Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್ ನಲ್ಲಿನ ಪ್ರಮುಖ ನೆರವು...

ಅಫ್ಘಾನ್ ನಲ್ಲಿನ ಪ್ರಮುಖ ನೆರವು ಯೋಜನೆಗಳು ಸ್ಥಗಿತ: ವಿಶ್ವಸಂಸ್ಥೆ

29 Dec 2022 11:23 PM IST
share
ಅಫ್ಘಾನ್ ನಲ್ಲಿನ  ಪ್ರಮುಖ ನೆರವು ಯೋಜನೆಗಳು ಸ್ಥಗಿತ: ವಿಶ್ವಸಂಸ್ಥೆ

ನ್ಯೂಯಾರ್ಕ್, ಡಿ.29: ಮಹಿಳೆಯರು ಎನ್ಜಿಒ(ಸರ್ಕಾರೇತರ ಸಂಘಟನೆ)ಗಳಲ್ಲಿ ಕೆಲಸ ಮಾಡುವುದನ್ನು ತಾಲಿಬಾನ್ ಆಡಳಿತ ನಿಷೇಧಿಸಿದ ಬಳಿಕ ಅಫ್ಘಾನ್ನಲ್ಲಿನ ಕೆಲವು ನಿರ್ಣಾಯಕ ನೆರವು ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಶ್ವಸಂಸ್ಥೆ ಬುಧವಾರ ಹೇಳಿದ್ದು ಇತರ ಕೆಲವು ಉಪಕ್ರಮಗಳನ್ನೂ ಸ್ಥಗಿತಗೊಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ನೆರವು ವಿತರಣೆ ಕಾರ್ಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಚರ್ಚೆಯ ವಿಷಯವೇ ಅಲ್ಲ ಮತ್ತು ಅವರ ಭಾಗವಹಿಸುವಿಕೆ ಮುಂದುವರಿಯಬೇಕು. ಆದ್ದರಿಂದ ತಾಲಿಬಾನ್ ಆಡಳಿತ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರ ಮತ್ತು ತುರ್ತುನೆರವು ಏಜೆನ್ಸಿಯ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಹಾಗೂ ಹಲವು ಅಂತರಾಷ್ಷ್ರೀಯ ನೆರವು ಸಂಸ್ಥೆಗಳ ಜಂಟಿ ಹೇಳಿಕೆ ಆಗ್ರಹಿಸಿದೆ.

ಮಾನವೀಯ ಕೆಲಸದಿಂದ ಮಹಿಳೆಯರನ್ನು ನಿಷೇಧಿಸುವುದು ಎಲ್ಲಾ ಅಫ್ಘನ್ನರಿಗೆ ತಕ್ಷಣದ ಮಾರಣಾಂತಿಕ ಪರಿಣಾಮಗಳನ್ನು ಹೊಂದಿದೆ. ಮಹಿಳಾ ಸಿಬಂದಿಗಳ ಕೊರತೆಯಿಂದ ಈಗಾಗಲೇ ಕೆಲವು `ತುರ್ತು ನಿರ್ಣಾಯಕ' ಕ್ರಮಗಳು ತಾತ್ಕಾಲಿಕ ಸ್ಥಗಿತಗೊಂಡಿದೆ. ಒಂದು ಮಾನವೀಯ ಸಮುದಾಯವಾಗಿ, ನಮಗೀಗ ಎದುರಾಗಿರುವ ಕಾರ್ಯಾಚರಣೆಯ ನಿರ್ಬಂಧಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ನಾವು ಜೀವ ಉಳಿಸುವ, ಸಮಯ ನಿರ್ಣಾಯಕ ಚಟುವಟಿಕೆಗಳನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ. ಆದರೆ ಮಹಿಳಾ ಸಹಾಯ ಕಾರ್ಯಕರ್ತರಿಲ್ಲದೆ ನಾವು ತತ್ವಬದ್ಧ ಮಾನವೀಯ ನೆರವನ್ನು ಒದಗಿಸಲು ಸಾಧ್ಯವಿಲ್ಲದ ಕಾರಣ ಹಲವು ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕಿದೆ.

