Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಂಗದ ತನ್ನ ಮಿತಿಯನ್ನು ಮೀರಕೂಡದು:...

ನ್ಯಾಯಾಂಗದ ತನ್ನ ಮಿತಿಯನ್ನು ಮೀರಕೂಡದು: ಕಾನೂನು ಸಚಿವ ಕಿರಣ್ ರಿಜಿಜು

28 Dec 2022 11:05 PM IST
share
ನ್ಯಾಯಾಂಗದ ತನ್ನ ಮಿತಿಯನ್ನು ಮೀರಕೂಡದು: ಕಾನೂನು ಸಚಿವ ಕಿರಣ್ ರಿಜಿಜು

ಹೊಸದಿಲ್ಲಿ, ಡಿ.28: ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಇತರ ಅಂಗಗಳ ಅಧಿಕಾರವನ್ನು ಅತಿಕ್ರಮಿಸಲು ಯತ್ನಿಸುವುದಿಲ್ಲವೆಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ. ಆದರೆ ನ್ಯಾಯಾಂಗ ಕೂಡಾ ಅದರ ಮಿತಿಯೊಳಗಿರಬೇಕೆಂದು ಅವರು ಪ್ರತಿಪಾದಿಸಿದ್ದಾರೆ.

‘ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಮುಂದೆ ಇರುವ ನೂತನ ಸವಾಲುಗಳು ಹಾಗೂ ಅವಕಾಶಗಳು ’’ ಕುರಿತಂತೆ ಅಖಿಲ ಭಾರತೀಯ ಅಧಿವಕ್ತಾ (ನ್ಯಾಯವಾದಿ) ಪರಿಷದ್ ನ 16ನೇ ರಾಷ್ಟ್ರೀಯ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

‘‘ನಾವು (ಸರಕಾರ)ನಮ್ಮ ಮಿತಿಗಳನ್ನು ಮೀರುವುದಿಲ್ಲ ಹಾಗೂ ನ್ಯಾಯಾಂಗ ಕೂಡಾ ಅದರ ಸಾಂವಿಧಾನಿಕ ಮಿತಿಯಲ್ಲಿರಬೇಕಾಗಿದೆ ಮತ್ತು ಆಗ ಸುದ್ದಿ ಮಾಧ್ಯಮಗಳಿಗೆ ಮಸಾಲೆ ದೊರೆಯುವುದಿಲ್ಲ. ಆದರೆ ಒಂದು ವೇಳೆ ನೀವು ನಿಮ್ಮ ಮಿತಿಯನ್ನು ಮೀರಿದಲ್ಲಿ,ನೀವು ಮಾಧ್ಯಮಗಳಿಗೆ ಮೇವು ನೀಡುತ್ತೀರಿ’’ ಎಂದು ರಿಜಿಜು ತಿಳಿಸಿದರು.
 ದೇಶದಲ್ಲಿ ನ್ಯಾಯಾಂಗ ನೇಮಕಾತಿಗಳ ಪ್ರಕ್ರಿಯೆ ಕುರಿತು ಕೇಂದ್ರ ಸರಕಾರ ಹಾಗೂ ನ್ಯಾಯಾಂಗದ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವ ನಡುವೆಯೇ ರಿಜಿಜು ಅವರು ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.

ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿಯಲ್ಲಿ ನೂತನ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ನ್ಯಾಯಾಂಗವನ್ನು ನಿಯಂತ್ರಿಸಲು ಕೇಂದ್ರ ಸರಕಾರವು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

‘‘ಕಾರ್ಯಾಂಗ ಹಾಗೂ ನ್ಯಾಯಾಂಗಗಳ ನಡುವೆ ತಿಕ್ಕಾಟ ನಡೆದಿರುವುದನ್ನು ನೀವು ಕೇಳಿದ್ದೀರಿ. ಕೇಂದ್ರ ಸರಕಾರವು ನ್ಯಾಯಾಂಗವನ್ನು ತನ್ನ ಹಿಡಿತಕ್ಕೆ ಪಡೆಯಲು ಯತ್ನಿಸುತ್ತಿದೆಯೆಂಬ ಮಾತುಗಳನ್ನು ನೀವು ಕೇಳುತ್ತಿದ್ದೀರಿ. ಕೆಲವು ರಾಜಕೀಯ ಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡುತ್ತಿವೆ ಹಾಗೂ ಕೆಲವೊಮ್ಮೆ ಸುದ್ದಿವಾಹಿನಿಗಳು ತಮ್ಮ ಸುದ್ದಿಗಳಿಗೆ ಮಸಾಲೆ ಬೆರೆಸುವ ಉದ್ದೇಶದಿಂದ ಹೀಗೆ ಮಾಡುತ್ತವೆ. ಆದರೆ ಸಂವಿಧಾನವು ಅತ್ಯಂತ ಪವಿತ್ರ ಗ್ರಂಥವಾಗಿದೆ ಹಾಗೂದೇಶವು ಸಂವಿಧಾನದಿಂದ ನಡೆಯುತ್ತಿದೆ ಎಂದು ಪ್ರಧಾನಿ ಮೋದಿಯವರು ಯಾವತ್ತಿಗೂ ಹೇಳುತ್ತಲೇ ಬಂದಿದ್ದಾರೆ ಎಂದರು.
ಆದಾಗ್ಯೂ ನ್ಯಾಯಾಧೀಶರುಗಳು ಸಾರ್ವಜನಿಕರಿಗೆ ಉತ್ತರದಾಯಿಗಳಾಗಿದ್ದಾರೆ ಎಂದು ಅಭಿಪ್ರಾಯಿಸಿದರು. 

share
Next Story
X