ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಚಿವ ನಾಗೇಶ್ ಸಮ್ಮುಖದಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣ
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗುರುವಾರ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಸಮ್ಮುಖದಲ್ಲಿ ಬಲಪಂಥೀಯ ನಾಯಕ ದಾಮೋದರ್ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಲಾಗಿದೆ.
ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ರನ್ನು ಇರಿಸಲಾಗಿತ್ತು, ಅದರ ನೆನಪಿನಲ್ಲಿ ಜೈಲಿನಲ್ಲಿ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಲು ಹಿಂದುತ್ವ ಸಂಘಟನೆಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಾವರ್ಕರ್ ರನ್ನು ಏಪ್ರಿಲ್ 4 ರಿಂದ 13 ಜುಲೈ 1950 ರ ನಡುವೆ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಬೆಳಗಾವಿಯ ಹಿಂಡಲಗ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. pic.twitter.com/fgC7Nyo9fH
— B.C Nagesh (@BCNagesh_bjp) December 29, 2022
Next Story