ಸಾರಿಗೆ ನೌಕರರು ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ಆದೇಶ

ಬೆಂಗಳೂರು: ಕೆಎಸ್ಸಾರ್ಟಿಸಿ (KSRTC) ನೌಕರರು ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ಆದೇಶ ಹೊರಡಿಸಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ದಿನಾಂಕ ಜನವರಿ 1 ರಿಂದ ಜೂನ್ 30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
Next Story





