Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಟಲ್ ಸುರಂಗದ ಎರಡೂ ಬದಿ ಸಿಕ್ಕಿಹಾಕಿಕೊಂಡ...

ಅಟಲ್ ಸುರಂಗದ ಎರಡೂ ಬದಿ ಸಿಕ್ಕಿಹಾಕಿಕೊಂಡ ಸಾವಿರಾರು ಪ್ರವಾಸಿಗಳು: ಕಾರಣ ಏನು ಗೊತ್ತೇ?

30 Dec 2022 9:03 AM IST
share
ಅಟಲ್ ಸುರಂಗದ ಎರಡೂ ಬದಿ ಸಿಕ್ಕಿಹಾಕಿಕೊಂಡ ಸಾವಿರಾರು ಪ್ರವಾಸಿಗಳು: ಕಾರಣ ಏನು ಗೊತ್ತೇ?

ಮನಾಲಿ: ವ್ಯಾಪಕ ಹಿಮಪಾತದಿಂದ ರಸ್ತೆ ಮೇಲೆ ಹಿಮ ಶೇಖರಣೆಯಾಗಿ ರಸ್ತೆ ಜಾರುತ್ತಿದ್ದ ಹಿನ್ನೆಲೆಯಲ್ಲಿ ಅಟಲ್ ಸುರಂಗದ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ಪ್ರವಾಸಿಗಳನ್ನು ಕರೆದೊಯ್ಯುತ್ತಿದ್ದ ನೂರಾರು ವಾಹನಗಳು ಸಿಕ್ಕಿಹಾಕಿಕೊಂಡ ಘಟನೆ ಗುರುವಾರ ನಡೆದಿದೆ.

ವ್ಯಾಪಕ ಹಿಮಪಾತ ಮತ್ತು ದಟ್ಟ ಮಂಜನ್ನು ನೋಡುವ ಸಲುವಾಗಿ ಸಾವಿರಾರು ಪ್ರವಾಸಿಗರು ಅಟಲ್ ಸುರಂಗವನ್ನು ದಾಟಿದರು. ರಸ್ತೆಯ ಮೇಲ್ಮೈಯಲ್ಲಿ ಹಿಮ ಶೇಖರಣೆಯಾದ ಹಿನ್ನೆಲೆಯಲ್ಲಿ ವಾಹನಗಳು ಸ್ಕಿಡ್ ಆಗಲು ಆರಂಭವಾಯಿತು. ಸಂಜೆಯ ವೇಳೆಗೆ ವಾಹನಗಳನ್ನು ಚಲಾಯಿಸುವುದು ಕಷ್ಟಸಾಧ್ಯವಾಯಿತು. ಬಹುತೇಕ ಟ್ಯಾಕ್ಸಿ ಚಾಲಕರು ಸೇರಿದಂತೆ ಕೆಲ ವ್ಯಕ್ತಿಗಳು ಸುರಂಗ ಹಾಗೂ ಧುಂಡಿ ನಾಲಾ ನಡುವಿನ ತಿರುವುಗಳನ್ನು ಕಷ್ಟದಿಂದ ದಾಟಿದರೆ, ನೂರಾರು ವಾಹನಗಳು ಸಿಕ್ಕಿಹಾಕಿಕೊಂಡು ವಾಹನ ದಟ್ಟಣೆಗೆ ಕಾರಣವಾಯಿತು.

ಅಟಲ್ ಸುರಂಗದ ಕಡೆಗೆ ತೆರಳುವ ವಾಹನಗಳನ್ನು ಅಧಿಕಾರಿಗಳು ತಡೆದರೂ, ಅದು ತೀರಾ ವಿಳಂಬವಾಯಿತು. ಹಲುಲ್-ಸ್ಪಿಟಿ ಪೊಲೀಸರು ವಾಹನಗಳನ್ನು ಲಹೂಲ್‌ನಿಂದ ಮನಾಲಿ ಕಡೆಗೆ ಕಳುಹಿಸಿದರು. ಆದರೆ ಅಟಲ್ ಸುರಂಗದ ದಕ್ಷಿಣ ತುದಿಯಲ್ಲಿ ವಾಹನ ದಟ್ಟಣೆಯಿಂದಾಗಿ ಅವು ಸಂಚರಿಸಲು ಸಾಧ್ಯವಾಗಲಿಲ್ಲ. ವಾಹನಗಳು ಪರಸ್ಪರ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಒಂದೊಂದೇ ವಾಹನಗಳನ್ನು ಸರದಿಯಲ್ಲಿ ಬಿಡಲಾಯಿತು.

ರಾತ್ರಿ 8.45ರ ವೇಳೆಗೆ 100ಕ್ಕೂ ಹೆಚ್ಚು ವಾಹನಗಳು ಉತ್ತರ ತುದಿಯಲ್ಲಿ ಸಿಲುಕಿ ಹಾಕಿಕೊಂಡಿವೆ ಎಂದು ಎಸ್ಪಿ ಮಾನವ್ ವರ್ಮಾ ಹೇಳಿದ್ದಾರೆ. ರಾತ್ರಿ 9 ಗಂಟೆಯ ವೇಳೆಗೆ ಸುರಂಗ ಮತ್ತು ಧುಂಡಿ ನಾಲಾ ನಡುವೆ 250ಕ್ಕೂ ಹೆಚ್ಚು ವಾಹನಗಳು ಸಿಕ್ಕಿಹಾಕಿಕೊಂಡಿವೆ ಎಂದು ಮನಾಲಿ ಎಸ್‌ಡಿಎಂ ಸುಂದರ್ ಠಾಕೂರ್ ಹೇಳಿದ್ದಾರೆ.

share
Next Story
X