ಮಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
ಮಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ (ಡಾ.ಬಿ.ಆರ್.ಅಂಬೇಡ್ಕರ್ ಬರೆಹಗಳು ಮತ್ತು ಭಾಷಣಗಳು ಸಂಪುಟ 1 ರಿಂದ ಸಂಪುಟ 22 ಸೆಟ್ ಹೊರತು ಪಡಿಸಿ) ಪ್ರಕಟನೆಗಳನ್ನು ಗಣರಾಜ್ಯೋತ್ಸವ ಪ್ರಯುಕ್ತ 2023ರ ಜನವರಿ 1ರಿಂದ 31ರ ವರೆಗೆ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ.
ಆನ್ ಲೈನ್ ವೆಬ್ ಸೈಟ್ : www.kuvempubhashabharati.org ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





