Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಪಠಾಣ್' ಚಿತ್ರದ ಕೆಲವು ದೃಶ್ಯ, ಹಾಡಿನ...

'ಪಠಾಣ್' ಚಿತ್ರದ ಕೆಲವು ದೃಶ್ಯ, ಹಾಡಿನ ಸನ್ನಿವೇಶಗಳನ್ನು ಬದಲಿಸುವಂತೆ ಚಿತ್ರ ತಂಡಕ್ಕೆ ಸೂಚಿಸಿದ ಸೆನ್ಸಾರ್ ಮಂಡಳಿ

29 Dec 2022 1:02 PM IST
share
ಪಠಾಣ್ ಚಿತ್ರದ ಕೆಲವು ದೃಶ್ಯ, ಹಾಡಿನ ಸನ್ನಿವೇಶಗಳನ್ನು ಬದಲಿಸುವಂತೆ ಚಿತ್ರ ತಂಡಕ್ಕೆ ಸೂಚಿಸಿದ ಸೆನ್ಸಾರ್ ಮಂಡಳಿ

ಮುಂಬೈ: ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಜೋಡಿಯಾಗಿ ನಟಿಸಿರುವ 'ಪಠಾಣ್' (Pathaan) ಚಿತ್ರದಲ್ಲಿ ಹಾಡುಗಳು ಸೇರಿದಂತೆ ಕೆಲವು ದೃಶ್ಯಗಳನ್ನು ಬದಲಾಯಿಸಿ, ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸುವಂತೆ ಚಿತ್ರದ ನಿರ್ಮಾಪಕರಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (Censor Board) ಅಧ್ಯಕ್ಷ ಪ್ರಸೂನ್ ಜೋಶಿ ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಇತ್ತೀಚೆಗಷ್ಟೆ ಚಿತ್ರವು ಪ್ರಮಾಣೀಕರಣಕ್ಕಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಪರಿಶೀಲನಾ ಸಮಿತಿಗೆ ಸಲ್ಲಿಕೆಯಾಗಿ, ಮಂಡಳಿಯ ಮಾರ್ಗಸೂಚಿಯನ್ವಯ ಬಾಕಿ ಇರುವ ಮತ್ತು ಪೂರ್ಣ ಪ್ರಮಾಣದ ಪರಿಶೀಲನಾ ಪ್ರಕ್ರಿಯೆಗೊಳಗಾಗಿತ್ತು.

ಚಿತ್ರದ ಹಾಡುಗಳ ಪೈಕಿ 'ಬೇಷರಮ್ ರಂಗ್' ಹಾಡಿನಲ್ಲಿ ಕೇಸರಿ ಬಣ್ಣದ ಬಿಕಿನಿ ತೊಟ್ಟು ದೀಪಿಕಾ ಪಡುಕೋಣೆ ನೃತ್ಯ ಮಾಡಿರುವ ದೃಶ್ಯ ವಿವಾದಕ್ಕೆ ಕಾರಣವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಮಂಡಳಿಯ ಅಧ್ಯಕ್ಷ ಪ್ರಸೂನ್ ಜೋಶಿ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಮಾರ್ಗಸೂಚಿಯನ್ವಯ ಪಠಾಣ್ ಚಿತ್ರವು ಬಾಕಿ ಇರುವ ಮತ್ತು ಪೂರ್ಣ ಪ್ರಮಾಣದ ಪರಿಶೀಲನಾ ಪ್ರಕ್ರಿಯೆಗೆ ಒಳಗಾಗಿದೆ. ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಗೂ ಮುನ್ನ ಹಾಡುಗಳು ಸೇರಿದಂತೆ ಚಿತ್ರದಲ್ಲಿ ಸೂಚಿಸಿರುವ ಬದಲಾವಣೆಗಳೊಂದಿಗೆ ಪರಿಷ್ಕೃತ ಆವೃತ್ತಿಯನ್ನು ಪರಿಶೀಲನೆಗೆ ಸಲ್ಲಿಸುವಂತೆ ಚಿತ್ರದ ನಿರ್ಮಾಪಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

"ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಎಂದಿಗೂ ಸೃಜನಶೀಲ ಅಭಿವ್ಯಕ್ತಿ ಹಾಗೂ ಪ್ರೇಕ್ಷಕರ ಭಾವನೆಗಳೊಂದಿಗೆ ಸೂಕ್ತ ಸಮತೋಲನ ಕಾಯ್ದುಕೊಳ್ಳುವ ಬದ್ಧತೆ ಹೊಂದಿದೆ. ಎಲ್ಲ ಬಗೆಯ ಪಾಲುದಾರರೊಂದಿಗೆ ಅರ್ಥಪೂರ್ಣ ಮಾತುಕತೆ ಕೈಗೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯಿದೆ" ಎಂದು ಜೋಶಿ ಹೇಳಿದ್ದಾರೆ.

ಸಿದ್ಧಾರ್ಥ್ ಆನಂದ್ ನಿರ್ದೇಶಿಸಿರುವ 'ಪಠಾಣ್' ಚಲನಚಿತ್ರವು ಜನವರಿ 2023ರಲ್ಲಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರವನ್ನು ಹಿಂದಿ, ತಮಿಳು ಮತ್ತು ತೆಲುಗು ಅವತರಣಿಕೆಯಲ್ಲಿ ನಿರ್ಮಿಸಲಾಗಿದೆ.

share
Next Story
X