ ಬದುಕು ಇಂದು ಕತ್ತಲೆಯಲ್ಲಿ ಮುಳುಗಿದೆ. ಶರಾವತಿ ಯೋಜನೆಗಾಗಿ ಭೂಮಿಯನ್ನು ಬಿಟ್ಟುಕೊಟ್ಟವರಿಗೆ ತಮ್ಮ ಪೂರ್ವಜರು ಬಾಳಿ ಬದುಕಿದ್ದ ನೆಲವನ್ನು, ನೆಲದೊಂದಿನ ನೆನಪುಗಳನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತಿದ್ದೇವೆ ಎಂಬ ದುಃಖ ಕಾಡಿದ್ದರೂ ನಾಡಿಗಾಗಿ ತ್ಯಾಗದ ಕೆಲಸ ಮಾಡುತ್ತಿದ್ದೇವೆ ಎಂಬ ಭಾವನೆಯಲ್ಲಿ ಈ ಯೋಜನೆಗಾಗಿ ಜಾಗವನ್ನು ಬಿಟ್ಟುಕೊಟ್ಟಿದ್ದವರು ಇಂದು ತಮ್ಮ ಕಾಳಜಿಗಳಿಗಾಗಿ ಪರಿತಪಿಸುವಂತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಯೋಜನೆಗಾಗಿ ಅಂದಾಜು 15,550 ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ. ಇದರಲ್ಲಿ 12,500 ಎಕರೆ ಭತ್ತ ಬೆಳೆಯುತ್ತಿದ್ದ ಪ್ರದೇಶ. 1000 ಎಕರೆ ಅಡಿಕೆ, 2100 ಎಕರೆ ಖುಷ್ಕಿ ಭೂಮಿ ಮುಳುಗಡೆಯಾಗಿತ್ತು. ಪುನರ್ವಸತಿಗಾಗಿ ಅರಣ್ಯ ಇಲಾಖೆಗೆ ಸೇರಿದ 9947 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ಸುಮಾರು 34 ಸರಕಾರಿ ಆದೇಶಗಳ ಮೂಲಕ 19067.08 ಎಕರೆ ಭೂಮಿಯನ್ನು ಶರಾವತಿ ಸಂತ್ರಸ್ಥರಿಗಾಗಿ ನೀಡಲಾಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸರಕಾರ ಮಾಡಿದ್ದ ಎಲ್ಲ 55 ಡಿ-ರಿಸರ್ವ್ ಅಧಿಸೂಚನೆಗಳನ್ನೂ ರದ್ದು ಮಾಡಿ ಈ ಸರಕಾರ ಆದೇಶ ಹೊರಡಿಸಿತು. ಇದರ ಜೊತೆಗೆ ಮುಖ್ಯಮಂತ್ರಿ ವಿಧಾನ ಪರಿಷತ್ತಿನಲ್ಲಿ ನೀಡಿರುವ ಹೇಳಿಕೆ ಪ್ರಕಾರ ಶಿವಮೊಗ್ಗ ಜಿಲ್ಲೆಯ 12385.89 ಹೆಕ್ಟೇರ್ ವಿಸ್ತೀರ್ಣದ (30965 ಎಕರೆ) ಭೂಮಿಯ ಎಲ್ಲ ಮಂಜೂರಾತಿಗಳನ್ನೂ ರದ್ದು ಮಾಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು ಎಂದು ಅವರು ಟೀಕಿಸಿದರು.

ಈ ಕೆಟ್ಟ ಸರಕಾರದ ಅಮಾನವೀಯ ನಿರ್ಧಾರದಿಂದಾಗಿ ಈಗ ಅಂದಾಜು 2.5 ಲಕ್ಷ ಜನರು ಇನ್ನಿಲ್ಲದ ಸಂಕಟಕ್ಕೆ ಸಿಕ್ಕಿಕೊಂಡಿದ್ದಾರೆ. ಡಬಲ್ ಎಂಜಿನ್ ಸರಕಾರ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಬಿಜೆಪಿಗರು ಕೇಂದ್ರಕ್ಕೆ ಹೋಗಿ ಮೋದಿ ಎದುರುಗಡೆ ನಿಂತು ಜಿಲ್ಲೆಯ ಜನರ ಸಂಕಷ್ಟ ಪರಿಹರಿಸುವ ತಾಕತ್ತನ್ನು ಪ್ರದರ್ಶಿಸಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಶರಾವತಿಯ ನಿರಾಶ್ರಿತರೂ ಸೇರಿದಂತೆ, ಚಕ್ರ, ವಾರಾಹಿ, ಸಾವೆ ಹಕ್ಲು, ಭದ್ರಾ, ತುಂಗಾ ಅಣೆಕಟ್ಟುಗಳ ಸಂತ್ರಸ್ಥರ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಬೇಕು. ಜೊತೆಗೆ ಎಲ್ಲ ಬಗರ್ ಹುಕುಂ ಅರ್ಜಿಗಳಾದ 50, 53 ಮತ್ತು 57 ಅನ್ನು ಜನಪರವಾಗಿ ಇತ್ಯರ್ಥ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡಿಕೊಡಬೇಕು. ನಮ್ಮ ಸರಕಾರ ಜಾರಿಗೆ ತಂದಿರುವ 94ಸಿ, ಸಿಸಿ, ಡಿ, ಕಂದಾಯ ಗ್ರಾಮ ಮುಂತಾದವುಗಳಡಿ ಜಮೀನುಗಳನ್ನು ಮಂಜೂರು ಮಾಡಿ ವಸತಿ ಹಕ್ಕುಗಳನ್ನು ಸ್ಥಾಪಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

share
Next Story
X