Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಜ.2ರಂದು ಅಡಕೆ ಬೆಳೆಯ ಬಗ್ಗೆ...

ಪುತ್ತೂರು: ಜ.2ರಂದು ಅಡಕೆ ಬೆಳೆಯ ಬಗ್ಗೆ ರಾಜ್ಯ ಗೃಹ ಸಚಿವ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕ ಪ್ರತಿಭಟನೆ

30 Dec 2022 6:32 PM IST
share

ಪುತ್ತೂರು: ಅಡಕೆ ಬೆಳೆಗೆ ಮುಂದಿನ ದಿನಗಳಲ್ಲಿ ಭವಿಷ್ಯವಿಲ್ಲ. ಈ ನಿಟ್ಟಿನಲ್ಲಿ ಅಡಕೆ ಬೆಳೆಗಾರರು ಪರ್ಯಾಯ ಬೆಳೆಯತ್ತ ಗಮನ ಹರಿಸಬೇಕು ಎಂದು ರಾಜ್ಯ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಬಾಲಿಷವಾದ ಹೇಳಿಕೆಯನ್ನು ನೀಡಿದ್ದು, ಇದರಿಂದಾಗಿ ಅಡಕೆ ಬೆಳೆಗಾರರ ಆತ್ಮಸ್ಥೈರ್ಯ ಕುಸಿಯುವಂತಾಗಿದೆ. ಗೃಹ ಸಚಿವರ ಈ ಹೇಳಿಕೆಯನ್ನು ಖಂಡಿಸಿ ಹಾಗೂ ಅಡಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಜ.2ರಂದು ಪುತ್ತೂರಿನ ಅಮರ್ ಜವಾನ್ ವೃತ್ತದ ಬಳಿ ಕಾಂಗ್ರೆಸ್ ಕಿಸಾನ್ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ. 

ಅವರು ಶುಕ್ರವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಡಕೆ ಬೆಳೆಗೆ ಭವಿಷ್ಯವಿಲ್ಲ  ಎಂಬ ಹೇಳಿಕೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆ ಆಮದು ವಿಚಾರದಲ್ಲಿ ಯಾವುದೇ ಮಾತುಗಳನ್ನಾಡದೆ ನುಣುಚಿಕೊಂಡಿದ್ದಾರೆ. ಇದು ಸರ್ಕಾರದ ರೈತ ವಿರೋಧಿ ನಿಲುವನ್ನು ತಿಳಿಸುತ್ತದೆ. ಕರಾವಳಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಅಡಕೆ ಬೆಳೆಯನ್ನು ಬೆಳೆಸಲಾಗುತ್ತಿದೆ. ಸುಮಾರು 2ಕೋಟಿಗೂ ಅಧಿಕ ಮಂದಿ ಅಡಕೆಯನ್ನು ನಂಬಿಕೊಂಡು ಬದುಕುತ್ತಿದ್ದಾರೆ. ಈ ಬಗ್ಗೆ ಕಾಳಜಿಯೇ ಇಲ್ಲದ ಬಿಜೆಪಿ ನೇತೃತ್ವದ ಸರ್ಕಾರವು ಭೂತಾನ್, ವಿಯೆಟ್ನಾಂ, ಬರ್ಮಾದಿಂದ ಅಡಕೆ ಆಮದು ಮಾಡುತ್ತಿದೆ. ಪ್ರಸ್ತುತ 17 ಸಾವಿರ ಟನ್ ಅಡಕೆ ಆಮದು ಮಾಡಿಕೊಳ್ಳಲಾಗಿದೆ. ಸರ್ಕಾರವು ಆಮದು ನಿರ್ಬಂದ ನೀತಿಯನ್ನು ತೆಗೆದು ಮುಕ್ತ ಮಾಡುಕಟ್ಟೆ ಮಾಡಿರುವುದರಿಂದ ನಮ್ಮಲ್ಲಿ ಅಡಕೆಯ ಧಾರಣೆ ಮತ್ತು ಬೇಡಿಕೆ ಕುಸಿತವಾಗುತ್ತಿದೆ. ಅಲ್ಲದೆ ಅಡಕೆಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗ ಕಾಡುತ್ತಿದೆ. ಸರ್ಕಾರ ಅದಕ್ಕೆ ಸಮರ್ಪಕ ಪರಿಹಾರವನ್ನು ಒದಗಿಸುತ್ತಿಲ್ಲ. ಬದಲಿಗೆ ಅಡಕೆಯ ಬಗ್ಗೆ ಬಾಲಿಷ ಹೇಳಿಕೆ ನೀಡುತ್ತಾ ರೈತರನ್ನು ಇನ್ನಷ್ಟು ಕಂಗೆಡುವಂತೆ ಮಾಡುತ್ತಿದೆ ಎಂದು ಆರೋಪಿಸಿದರು. 

ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿದ್ದಲ್ಲಿ ತಕ್ಷಣವೇ ಆಮದು ನಿರ್ಬಂದ ನೀತಿಯನ್ನು ಪಾಲಿಸಬೇಕು. ಅಡಕೆ ಅಕ್ರಮ ಆಮದುಗಳನ್ನು ನಿಯಂತ್ರಿಸಬೇಕು ಮತ್ತು ಅಡಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

 ಜಾಗದ ಪಹಣಿ ಪತ್ರವು ಹೆಚ್ಚಾಗಿ ರೈತರಿಗೆ ಬಳಕೆಯಾಗುತ್ತಿದೆ. ಸರ್ಕಾರವು ಇದೀಗ ಪಹಣಿ ಪತ್ರದ ದರವನ್ನು ಹೆಚ್ಚು ಮಾಡಿದೆ. ಒಂದು ಪಹಣಿ ಪತ್ರಕ್ಕೆ ಹಿಂದೆ ರೂ. 10 ಇತ್ತು. ಇದೀಗ ಅದನ್ನು ರೂ. 25ಕ್ಕೆ ಏರಿಸಲಾಗಿದೆ. ಈ ಮೂಲಕ ಸರ್ಕಾರ ರೈತರ ಹಗಲು ದರೋಡೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. 

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ ಕೆಮ್ಮಾರ, ಉಪಾಧ್ಯಕ್ಷ ರವೀಂದ್ರನಾಥ ರೈ ನೆಕ್ಕಿಲು, ಕಾರ್ಯದರ್ಶಿ ವಿಕ್ರಂ ರೈ ಸಾಂತ್ಯ ಮತ್ತು ಹಬೀಬ್ ಕಣ್ಣೂರು ಉಪಸ್ಥಿತರಿದ್ದರು. 

share
Next Story
X