ಯಾವುದೇ ದೇಶವು ತನ್ನ ಅರ್ಧದಷ್ಟು ಜನಸಂಖ್ಯೆಯನ್ನು ಸಮಾಜಕ್ಕೆ ಕೊಡುಗೆ ನೀಡುವುದರಿಂದ ಹೊರಗಿಡಲು ಸಾಧ್ಯವಿಲ್ಲ  ಎಂದು ಹೇಳಿಕೆ ತಿಳಿಸಿದೆ. ಯುನಿಸೆಫ್, ವಿಶ್ವ ಆಹಾರ ಕಾರ್ಯಕ್ರಮ, ವಿಶ್ವ ಆರೋಗ್ಯಸಂಸ್ಥೆ, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ, ನಿರಾಶ್ರಿತರು ಮತ್ತು ಮಾನವ ಹಕ್ಕುಗಳಿಗಾಗಿನ ವಿಶ್ವಸಂಸ್ಥೆ ಹೈಕಮಿಷನ್ ಮುಂತಾದ ಸಂಸ್ಥೆಗಳ ಮುಖ್ಯಸ್ಥರು ಹೇಳಿಕೆಗೆ ಸಹಿ ಹಾಕಿದ್ದಾರೆ.

ಅಫ್ಘಾನ್ನ ಮೇಲೆ ತಾಲಿಬಾನ್ ನಿಯಂತ್ರಣ ಸಾಧಿಸಿದ ಬಳಿಕ, ಬಾಲಕಿಯರು ಹೈಸ್ಕೂಲ್ಗೆ ಹೋಗುವುದನ್ನು  ಕಳೆದ ಮಾರ್ಚ್ನಲ್ಲಿ ನಿಷೇಧಿಸಲಾಗಿತ್ತು. ಕಳೆದ ವಾರ ಮಹಿಳೆಯರು ವಿವಿ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು. ಜತೆಗೆ, ವಿದೇಶದ ಸಂಸ್ಥೆಗಳು ಹಾಗೂ ಎನ್ಜಿಒಗಳಲ್ಲಿ ಮಹಿಳಾ ಸಹಾಯ ಕಾರ್ಯಕರ್ತರನ್ನು ನಿಷೇಧಿಸಲಾಗಿದೆ.

ಮಹಿಳಾ ಕಾರ್ಯಕರ್ತರಿಲ್ಲದೆ ನೆರವು ತಲುಪಿಸುವ ಕಾರ್ಯಕ್ರಮ ಸಾಧ್ಯವಿಲ್ಲದ ಕಾರಣ ಅಫ್ಘಾನ್ನಲ್ಲಿ ನೆರವು ವಿತರಿಸುವ ಕಾರ್ಯಕ್ರಮವನ್ನು ಅಮಾನತುಗೊಳಿಸುವುದಾಗಿ ವಿಶ್ವದ 4 ಪ್ರಮುಖ ನೆರವು ವಿತರಣಾ ಸಂಸ್ಥೆಗಳು ರವಿವಾರ ಘೋಷಿಸಿವೆ. `ಕ್ಷಾಮ ಪರಿಸ್ಥಿತಿ, ಆರ್ಥಿಕ ಕುಸಿತ, ಬೇರೂರಿರುವ ಬಡತನ ಮತ್ತು ಚಳಿಗಾಲದ ಸವಾಲು ದೇಶಕ್ಕೆ ಎದುರಾಗಿದ್ದು 28 ದಶಲಕ್ಷಕ್ಕೂ ಅಧಿಕ ಜನತೆ ಬದುಕುಳಿಯಲು ಸಹಾಯದ ಅಗತ್ಯವಿರುವ  ಸಮಯದಲ್ಲಿ ಮಹಿಳಾ ಕಾರ್ಯಕರ್ತರ ಮೇಲೆ ನಿಷೇಧ ಜಾರಿಯಾಗಿದೆ. 

ಸ್ವತಂತ್ರ, ತಾತ್ವಿಕ, ಜೀವರಕ್ಷಕ ಸಹಾಯವನ್ನು ಅಗತ್ಯವಿರುವ ಎಲ್ಲಾ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ತಲುಪಿಸುವ ನಮ್ಮ ಬದ್ಧತೆ ದೃಢವಾಗಿದೆ ಎಂದು ವಿಶ್ವಸಂಸ್ಥೆ ಹಾಗೂ ಇತರ ಪ್ರಮುಖ ಸಂಘಟನೆಗಳಾದ `ವರ್ಲ್ಡ್ ವಿಷನ್ ಇಂಟರ್ನ್ಯಾಷನಲ್, ಕ್ಯಾರ್ ಇಂಟರ್ನ್ಯಾಷನಲ್, ಸೇವ್ ದಿ ಚಿಲ್ಡ್ರನ್, ಮರ್ಸಿ ಕಾರ್ಪ್ಸ್' ಹೇಳಿಕೆ ನೀಡಿದೆ.

share
Next Story
X