Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀರಾಮ, ಹನುಮಾನ್‌ ಮೇಲಿನ ಭಕ್ತಿ...

ಶ್ರೀರಾಮ, ಹನುಮಾನ್‌ ಮೇಲಿನ ಭಕ್ತಿ ಬಿಜೆಪಿ ಪಕ್ಷಕ್ಕೆ ಮಾತ್ರ ಇರುವ ಹಕ್ಕುಸ್ವಾಮ್ಯವೇನಲ್ಲ: ಕಿಡಿಕಾರಿದ ಉಮಾ ಭಾರತಿ

30 Dec 2022 4:32 PM IST
share
ಶ್ರೀರಾಮ, ಹನುಮಾನ್‌ ಮೇಲಿನ ಭಕ್ತಿ ಬಿಜೆಪಿ ಪಕ್ಷಕ್ಕೆ ಮಾತ್ರ ಇರುವ ಹಕ್ಕುಸ್ವಾಮ್ಯವೇನಲ್ಲ: ಕಿಡಿಕಾರಿದ ಉಮಾ ಭಾರತಿ

ಭೋಪಾಲ್:‌ ಸುತ್ತಲೂ ನೋಡಿ ನಂತರ ಯಾವ ಪಕ್ಷಕ್ಕೆ ಮತ ನೀಡಬೇಕೆಂದು ನಿರ್ಧರಿಸಬೇಕೆಂದು ಪಕ್ಷ ಕಾರ್ಯಕರ್ತರಿಗೆ ಹೇಳಿದ ಮರುದಿನವೇ ಹಿರಿಯ ನಾಯಕಿ ಉಮಾ ಭಾರತಿ ತಮ್ಮ ಇನ್ನೊಂದು ಹೇಳಿಕೆಯಿಂದ ಪಕ್ಷ ನಾಯಕತ್ವಕ್ಕೆ ತಲೆನೋವು ತಂದಿದ್ದಾರೆ.

ಶ್ರೀ ರಾಮ  ಮತ್ತು ಹನುಮಾನ್‌ ಮೇಲೆ ಭಕ್ತಿ ಹೊಂದುವುದು ಬಿಜೆಪಿಯ ಹಕ್ಕುಸ್ವಾಮ್ಯವಲ್ಲ ಎಂದು ಉಮಾ ಭಾರತಿ ಹೇಳಿದ್ದಾರೆ. ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ ನಾಥ್‌ ತಮ್ಮ ತವರು ರಾಜ್ಯದಲ್ಲಿ ಹನುಮಾನ್‌ ದೇವಳ ನಿರ್ಮಿಸುತ್ತಿರುವ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಉಮಾ ಭಾರತಿ ಮೇಲಿನಂತೆ ಹೇಳಿದ್ದಾರೆ.

ಬಿಜೆಪಿ ತನ್ನನ್ನು ಬದಿಗೆ ಸರಿಸುತ್ತಿದೆ ಎಂದು ಪಕ್ಷದ ಕುರಿತು ಈಗಾಗಲೇ ಬಹಳಷ್ಟು ಅಸಮಾಧಾನ ಹೊಂದಿರುವ ಉಮಾ ಭಾರತಿ, ಪಕ್ಷದ ಸಂಸದೆ ಪ್ರಜ್ಞಾ ಸಿಂಗ್‌ ಠಾಕುರ್‌, ಹಿಂದುಗಳಿಗೆ ಮನೆಗಳಲ್ಲಿ ಶಸ್ತ್ರ ಇರಿಸಲು ಕರೆ ನೀಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

"ವನವಾಸದ ವೇಳೆಯೂ ಶಸ್ತ್ರತ್ಯಾಗ ನಡೆಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ಶ್ರೀರಾಮ ಕೂಡ ಮಾಡಿದ್ದ," ಎಂದು ಹೇಳಿದ ಉಮಾ ಭಾರತಿ, ಶಸ್ತ್ರ ಹೊಂದುವುದು ತಪ್ಪಲ್ಲ ಆದರೆ ಹಿಂಸಾತ್ಮಕ ಚಿಂತನೆಗಳನ್ನು ಹೊಂದುವುದು ತಪ್ಪು," ಎಂದರು.

ಪ್ರಜ್ಞಾ ಠಾಕುರ್‌ ತಮ್ಮ ವಿವಾದಾತ್ಮಕ ಹೇಳಿಕೆ ನೀಡಿದ್ದ ಛಿಂದ್ವಾರಾದಲ್ಲಿ ಉಮಾ ಭಾರತಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದರು.

ಪಠಾಣ್‌ ವಿವಾದದ ಕುರಿತು ಪ್ರತಿಕ್ರಿಯಿಸಿದ ಉಮಾ ಭಾರತಿ, "ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ದೃಶ್ಯಗಳನ್ನು ತೆಗೆದುಹಾಕಬೇಕು, ಯಾವುದೇ ಬಣ್ಣಕ್ಕೆ ಅವಮಾನವನ್ನು ಭಾರತ ಸಹಿಸುವುದಿಲ್ಲ., ಕೇಸರಿ ಭಾರತೀಯ ಸಂಸ್ಕೃತಿಯ ಅಸ್ಮಿತೆಯಾಗಿದೆ, ಆಕ್ಷೇಪಾರ್ಹ ದೃಶ್ಯಗಳನ್ನು ಸೆನ್ಸಾರ್‌ ಮಂಡಳಿ ತಕ್ಷಣ ತೆಗೆದುಹಾಕಬೇಕು," ಎಂದರು.

share
Next Story
X